ಡೆಲ್ಲಿ-ಮುಂಬೈ ಮುಖಾಮುಖಿ; ಆರ್‌ಸಿಬಿ ಭವಿಷ್ಯ ನಿರ್ಧರಿಸಲಿದೆ

ಮುಂಬೈ ಗೆದ್ದರಷ್ಟೇ ಆರ್‌ಸಿಬಿಗೆ ಪ್ಲೇ ಆಫ್ ಟಿಕೆಟ್‌ ಅವಕಾಶದ ನಿರೀಕ್ಷೆಯಲ್ಲಿ ಅರ್ಜುನ್‌ ತೆಂಡುಲ್ಕರ್‌

Team Udayavani, May 21, 2022, 7:00 AM IST

ಡೆಲ್ಲಿ-ಮುಂಬೈ ಮುಖಾಮುಖಿ; ಆರ್‌ಸಿಬಿ ಭವಿಷ್ಯ ನಿರ್ಧರಿಸಲಿದೆ

ಮುಂಬಯಿ: ಪ್ಲೇ ಆಫ್ ಪ್ರವೇಶಿಸಲಿರುವ 4ನೇ ತಂಡ ಯಾವುದು? ಡೆಲ್ಲಿಯೋ, ಆರ್‌ಸಿಬಿಯೋ? ಕ್ರಿಕೆಟ್‌ ಅಭಿ ಮಾನಿಗಳ ಈ ಕೌತುಕಕ್ಕೆ ಶನಿವಾರ ರಾತ್ರಿ ತೆರೆ ಬೀಳಲಿದೆ. ಇದಕ್ಕೆ ಸಾಕ್ಷಿಯಾಗಲಿರುವುದು ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ನಿರ್ಣಾಯಕ ಮುಖಾಮುಖಿ.

ಗುಜರಾತ್‌ ಟೈಟಾನ್ಸ್‌ಗೆ ಸೋಲುಣಿಸುವ ಮೂಲಕ ಆರ್‌ಸಿಬಿ 4ನೇ ಸ್ಥಾನಕ್ಕೆ ನೆಗೆದಿದ್ದು, 16 ಅಂಕಗಳೊಂದಿಗೆ ಪ್ಲೇ ಆಫ್ನತ್ತ ಮುಖ ಮಾಡಿದೆ. ಡೆಲ್ಲಿ 14 ಅಂಕ ಹೊಂದಿದ್ದು, ಮುಂಬೈಯನ್ನು ಸಣ್ಣ ಅಂತರದಿಂದ ಮಣಿಸಿದರೂ ಮುಂದಿನ ಸುತ್ತು ಪ್ರವೇಶಿಸಲಿದೆ.

ಕಾರಣ, ಡೆಲ್ಲಿಯ ರನ್‌ರೇಟ್‌. ಅದು ಆರ್‌ಸಿಬಿಗಿಂತ ಬಹಳ ಮೇಲಿದೆ. ಮುಂಬೈ ಗೆದ್ದರಷ್ಟೇ ಬೆಂಗ ಳೂರು ಫ್ರಾಂಚೈಸಿಗೆ ಪ್ಲೇ ಆಫ್ ಟಿಕೆಟ್‌ ಸಿಗಲಿದೆ ಎಂಬುದು ಅಂತಿಮ ಲೆಕ್ಕಾಚಾರ. ಆರ್‌ಸಿಬಿ ಅಭಿಮಾನಿಗಳೆಲ್ಲ ಈಗ ಮುಂಬೈ ಗೆಲುವನ್ನು, ಡೆಲ್ಲಿ ಸೋಲನ್ನು ಹಾರೈಸಿ ಕುಳಿತಿದ್ದಾರೆ!

ಇದರ ಬಳಿಕ ರವಿವಾರ ಹೈದರಾ ಬಾದ್‌-ಪಂಜಾಬ್‌ ನಡುವೆ ಅಂತಿಮ ಲೀಗ್‌ ಹಣಾಹಣಿ ನಡೆಯಲಿದೆ. ಇದೊಂದು ಲೆಕ್ಕದ ಭರ್ತಿಯ ಪಂದ್ಯ. ಗುಜರಾತ್‌ ವಿರುದ್ಧ ಆರ್‌ಸಿಬಿ ಸಾಧಿಸಿದ ಗೆಲುವಿನ ಬಳಿಕ ಈ ತಂಡಗಳೆರಡೂ ಕೂಟ ದಿಂದ ಹೊರಬಿದ್ದಿವೆ. ಹೀಗಾಗಿ ಮುಂಬೈ-ಡೆಲ್ಲಿ ಪಂದ್ಯಕ್ಕೆ “ವರ್ಚುವಲ್‌ ಕ್ವಾರ್ಟರ್‌ ಫೈನಲ್‌’ ಮಹತ್ವ ಲಭಿಸಿದೆ.

ಮುಂಬೈ-ಡೆಲ್ಲಿ ಪ್ರಸಕ್ತ ಋತುವಿನಲ್ಲಿ ಮುಖಾಮುಖಿ ಆಗುತ್ತಿರುವುದು ಇದೇ ಮೊದಲು. ಈ ಕಾರಣಕ್ಕಾಗಿಯೂ ಪಂದ್ಯದ ಕುತೂ ಹಲ ಹೆಚ್ಚಿದೆ. ಇನ್ನೊಂದು ಸಂಗತಿ ಯೆಂದರೆ, ಈ ಪಂದ್ಯದ ಮೂಲಕ ವಾದರೂ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಪದಾರ್ಪಣೆ ಮಾಡಿ ಯಾರೇ ಎಂಬುದು. ಎರಡು ಋತುಗಳ 27 ಪಂದ್ಯಗಳಲ್ಲಿ ಜೂನಿಯರ್‌ ತೆಂಡುಲ್ಕರ್‌ಗೆ ಆಡುವ ಅವಕಾಶ ಲಭಿಸಿಲ್ಲ. ಹಾಗೆಯೇ ಕೆಲವು ಹೊಸ ಮುಖಗಳನ್ನು ಆಡಿಸುವ ಸಾಧ್ಯತೆಯೂ ಇಲ್ಲದಿಲ್ಲ. ಈವರೆಗಿನ 13 ಲೀಗ್‌ ಪಂದ್ಯಗಳಲ್ಲಿ ಮುಂಬೈ 22 ಆಟಗಾರರನ್ನು ಆಡಿಸಿದ್ದು, ಬಹಳಷ್ಟು ಮಂದಿ ಕಾಯುತ್ತಿದ್ದಾರೆ.

ಡೆಲ್ಲಿಗೆ ಗೆಲುವು ಅನಿವಾರ್ಯ
ಸದ್ಯ 5ನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್‌ ಕೂಡ ಈ ಸೀಸನ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫ‌ಲವಾಗಿದೆ. 13 ಪಂದ್ಯಗಳಲ್ಲಿ ಏಳನ್ನಷ್ಟೇ ಜಯಿಸಿದೆ. ಇನ್ನೇನು ಹೊರ ಬೀಳಲಿದೆ ಎಂಬ ಹಂತದಲ್ಲಿ ಮೊದಲ ಸಲ ಸತತ 2 ಪಂದ್ಯಗಳನ್ನು ಗೆದ್ದಿದೆ. ಹಿಂದಿನೆರಡು ಪಂದ್ಯಗಳಲ್ಲಿ ರಾಜಸ್ಥಾನ್‌ ಮತ್ತು ಪಂಜಾಬ್‌ ವಿರುದ್ಧ 8 ವಿಕೆಟ್‌ ಹಾಗೂ 17 ರನ್ನುಗಳಿಂದ ಗೆದ್ದು ಪ್ಲೇ ಆಫ್ಗೆ ಹತ್ತಿರವಾಗಿದೆ. ಹ್ಯಾಟ್ರಿಕ್‌ ಗೆಲುವು ಸಾಧಿಸಬೇಕಾದರೆ ಅದು ಸಾಮರ್ಥ್ಯಕ್ಕೂ ಮಿಗಿಲಾದ ಪ್ರದರ್ಶನ ನೀಡಬೇಕಾಗುತ್ತದೆ.

ಡೆಲ್ಲಿ ಬ್ಯಾಟಿಂಗ್‌ ಸರದಿಯಲ್ಲಿ ಮಿಂಚಿದ ಪ್ರಮುಖನೆಂದರೆ ಆರಂಭ ಕಾರ ಡೇವಿಡ್‌ ವಾರ್ನರ್‌. ಅವರು 427 ರನ್‌ ಹೊಡೆದಿದ್ದಾರೆ. ಆದರೆ ಹಿಂದಿನ ಪಂದ್ಯದಲ್ಲಿ ಗೋಲ್ಡನ್‌ ಡಕ್‌ ಸಂಕಟಕ್ಕೆ ಸಿಲುಕಿದ್ದಾರೆ. ಇವರ ಜತೆಗಾರ ಯಾರು ಎಂಬ ಪ್ರಶ್ನೆ ಇದೆ. ಪೃಥ್ವಿ ಶಾ ಅನಾರೋಗ್ಯದಿಂದ ಚೇತರಿಸಿಕೊಂಡರೂ ಇನ್ನೂ ಆಡ ಲಿಳಿದಿಲ್ಲ. ಈ ನಡುವೆ ಇನ್ನಿಂಗ್ಸ್‌ ಆರಂಭಿಸಿದ ಶ್ರೀಕರ್‌ ಭರತ್‌, ಮನ್‌ದೀಪ್‌ ಸಿಂಗ್‌ ವಿಫ‌ಲರಾಗಿದ್ದಾರೆ. ಕಳೆದ ಪಂದ್ಯದಲ್ಲಿ ಇನ್ನಿಂಗ್ಸ್‌ ಆರಂಭಿಸಿದ ಸಫ‌ìರಾಜ್‌ ಖಾನ್‌ 32 ರನ್‌ ಮಾಡಿದರೂ ವಾರ್ನರ್‌ ಸೊನ್ನೆ ಸುತ್ತಿದರು.

ಆಸ್ಟ್ರೇಲಿಯದ ಮತ್ತೋರ್ವ ಆಟಗಾರ ಮಿಚೆಲ್‌ ಮಾರ್ಷ್‌ ಕೂಡ ಉತ್ತಮ ಲಯದಲ್ಲಿದ್ದಾರೆ (257 ರನ್‌). ವಿಕೆಟ್‌ ಕೂಡ ಕೀಳಬಲ್ಲರು. ನಾಯಕ ರಿಷಭ್‌ ಪಂತ್‌ (301 ರನ್‌), ರೋವ¾ನ್‌ ಪೊವೆಲ್‌ (207 ರನ್‌) ನಿರ್ಣಾಯಕ ಪಂದ್ಯದಲ್ಲಿ ಸಿಡಿದು ನಿಲ್ಲಬೇಕಿದೆ.

ಬೌಲಿಂಗ್‌ ಹೀರೋಗಳೆಂದರೆ ಕುಲದೀಪ್‌ ಯಾದವ್‌ (20 ವಿಕೆಟ್‌), ಖಲೀಲ್‌ ಅಹ್ಮದ್‌ (16 ವಿಕೆಟ್‌) ಮತ್ತು ಶಾರ್ದೂಲ್ ಠಾಕೂರ್ (13 ವಿಕೆಟ್‌). ಮುಸ್ತಫಿಜುರ್‌, ಅಕ್ಷರ್‌ ಪಟೇಲ್‌, ಲಲಿತ್‌ ಯಾದವ್‌ ವಿಕೆಟ್‌ ಬೇಟೆಯಲ್ಲಿ ಅಷ್ಟೇನೂ ಕ್ಲಿಕ್‌ ಆಗಿಲ್ಲ. ಆದರೆ ಎದು ರಾಳಿ  ಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ.

ಮುಂಬೈಗೆ ಒತ್ತಡವೇನಿಲ್ಲ…
5 ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಈ ಬಾರಿ ಗೆಲುವಿನ ಖಾತೆ ತೆರೆದದ್ದೇ 9ನೇ ಪಂದ್ಯದಲ್ಲಿ. ಹರಾಜು ವೇಳೆ ಮಾಡಿಕೊಂಡ ಕೆಲವು ಎಡವಟ್ಟಿನಿಂದಾಗಿ ರೋಹಿತ್‌ ಪಡೆಗೆ ಈ ಸ್ಥಿತಿ ಎದುರಾಗಿದೆ ಎಂಬುದು ರಹಸ್ಯವೇನಲ್ಲ. ಅದೇನೇ ಇದ್ದರೂ ಮುಂಬೈ ಯಾವುದೇ ಒತ್ತಡವಿಲ್ಲದೆ ಡೆಲ್ಲಿಯನ್ನು ಎದುರಿಸಲಿದೆ ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಡೆಲ್ಲಿಗೆ ಇಲ್ಲಿ ಗೆಲ್ಲಲೇಬೇಕಾದ ಒತ್ತಡವಿದೆ. ಹೀಗಾಗಿ ಪಂತ್‌ ಪಡೆ ಸಾಮರ್ಥ್ಯಕ್ಕೂ ಮಿಗಿಲಾದ ಪ್ರದರ್ಶನ ನೀಡಬೇಕಾದುದು ಅನಿವಾರ್ಯ.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.