ಸಿರಾಜ್ ಉತ್ತಮ ಬೌಲರ್..: ಆರ್ ಸಿಬಿ ವೇಗಿಯ ಬೆಂಬಲಕ್ಕೆ ನಿಂತ ಮೈಕ್ ಹೆಸನ್


Team Udayavani, May 28, 2022, 11:25 AM IST

ಸಿರಾಜ್ ಉತ್ತಮ ಬೌಲರ್..: ಆರ್ ಸಿಬಿ ವೇಗಿಯ ಬೆಂಬಲಕ್ಕೆ ನಿಂತ ಮೈಕ್ ಹೆಸನ್

ಅಹಮದಾಬಾದ್: 2022ರ ಸಾಲಿನ ಐಪಿಎಲ್ ಕೂಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಯಾನ ಅಂತ್ಯವಾಗಿದೆ. ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಎಡವಿದ ಫಾಫ್ ಡು ಪ್ಲೆಸಿಸ್ ಪಡೆ ನಿರಾಶೆ ಅನುಭವಿಸಿದೆ. ನಾಯಕ ಬದಲಾದರೂ ಆರ್ ಸಿಬಿಯ ಕಪ್ ಗಾಗಿ ಕಾಯುವಿಕೆ ಮುಂದುವರಿದಿದೆ.

ತಂಡದ ಪ್ರಮುಖ ಬೌಲರ್ ಮೊಹಮ್ಮದ್ ಸಿರಾಜ್ ಈ ಬಾರಿ ದುಬಾರಿಯಾದರು. ಒಂದು ಸೀಸನ್ ನಲ್ಲಿ ಅತೀ ಹೆಚ್ಚು ಸಿಕ್ಸರ್ ಬಿಟ್ಟುಕೊಟ್ಟ ಅನಗತ್ಯ ದಾಖಲೆಗೂ ಸಿರಾಜ್ ಪಾತ್ರರಾಗಬೇಕಾಯಿತು.

ಆರ್‌ಸಿಬಿಯ ಅಂತಿಮ ಲೀಗ್ ಪಂದ್ಯಕ್ಕೆ ಕೈಬಿಡಲ್ಪಟ್ಟ ಸಿರಾಜ್, ಪ್ಲೇಆಫ್‌ನಲ್ಲಿ ಮತ್ತೆ ಸ್ಥಾನ ಪಡೆದರು. ಆದರೆ ತಂಡವು ತನ್ನ ಮೇಲೆ ತೋರಿಸಿದ ನಂಬಿಕೆಯನ್ನು ಉಳಿಸಿಕೊಳ್ಳಲು ಸಿರಾಜ್ ಗೆ ಸಾಧ್ಯವಾಗಲಿಲ್ಲ. ಎರಡು ಪ್ಲೇಆಫ್ ಪಂದ್ಯಗಳಲ್ಲಿ6 ಓವರ್ ಗಳಲ್ಲಿ 75 ರನ್ ಗಳನ್ನು ಬಿಟ್ಟುಕೊಟ್ಟು  ಕೇವಲ 1 ವಿಕೆಟ್ ಪಡೆದಿರುವುದು ಸಿರಾಜ್ ಸಾಧನೆ.

ಸಿರಾಜ್ ಬಗ್ಗೆ ಮಾತನಾಡಿದ ಆರ್ ಸಿಬಿ ಡೈರೆಕ್ಟರ್ ಮೈಕ್ ಹೆಸನ್, ಆರಂಭದಲ್ಲಿ ವಿಕೆಟ್ ಪಡೆಯದ ಕಾರಣ ಸಿರಾಜ್ ಆತ್ಮವಿಶ್ವಾಸ ಸ್ವಲ್ಪ ಕಡಿಮೆಯಾಗಿದೆ. ಆದರೆ ಆತ ಮಾನಸಿಕವಾಗಿ ಗಟ್ಟಿಗ, ಮುಂದಿನ ಬಾರಿ ಮಿಂಚಲಿದ್ದಾನೆ ಎಂದರು.

ಇದನ್ನೂ ಓದಿ:ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

“ಮೊಹಮ್ಮದ್ ಸಿರಾಜ್ ಉತ್ತಮ ಬೌಲರ್, ಅವರು ಈ ಬಾರಿ ಅತ್ಯುತ್ತಮ ಪ್ರದರ್ಶನ ತೋರಲಿಲ್ಲ, ಆದರೆ ಅವರು ಬಲಿಷ್ಠರಾಗಿ ಹಿಂತಿರುಗುತ್ತಾರೆ ಎಂದು ನಮಗೆ ತಿಳಿದಿದೆ” ಎಂದು ಹೆಸನ್ ಹೇಳಿದರು.

ಈ ಬಾರಿಯ ಕೂಟದಲ್ಲಿ 15 ಪಂದ್ಯಗಳಲ್ಲಿ ಸಿರಾಜ್ 9 ವಿಕೆಟ್ ಮಾತ್ರ ಪಡೆದಿದ್ದಾರೆ. ದುಬಾರಿ ಬೌಲಿಂಗ್ ಮಾಡಿದ ಸಿರಾಜ್ 10.08 ಎಕಾನಮಿಯಲ್ಲಿ ಬೌಲಿಂಗ್ ಎಸೆದಿದ್ದರು. 2021ರ ಕೂಟದಲ್ಲಿ ಅದ್ಭುತ ಬೌಲಿಂಗ್ ಮಾಡಿದ್ದ ಬಲಗೈ ವೇಗಿ 6.78ರ ಏಕಾನಮಿ ಹೊಂದಿದ್ದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.