ಸೋತು ಕಂಗೆಟ್ಟವರ ಕದನ: ಪಂಜಾಬ್ ವಿರುದ್ಧವಾದರೂ ಗೆಲುವಿನ ಖಾತೆ ತೆರೆದೀತೇ ಹೈದರಾಬಾದ್‌?


Team Udayavani, Apr 21, 2021, 12:33 PM IST

punjab kings vs sunrisers hyderabad

ಚೆನ್ನೈ: ಮೊದಲ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿ ಬೀಗಿದ ಬೆನ್ನಲ್ಲೇ ಸತತ ಎರಡು ಪಂದ್ಯ ಸೋತು ಆಘಾತಕ್ಕೊಳಗಾದ ಪಂಜಾಬ್‌ ಕಿಂಗ್ಸ್‌ ಮತ್ತು ಹ್ಯಾಟ್ರಿಕ್‌ ಸೋಲಿನಿಂದ ಕಂಗೆಟ್ಟಿರುವ ಡೇವಿಡ್‌ ವಾರ್ನರ್‌ ಸಾರಥ್ಯದ ಹೈದರಾಬಾದ್  ಬುಧವಾರದ ಹಗಲು ಪಂದ್ಯದಲ್ಲಿ ಮುಖಾಮುಖೀಯಾಗಲಿದೆ. ಇನ್ನೊಂದು ಪಂದ್ಯ ಚೆನ್ನೈ-ಕೆಕೆಆರ್‌ ನಡುವೆ ಸಾಗಲಿದೆ.

ಸಾಮಾನ್ಯವಾಗಿ ವಾರಂತ್ಯ ಹಾಗೂ ಭಾನುವಾರ ಎರಡು ಪಂದ್ಯಗಳನ್ನು ನಡೆಸುವುದು ಸಂಪ್ರದಾಯ. ಆದರೆ ಈ ಬಾರಿ ವಾರದ ನಡುವೆ ಎರಡು ಪಂದ್ಯ ಆಡಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಕಳೆದ ಶನಿವಾರ ಒಂದೇ ಪಂದ್ಯ ನಡೆದಿತ್ತು. ಇದನ್ನು ಸರಿದೂಗಿಸಲು ಹೀಗೆ ಮಾಡಿರುವ ಸಾಧ್ಯತೆ ಇದೆ.

ಹನ್ನೊಂದರ ಬಳಗದ ಗೊಂದಲ!: ಸತತ ಮೂರು ಸೋಲು ಕಂಡಿರುವ ಹೈದರಾಬಾದ್‌ ತಂಡಕ್ಕೆ ಹನ್ನೊಂದರ ಬಳಗದ ಆಯ್ಕೆಯೇ ದೊಡ್ಡ ಗೊಂದಲವಾಗಿದೆ. ಮುಖ್ಯವಾಗಿ ಇಲ್ಲಿ ವಿದೇಶಿ ಕ್ರಿಕೆಟಿಗರ ಆಯ್ಕೆಯಲ್ಲಿ ತಂಡ ಎಡವಟ್ಟು ಮಾಡಿಕೊಳ್ಳುತ್ತಿದೆ. ತಂಡದ ಫಾರಿನ್‌ ಕ್ರಿಕೆಟಿಗರೆಲ್ಲ ಸ್ಟಾರ್‌ ಆಟಗಾರರೇ ಆಗಿರುವುದರಿಂದ ಯಾರಿಗೆ ಅವಕಾಶ ನೀಡುವುದು ಎನ್ನುವುದೇ ಯಕ್ಷಪ್ರಶ್ನೆಯಾಗುತ್ತಿದೆ!

ಇದನ್ನೂ ಓದಿ:ಮಹೇಂದ್ರ ಸಿಂಗ್ ಧೋನಿ ತಂದೆ- ತಾಯಿಗೆ ಕೋವಿಡ್ ಸೋಂಕು ದೃಢ

ಗೆಲುವಿನ ಸಮೀಪ ಪಲ್ಟಿ!: ಉತ್ತಮ ಆರಂಭ ಪಡೆದು ಇನ್ನೇನು ತಂಡ ಗೆಲುವು ಸಮೀಪಿಸಿತು ಎನ್ನುವಾಗಲೇ ನಾಟಕೀಯ ಕುಸಿತ ಕಂಡು ಪಂದ್ಯವನ್ನು ಕೈಚೆಲ್ಲುತ್ತಿರುವುದು ಹೈದರಾಬಾದ್‌ಗೆ ಎದುರಾಗಿರುವ ದೊಡ್ಡ ಕಂಟಕ. ನಾಯಕ ವಾರ್ನರ್‌ ಮತ್ತು ಜಾನಿ ಬೇರ್‌ಸ್ಟೊ ಹೊರತುಪಡಿಸಿ ಬೇರೆ ಆಟಗಾರರು ಕ್ರೀಸ್‌ ಆಕ್ರಮಿಸಿಕೊಳ್ಳುವಲ್ಲಿ ವಿಫ‌ಲ ರಾಗುತ್ತಿದ್ದಾರೆ. ಮನೀಷ್‌ ಪಾಂಡೆ ಬ್ಯಾಟಿಂಗ್‌ ವಿಸ್ತರಿಸಿದರೂ ಇದರಲ್ಲಿ ಟಿ20 ಜೋಶ್‌ ಕಂಡುಬರುತ್ತಿಲ್ಲ. ಅವರ ನಿಧಾನ ಗತಿಯ ಆಟದಿಂದ ತಂಡಕ್ಕೆ ಹೆಚ್ಚು ಹಾನಿ ಆಗುತ್ತಿರುವುದು ಸುಳ್ಳಲ್ಲ. ಕೆಳ ಸರದಿಯಲ್ಲಿ ಅಬ್ದುಲ್‌ ಸಮದ್‌, ವಿಜಯ್‌ ಶಂಕರ್‌ ಕೂಡ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ.

ಈ ಬಾರಿ ಏನು ಪ್ರಯೋಗ?: ಮೊದಲೆರಡು ಪಂದ್ಯಗಳ ಸೋಲಿನ ಬೆನ್ನಲ್ಲೆ 3ನೇ ಪಂದ್ಯಕ್ಕೆ ನಾಲ್ವರು ಆಟಗಾರರನ್ನು ಬದಲಾಯಿಸಿಯೂ ಯಶಸ್ಸು ಕಾಣದ ಹೈದರಾಬಾದ್‌ ಈ ಪಂದ್ಯಕ್ಕೆ ಯಾವ ಪ್ರಯೋಗ ನಡೆಸಲಿದೆ ಎನ್ನುವ ಕುತೂಹಲವಿದೆ. ಹೈದರಾಬಾದ್‌ ಬೌಲಿಂಗ್‌ ಬಹಳ ವೈವಿಧ್ಯಮಯ. ರಶೀದ್‌ ಖಾನ್‌, ಭುವನೇಶ್ವರ್‌, ಖಲೀಲ್‌ ಅಹ್ಮದ್‌, ನಟರಾಜನ್‌ ಅವರೆಲ್ಲ ಎದುರಾಳಿಗೆ ನಿಯಂತ್ರಣ ಹೇರಲು ಸಮರ್ಥರಾಗಿದ್ದಾರೆ. ಈ ವರೆಗೆ ಆಡಿದ ಎಲ್ಲ ಪಂದ್ಯಗಳಲ್ಲೂ ಚೇಸಿಂಗ್‌ ನಡೆಸಿ ಸೋತ ಹೈದರಾಬಾದ್‌ಗೆ ಮೊದಲು ಬ್ಯಾಟಿಂಗ್‌ ನಡೆಸುವ ಅವಕಾಶವೊಂದು ದೊರೆತರೆ ಬೌಲರ್‌ಗಳು ತಂಡಕ್ಕೆ ಗೆಲುವು ತಂದುಕೊಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಯಾರಿಂದಲೂ ತಾನು “ಅಸಮರ್ಥ ಎನಿಸಿಕೊಳ್ಳಲು ಇಚ್ಛಿಸುವುದಿಲ್ಲ’ : ಧೋನಿ

ಪಂಜಾಬ್‌ಗ ಬೌಲಿಂಗ್‌ ಚಿಂತೆ: ಪಂಜಾಬ್‌ನದ್ದು ಹೈದರಾಬಾದ್‌ಗೆ ತದ್ವಿರುದ್ಧವಾದ ಸಮಸ್ಯೆ. ಶ್ರೇಷ್ಠ ಮಟ್ಟದ ಬ್ಯಾಟಿಂಗ್‌ ಮೂಲಕ ಇನ್ನೂರರ ಸನಿಹಕ್ಕೆ ತಲುಪಿದರೂ ಕಳಪೆ ಬೌಲಿಂಗ್‌ನಿಂದ ಪಂದ್ಯವನ್ನು ಉಳಿಸಿಕೊಳ್ಳುವಲ್ಲಿ ಪಂಜಾಬ್‌ ವಿಫ‌ಲವಾಗುತ್ತಿದೆ. ಪ್ರಧಾನ ವೇಗಿ ಮೊಹಮ್ಮದ್‌ ಶಮಿ, ರಿಲೀ ಮೆರೆಡಿತ್‌, ಜೇ ರಿಚರ್ಡ್‌ಸನ್‌ ದುಬಾರಿಯಾಗುತ್ತಿದ್ದಾರೆ. ಸ್ಪಿನ್‌ ವಿಭಾಗವೂ ಘಾತಕವಾಗಿ ಪರಿಣಮಿಸುತ್ತಿಲ್ಲ.

ಈ ಪಂದ್ಯದಲ್ಲಿ ಪಂಜಾಬ್‌ ಬೌಲಿಂಗ್‌ ವಿಭಾಗದಲ್ಲಿ ಕೆಲವು ಬದಲಾವಣೆ ಸಂಭವಿಸಿದರೂ ಅಚ್ಚರಿಯಿಲ್ಲ. ಮೆರೆಡಿತ್‌ ಮತ್ತು ರಿಚರ್ಡ್‌ಸನ್‌ ಬದಲು ಆಲ್‌ ರೌಂಡರ್‌ ಮೊಸಸ್‌ ಹೆನ್ರಿಕ್ಸ್‌ ಮತ್ತು ಕ್ರಿಸ್‌ ಜೋರ್ಡನ್‌ ಸ್ಥಾನ ಪಡೆಯಬಹುದು. ಜತೆಗೆ ನಿಕೋಲಸ್‌ ಪೂರಣ್‌ ಬದಲು ಮತ್ತೋರ್ವ ವಿಂಡೀಸ್‌ ಆಟಗಾರ ಫ್ಯಾಬಿಯನ್‌ ಅಲನ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.