ಮೊದಲ ಜಯದ ತವಕದಲ್ಲಿ ಚೆನ್ನೈ-ಹೈದರಾಬಾದ್: ಟಾಸ್ ಗೆದ್ದ ಎಸ್ಆರ್ ಎಚ್
Team Udayavani, Apr 9, 2022, 3:04 PM IST
ಮುಂಬೈ: ಆಡಿದ ಎಲ್ಲಾ ಪಂದ್ಯಗಳಲ್ಲಿ ಸೋಲು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಮುಖಾಮುಖಿಯಾಗುತ್ತಿದೆ. ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಎಸ್ಆರ್ ಎಚ್ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದೆ.
ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಕೂಟದಲ್ಲಿ ಆಘಾತಕಾರಿ ಆರಂಭ ಪಡೆದಿದೆ. ಆಡಿದ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ನೂತನ ನಾಯಕ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಮೊದಲ ಜಯದ ಹುಡುಕಾಟದಲ್ಲಿದೆ ಸಿಎಸ್ ಕೆ ತಂಡ.
ಮತ್ತೊಂದೆಡೆ ಕಳೆದ ವರ್ಷದ ಕಳಪೆ ಫಾರ್ಮ್ ನಿಂದ ಹೈದರಾಬಾದ್ ತಂಡ ಇನ್ನೂ ಹೊರಬಂದಿಲ್ಲ. ರಾಜಸ್ಥಾನ ರಾಯಲ್ಸ್ ಮತ್ತು ಲಕ್ನೋ ವಿರುದ್ಧ ಮೊದಲೆರಡು ಪಂದ್ಯಗಳಲ್ಲಿ ಕೇನ್ ವಿಲಿಯಮ್ಸನ್ ಪಡೆ ಸೋಲನುಭವಿಸಿದೆ.
ಇದನ್ನೂ ಓದಿ:‘ಟಾಟಾ ನಿಯೋ’ ಆ್ಯಪ್ ಬಿಡುಗಡೆ; ಏನಿದರ ವಿಶೇಷತೆ?
ಹೈದರಾಬಾದ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಶಶಾಂಕ್ ಸಿಂಗ್ ಮತ್ತು ಮಾಕ್ರೋ ಜೆನ್ಸನ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಚೆನ್ನೈ ತಂಡದಲ್ಲಿ ಪ್ರಿಟೋರಿಯಸ್ ಪರ ಮಹೇಶ್ ತೀಕ್ಷಣ ಸ್ಥಾನ ಪಡೆದಿದ್ದಾರೆ.
ತಂಡಗಳು
ಚೆನ್ನೈ: ರಾಬಿನ್ ಉತ್ತಪ್ಪ, ಋತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಶಿವಂ ದುಬೆ, ಎಂಎಸ್ ಧೋನಿ, ಡ್ವೇನ್ ಬ್ರಾವೊ, ಕ್ರಿಸ್ ಜೋರ್ಡಾನ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ
ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..