ಪ್ಲೇ ಆಫ್ ಪೈಪೋಟಿಯಲ್ಲಿ ಉಳಿದುಕೊಂಡ ಡೆಲ್ಲಿ ಕ್ಯಾಪಿಟಲ್ಸ್‌

ಸಿಡಿದ ಮಿಚೆಲ್‌ ಮಾರ್ಷ್‌, ವಾರ್ನರ್‌: ರಾಜಸ್ಥಾನ್‌ ವಿರುದ್ಧ ಸುಲಭ ಜಯ

Team Udayavani, May 11, 2022, 11:31 PM IST

ಪ್ಲೇ ಆಫ್ ಪೈಪೋಟಿಯಲ್ಲಿ ಉಳಿದುಕೊಂಡ ಡೆಲ್ಲಿ ಕ್ಯಾಪಿಟಲ್ಸ್‌

ಮುಂಬೈ: ಪ್ಲೇಆಫ್ ಹಾದಿಯನ್ನು ಸುಗಮವಾಗಿಟ್ಟುಕೊಳ್ಳಬೇಕಾದರೆ ಗೆಲ್ಲಲೇಬೇಕಾಗಿದ್ದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಯಶಸ್ಸು ಸಾಧಿಸಿದೆ. ಮತ್ತೊಂದು ಕಡೆ ರಾಜಸ್ಥಾನ್‌ ರಾಯಲ್ಸ್‌ 8 ವಿಕೆಟ್‌ಗಳಿಂದ ಸೋತು ಹೋಗಿ ತನ್ನ ಹಾದಿಯನ್ನು ತುಸು ಕಠಿಣ ಮಾಡಿಕೊಂಡಿದೆ. ಆದರೆ ಚಿಂತಿಸುವ ಅಗತ್ಯವಿಲ್ಲ.

ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ ತಂಡವು ಬುಧವಾರದ ಐಪಿಎಲ್‌ ಪಂದ್ಯದಲ್ಲಿ 20 ಓವರ್‌ಗಳಲ್ಲಿ 6 ವಿಕೆಟಿಗೆ 160 ರನ್ನುಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು.ಇದನ್ನು ಬೆನ್ನತ್ತಿದ ಡೆಲ್ಲಿ ಕೇವಲ 18.1 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 161 ರನ್‌ ಗಳಿಸಿತು. ಡೆಲ್ಲಿ ಪರ ಮಿಚೆಲ್‌ ಮಾರ್ಷ್‌ (89 ರನ್‌, 62 ಎಸೆತ), ಡೇವಿಡ್‌ ವಾರ್ನರ್‌ (52 ರನ್‌, 41 ಎಸೆತ) ಸ್ಫೋಟಕ ಬ್ಯಾಟಿಂಗ್‌ ಮಾಡಿ ತಂಡವನ್ನು ಸುಲಭವಾಗಿ ಗೆಲ್ಲಿಸಿದರು.

ಅಶ್ವಿ‌ನ್‌ ಅರ್ಧಶತಕ: ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ಪರ ಒನ್‌ಡೌನ್‌ನಲ್ಲಿ ಬ್ಯಾಟಿಂಗ್‌ಗೆ ಬಂದ ಆರ್‌.ಅಶ್ವಿ‌ನ್‌ ಮಿಂಚಿದರು. ಆದರೆ ಆರಂಬಿಕರು ವೈಫ‌ಲ್ಯ ಅನುಭವಿಸಿದರು. ಈ ಐಪಿಎಲ್‌ನಲ್ಲಿ ಗರಿಷ್ಠ ರನ್‌ ಗಳಿಸಿರುವ ಜೋಸ್‌ ಬಟ್ಲರ್‌ 7 ರನ್ನಿಗೆ ಆಟ ಮುಗಿಸಿದರೆ ಈ ಹಿಂದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದ್ದ ಆರಂಭಿಕ ಯಶಸ್ವಿ ಜೈಸ್ವಾಲ್‌ ಇಲ್ಲಿ ವಿಫ‌ಲರಾದರು.

ಅಶ್ವಿ‌ನ್‌ ಮತ್ತು ದೇವದತ್ತ ಪಡಿಕ್ಕಲ್‌ ತಾಳ್ಮೆಯ ಆಟವಾಡಿ ತಂಡದ ಮೊತ್ತವನ್ನು ಏರಿಸುವ ಪ್ರಯತ್ನ ಮಾಡಿದರು. ತಂಡದ ಮೊತ್ತ ಶತಕ ದಾಟುತ್ತಲೇ 50 ರನ್‌ ಗಳಿಸಿದ್ದ ಅಶ್ವಿ‌ನ್‌ ಔಟಾದರು. 38 ಎಸೆತ ಎದುರಿಸಿದ ಅವರು 4 ಬೌಂಡರಿ ಮತ್ತು 2 ಸಿಕ್ಸರ್‌ ಬಾರಿಸಿದರು.

ಅಶ್ವಿ‌ನ್‌ ಔಟಾದ ಬಳಿಕ ತಂಡ ಮತ್ತೆ ಕುಸಿತಕ್ಕೆ ಒಳಗಾಯಿತು. ದೇವದತ್ತ ಪಡಿಕ್ಕಲ್‌ ಮಾತ್ರ ಸ್ವಲ್ಪಮಟ್ಟಿಗೆ ಡೆಲ್ಲಿ ದಾಳಿಯನ್ನು ಎದುರಿಸಲು ಶಕ್ತರಾದರು. ಪಡಿಕ್ಕಲ್‌ 30 ಎಸೆತಗಳಿಂದ 6 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ 48 ರನ್‌ ಗಳಿಸಿ ನೋರ್ಜೆ ಅವರಿಗೆ ವಿಕೆಟ್‌ ಒಪ್ಪಿಸಿದರು. ನಾಯಕ ಸಂಜು ಸ್ಯಾಮ್ಸನ್‌, ರಿಯಾನ್‌ ಪರಾಗ್‌ ಬ್ಯಾಟಿಂಗ್‌ನಲ್ಲಿ ಮತ್ತೆ ವೈಫ‌ಲ್ಯ ಅನುಭವಿಸಿದರು.

ಬಿಗುದಾಳಿ ಸಂಘಟಿಸಿದ ಚೇತನ್‌ ಸಕಾರಿಯ, ಆ್ಯನ್ರಿಚ್‌ ನೋರ್ಜೆ ಮತ್ತು ಮಿಚೆಲ್‌ ಮಾರ್ಷ್‌ ಅವರು ತಲಾ ಎರಡು ವಿಕೆಟ್‌ ಕಿತ್ತು ರಾಜಸ್ಥಾನದ ಕುಸಿತಕ್ಕೆ ಕಾರಣರಾದರು. ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್‌ ಯಾದವ್‌ ವಿಕೆಟ್‌ ಪಡೆಯದಿದ್ದರೂ ನಿಖರ ದಾಳಿ ಸಂಘಟಿಸಿದ್ದರು.

ಸಂಕ್ಷಿಪ್ತ ಸ್ಕೋರ್‌: ರಾಜಸ್ಥಾನ್‌ 20 ಓವರ್‌, 160/6 (ಆರ್‌.ಅಶ್ವಿ‌ನ್‌ 50, ದೇವದತ್ತ ಪಡಿಕ್ಕಲ್‌ 48, ಚೇತನ್‌ ಸಕಾರಿಯ 23ಕ್ಕೆ 2). ಡೆಲ್ಲಿ 18.1 ಓವರ್‌, 161/2 (ಮಿಚೆಲ್‌ ಮಾರ್ಷ್‌ 89, ಡೇವಿಡ್‌ ವಾರ್ನರ್‌ 52).

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.