ಪರಿಪೂರ್ಣ ಯಾರ್ಕರ್ ಎಸೆಯಲು ನೆಟ್ ಅಭ್ಯಾಸ ಸಹಕಾರಿ: ಅರ್ಷದೀಪ್ ಸಿಂಗ್
Team Udayavani, May 24, 2022, 5:40 PM IST
ಮುಂಬಯಿ: ಚೊಚ್ಚಲ ಬಾರಿ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಕ್ಕೆ ರೋಮಾಂಚನಗೊಂಡಿರುವ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರು ಶಕ್ತಿಶಾಲಿಯಾಗಿ ಹೊಡೆಯುವ ಪಂಜಾಬ್ ಕಿಂಗ್ಸ್ ತಂಡದ ಬ್ಯಾಟ್ಸ್ಮನ್ಗಳಿಗೆ ನೆಟ್ನಲ್ಲಿ ಬೌಲಿಂಗ್ ನಡೆಸಿದ್ದರಿಂದ ಪರ್ಫೆಕ್ಟ್ ಯಾರ್ಕರ್ ಎಸೆಯಲು ನೆರವಾಯಿತು ಎಂದಿದ್ದಾರೆ.
ಈ ಐಪಿಎಲ್ ಋತುವಿನಲ್ಲಿ ಡೆತ್ ಓವರ್ಗಳಲ್ಲಿ ಅರ್ಷದೀಪ್ ಸಿಂಗ್ ಗಮನಾರ್ಹ ಬೌಲಿಂಗ್ ದಾಳಿ ಸಂಘಟಿಸಿ ಗಮನ ಸೆಳೆದಿದ್ದಾರೆ. 7.70 ಸರಾಸರಿಯಲ್ಲಿ ಅವರು 10 ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ.
ಯಾರ್ಕರ್ ಎಸೆತಗಳಿಂದ ಗಮನ ಸೆಳೆದ ಅವರು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಭಾರತೀಯ ತಂಡಕ್ಕೆ ಆಯ್ಕೆಯಾಗಲು ಸಹಕಾರಿಯಾಯಿತು. ರವಿವಾರ ನಡೆದ ಸನ್ರೈಸರ್ ಹೈದರಾಬಾದ್ ವಿರುದ್ಧದ ಈ ಬಾರಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯದ ವೇಳೆ ಅರ್ಷದೀಪ್ ಅವರಿಗೆ ಭಾರತೀಯ ತಂಡಕ್ಕೆ ಆಯ್ಕೆಯಾದ ಸುದ್ದಿ ಸಿಕ್ಕಿದೆ. ಈ ಪಂದ್ಯದಲ್ಲಿ ಪಂಜಾಬ್ ಗೆಲುವು ಸಾಧಿಸಿ ಸಂಭ್ರಮಿಸಿತ್ತು.
ಕಳೆದ ವರ್ಷ ಶ್ರೀಲಂಕಾ ವಿರುದ್ಧದ ಸರಣಿ ವೇಳೆ ಯುವ ಆಟಗಾರ ಅರ್ಷದೀಪ್ ಅವರು ಭಾರತೀಯ ತಂಡಕ್ಕೆ ನೆಟ್ ಬೌಲರ್ ಆಗಿ ಕರ್ತವ್ಯ ಸಲ್ಲಿಸಿದ್ದರು.
ಪಂಜಾಬ್ ಕಿಂಗ್ಸ್ ತಂಡದ ಆಟಗಾರರಾದ ಜಾನಿ ಬೇರ್ಸ್ಟೋ, ಶಿಖರ್ ಧವನ್, ಲಿಯಮ್ ಲಿವಿಂಗ್ಸ್ಟೋನ್ ಅವರಿಗೆ ನೆಟ್ನಲ್ಲಿ ಬೌಲಿಂಗ್ ಮಾಡಿದ್ದರಿಂದ ಭಾರತೀಯ ತಂಡಕ್ಕೆ ಆಯ್ಕೆಯಾಗಲು ಸಾಧ್ಯವಾಯಿತು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ