ಮುರಳೀಧರನ್ ಗೆ ಹೃದಯ ಸಂಬಂಧಿ ಸಮಸ್ಯೆ: ಲಂಕಾ ಲೆಜೆಂಡ್ ಗೆ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ
Team Udayavani, Apr 19, 2021, 7:40 AM IST
ಚೆನ್ನೈ: ಶ್ರೀಲಂಕಾ ಕ್ರಿಕೆಟ್ ದಂತಕಥೆ, ಸನ್ ರೈಸರ್ಸ್ ತಂಡದ ಮೆಂಟರ್ ಮುತ್ತಯ್ಯ ಮುರಳೀಧರನ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರವಿವಾರ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರವಿವಾರ ರಾತ್ರಿಯೇ ಮರಳೀಧರನ್ ಗೆ ಆ್ಯಂಜಿಯೋಪ್ಲಾಸ್ಟಿ ನಡೆಸಲಾಗಿದೆ. ಸನ್ ರೈಸರ್ಸ್ ತಂಡದ ಸಹಾಯಕ ಬಳಗದಲ್ಲಿರುವ ಮುರಳೀಧರನ್ ತಂಡದೊಂದಿಗೆ ಚೆನ್ನೈನಲ್ಲಿದ್ದರು.
ಇದನ್ನೂ ಓದಿ:ಏಶ್ಯನ್ ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್: ಸ್ವರ್ಣ ಸಾಧನೆಗೈದ ಝಿಲ್ಲಿ ದಾಲಾ ಬೆಹರಾ
ಮಾರ್ಚ್ ಅಂತ್ಯದಲ್ಲಿಯೇ ಅವರಿಗೆ ಸಮಸ್ಯೆ ಕಾಣಿಸಿಕೊಂಡಿತ್ತು. ಚೆನ್ನೈನಲ್ಲಿ ಅವರು ಚಿಕಿತ್ಸೆ ಪಡೆಯಲು ನಿರ್ಧರಿಸಿದ್ದರು. ಅದರಂತೆ ಆ್ಯಂಜಿಯೋಪ್ಲಾಸ್ಟಿ ನಡೆಸಲಾಗಿತ್ತು. ಅವರೀಗ ಚೇತರಿಕೆಯಿಂದ ಇದ್ದಾರೆ ಎಂದು ಮೂಲಗಳು ತಿಳಿಸಿದೆ.
ವಿಶ್ವ ಕ್ರಿಕೆಟ್ ನ ಸ್ಪಿನ್ ದಂತಕಥೆಯಾಗಿರುವ ಲಂಕನ್ ಲೆಜೆಂಡ್ ಮುರಳೀಧರನ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ:ಪಂಜಾಬ್ ಕಿಂಗ್ಸ್ ಮೇಲೆ ಡೆಲ್ಲಿ ಸವಾರಿ : ಪಂಜಾಬ್ ವಿರುದ್ಧ ಡೆಲ್ಲಿಗೆ 6 ವಿಕೆಟ್ ಗಳ ಜಯ
2015ರಿಂದಲೂ ಮುರಳೀಧರನ್ ಅವರು ಸನ್ ರೈಸರ್ಸ್ ಹೈದರಾಬಾದ್ ತಂಡದ ಸಹಾಯಕ ಬಳಗದಲ್ಲಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮತ್ತೆ ತಂಡ ಸೇರಲಿದ್ದಾರೆ ಎಂದು ವರದಿಯಾಗಿದೆ.