ಸೋತು ಕಂಗೆಟ್ಟವರ ಕದನ: ಪಂಜಾಬ್ ವಿರುದ್ಧವಾದರೂ ಗೆಲುವಿನ ಖಾತೆ ತೆರೆದೀತೇ ಹೈದರಾಬಾದ್‌?


Team Udayavani, Apr 21, 2021, 12:33 PM IST

punjab kings vs sunrisers hyderabad

ಚೆನ್ನೈ: ಮೊದಲ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿ ಬೀಗಿದ ಬೆನ್ನಲ್ಲೇ ಸತತ ಎರಡು ಪಂದ್ಯ ಸೋತು ಆಘಾತಕ್ಕೊಳಗಾದ ಪಂಜಾಬ್‌ ಕಿಂಗ್ಸ್‌ ಮತ್ತು ಹ್ಯಾಟ್ರಿಕ್‌ ಸೋಲಿನಿಂದ ಕಂಗೆಟ್ಟಿರುವ ಡೇವಿಡ್‌ ವಾರ್ನರ್‌ ಸಾರಥ್ಯದ ಹೈದರಾಬಾದ್  ಬುಧವಾರದ ಹಗಲು ಪಂದ್ಯದಲ್ಲಿ ಮುಖಾಮುಖೀಯಾಗಲಿದೆ. ಇನ್ನೊಂದು ಪಂದ್ಯ ಚೆನ್ನೈ-ಕೆಕೆಆರ್‌ ನಡುವೆ ಸಾಗಲಿದೆ.

ಸಾಮಾನ್ಯವಾಗಿ ವಾರಂತ್ಯ ಹಾಗೂ ಭಾನುವಾರ ಎರಡು ಪಂದ್ಯಗಳನ್ನು ನಡೆಸುವುದು ಸಂಪ್ರದಾಯ. ಆದರೆ ಈ ಬಾರಿ ವಾರದ ನಡುವೆ ಎರಡು ಪಂದ್ಯ ಆಡಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಕಳೆದ ಶನಿವಾರ ಒಂದೇ ಪಂದ್ಯ ನಡೆದಿತ್ತು. ಇದನ್ನು ಸರಿದೂಗಿಸಲು ಹೀಗೆ ಮಾಡಿರುವ ಸಾಧ್ಯತೆ ಇದೆ.

ಹನ್ನೊಂದರ ಬಳಗದ ಗೊಂದಲ!: ಸತತ ಮೂರು ಸೋಲು ಕಂಡಿರುವ ಹೈದರಾಬಾದ್‌ ತಂಡಕ್ಕೆ ಹನ್ನೊಂದರ ಬಳಗದ ಆಯ್ಕೆಯೇ ದೊಡ್ಡ ಗೊಂದಲವಾಗಿದೆ. ಮುಖ್ಯವಾಗಿ ಇಲ್ಲಿ ವಿದೇಶಿ ಕ್ರಿಕೆಟಿಗರ ಆಯ್ಕೆಯಲ್ಲಿ ತಂಡ ಎಡವಟ್ಟು ಮಾಡಿಕೊಳ್ಳುತ್ತಿದೆ. ತಂಡದ ಫಾರಿನ್‌ ಕ್ರಿಕೆಟಿಗರೆಲ್ಲ ಸ್ಟಾರ್‌ ಆಟಗಾರರೇ ಆಗಿರುವುದರಿಂದ ಯಾರಿಗೆ ಅವಕಾಶ ನೀಡುವುದು ಎನ್ನುವುದೇ ಯಕ್ಷಪ್ರಶ್ನೆಯಾಗುತ್ತಿದೆ!

ಇದನ್ನೂ ಓದಿ:ಮಹೇಂದ್ರ ಸಿಂಗ್ ಧೋನಿ ತಂದೆ- ತಾಯಿಗೆ ಕೋವಿಡ್ ಸೋಂಕು ದೃಢ

ಗೆಲುವಿನ ಸಮೀಪ ಪಲ್ಟಿ!: ಉತ್ತಮ ಆರಂಭ ಪಡೆದು ಇನ್ನೇನು ತಂಡ ಗೆಲುವು ಸಮೀಪಿಸಿತು ಎನ್ನುವಾಗಲೇ ನಾಟಕೀಯ ಕುಸಿತ ಕಂಡು ಪಂದ್ಯವನ್ನು ಕೈಚೆಲ್ಲುತ್ತಿರುವುದು ಹೈದರಾಬಾದ್‌ಗೆ ಎದುರಾಗಿರುವ ದೊಡ್ಡ ಕಂಟಕ. ನಾಯಕ ವಾರ್ನರ್‌ ಮತ್ತು ಜಾನಿ ಬೇರ್‌ಸ್ಟೊ ಹೊರತುಪಡಿಸಿ ಬೇರೆ ಆಟಗಾರರು ಕ್ರೀಸ್‌ ಆಕ್ರಮಿಸಿಕೊಳ್ಳುವಲ್ಲಿ ವಿಫ‌ಲ ರಾಗುತ್ತಿದ್ದಾರೆ. ಮನೀಷ್‌ ಪಾಂಡೆ ಬ್ಯಾಟಿಂಗ್‌ ವಿಸ್ತರಿಸಿದರೂ ಇದರಲ್ಲಿ ಟಿ20 ಜೋಶ್‌ ಕಂಡುಬರುತ್ತಿಲ್ಲ. ಅವರ ನಿಧಾನ ಗತಿಯ ಆಟದಿಂದ ತಂಡಕ್ಕೆ ಹೆಚ್ಚು ಹಾನಿ ಆಗುತ್ತಿರುವುದು ಸುಳ್ಳಲ್ಲ. ಕೆಳ ಸರದಿಯಲ್ಲಿ ಅಬ್ದುಲ್‌ ಸಮದ್‌, ವಿಜಯ್‌ ಶಂಕರ್‌ ಕೂಡ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ.

ಈ ಬಾರಿ ಏನು ಪ್ರಯೋಗ?: ಮೊದಲೆರಡು ಪಂದ್ಯಗಳ ಸೋಲಿನ ಬೆನ್ನಲ್ಲೆ 3ನೇ ಪಂದ್ಯಕ್ಕೆ ನಾಲ್ವರು ಆಟಗಾರರನ್ನು ಬದಲಾಯಿಸಿಯೂ ಯಶಸ್ಸು ಕಾಣದ ಹೈದರಾಬಾದ್‌ ಈ ಪಂದ್ಯಕ್ಕೆ ಯಾವ ಪ್ರಯೋಗ ನಡೆಸಲಿದೆ ಎನ್ನುವ ಕುತೂಹಲವಿದೆ. ಹೈದರಾಬಾದ್‌ ಬೌಲಿಂಗ್‌ ಬಹಳ ವೈವಿಧ್ಯಮಯ. ರಶೀದ್‌ ಖಾನ್‌, ಭುವನೇಶ್ವರ್‌, ಖಲೀಲ್‌ ಅಹ್ಮದ್‌, ನಟರಾಜನ್‌ ಅವರೆಲ್ಲ ಎದುರಾಳಿಗೆ ನಿಯಂತ್ರಣ ಹೇರಲು ಸಮರ್ಥರಾಗಿದ್ದಾರೆ. ಈ ವರೆಗೆ ಆಡಿದ ಎಲ್ಲ ಪಂದ್ಯಗಳಲ್ಲೂ ಚೇಸಿಂಗ್‌ ನಡೆಸಿ ಸೋತ ಹೈದರಾಬಾದ್‌ಗೆ ಮೊದಲು ಬ್ಯಾಟಿಂಗ್‌ ನಡೆಸುವ ಅವಕಾಶವೊಂದು ದೊರೆತರೆ ಬೌಲರ್‌ಗಳು ತಂಡಕ್ಕೆ ಗೆಲುವು ತಂದುಕೊಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಯಾರಿಂದಲೂ ತಾನು “ಅಸಮರ್ಥ ಎನಿಸಿಕೊಳ್ಳಲು ಇಚ್ಛಿಸುವುದಿಲ್ಲ’ : ಧೋನಿ

ಪಂಜಾಬ್‌ಗ ಬೌಲಿಂಗ್‌ ಚಿಂತೆ: ಪಂಜಾಬ್‌ನದ್ದು ಹೈದರಾಬಾದ್‌ಗೆ ತದ್ವಿರುದ್ಧವಾದ ಸಮಸ್ಯೆ. ಶ್ರೇಷ್ಠ ಮಟ್ಟದ ಬ್ಯಾಟಿಂಗ್‌ ಮೂಲಕ ಇನ್ನೂರರ ಸನಿಹಕ್ಕೆ ತಲುಪಿದರೂ ಕಳಪೆ ಬೌಲಿಂಗ್‌ನಿಂದ ಪಂದ್ಯವನ್ನು ಉಳಿಸಿಕೊಳ್ಳುವಲ್ಲಿ ಪಂಜಾಬ್‌ ವಿಫ‌ಲವಾಗುತ್ತಿದೆ. ಪ್ರಧಾನ ವೇಗಿ ಮೊಹಮ್ಮದ್‌ ಶಮಿ, ರಿಲೀ ಮೆರೆಡಿತ್‌, ಜೇ ರಿಚರ್ಡ್‌ಸನ್‌ ದುಬಾರಿಯಾಗುತ್ತಿದ್ದಾರೆ. ಸ್ಪಿನ್‌ ವಿಭಾಗವೂ ಘಾತಕವಾಗಿ ಪರಿಣಮಿಸುತ್ತಿಲ್ಲ.

ಈ ಪಂದ್ಯದಲ್ಲಿ ಪಂಜಾಬ್‌ ಬೌಲಿಂಗ್‌ ವಿಭಾಗದಲ್ಲಿ ಕೆಲವು ಬದಲಾವಣೆ ಸಂಭವಿಸಿದರೂ ಅಚ್ಚರಿಯಿಲ್ಲ. ಮೆರೆಡಿತ್‌ ಮತ್ತು ರಿಚರ್ಡ್‌ಸನ್‌ ಬದಲು ಆಲ್‌ ರೌಂಡರ್‌ ಮೊಸಸ್‌ ಹೆನ್ರಿಕ್ಸ್‌ ಮತ್ತು ಕ್ರಿಸ್‌ ಜೋರ್ಡನ್‌ ಸ್ಥಾನ ಪಡೆಯಬಹುದು. ಜತೆಗೆ ನಿಕೋಲಸ್‌ ಪೂರಣ್‌ ಬದಲು ಮತ್ತೋರ್ವ ವಿಂಡೀಸ್‌ ಆಟಗಾರ ಫ್ಯಾಬಿಯನ್‌ ಅಲನ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.