ಕೋವಿಡ್ ಯೋಧರಿಗೆ ಗೌರವ: ನೀಲಿ ಜೆರ್ಸಿಯಲ್ಲಿ ಆಡಲಿದ್ದಾರೆ ವಿರಾಟ್ ಹುಡುಗರು
Team Udayavani, May 2, 2021, 2:34 PM IST
ಅಹಮದಾಬಾದ್: ಈ ಬಾರಿಯ ಕೂಟದಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಒಂದು ಪಂದ್ಯದಲ್ಲಿ ನೀಲಿ ಅಂಗಿ ಧರಿಸಿ ಆಡಲಿದೆ. ಈ ಬಗ್ಗೆ ಸ್ವತಃ ನಾಯಕ ವಿರಾಟ್ ಕೊಹ್ಲಿ ಹೇಳಿಕೆ ನೀಡಿದ್ದಾರೆ.
ಕಳೆದೊಂದು ವರ್ಷದಿಂದ ಪಿಪಿಇ ಕಿಟ್ ಧರಿಸಿ ಕೆಲಸ ಮಾಡುತ್ತಿರುವ ಕೋವಿಡ್ ವಾರಿಯರ್ಸ್ ಗೆ ಗೌರವ ಸೂಚಿಸುವ ಕಾರಣಗಳಿಂದ ಆರ್ ಸಿಬಿ ನೀಲಿ ಜೆರ್ಸಿ ಧರಿಸಿ ಆಡಲಿದೆ. ಇದಲ್ಲದೆ ಕೋವಿಡ್ ವಿರುದ್ಧದ ಹೋರಾಟಕ್ಕೆ ಹಣಕಾಸಿನ ನೆರವನ್ನೂ ಫ್ರಾಂಚೈಸಿ ನೀಡಲಿದೆ.
ಇದನ್ನೂ ಓದಿ:ಡೆಲ್ಲಿ ವಿರುದ್ಧ ಸೇಡಿಗೆ ಕಾದಿದೆ ಪಂಜಾಬ್ ಕಿಂಗ್ಸ್
ಕಳೆದ ಕೆಲವು ವರ್ಷಗಳಿಂದ ಪರಿಸರ ಸಂರಕ್ಷಣೆಯ ಸಂದೇಶದೊಂದಿಗೆ ಆರ್ ಸಿಬಿ ಕೂಟದ ಎರಡು ಪಂದ್ಯಗಳನ್ನು ಹಸಿರು ಬಣ್ಣದ ಜೆರ್ಸಿ ಧರಿಸಿ ಆಡುತ್ತಿತ್ತು.
ಕೂಟದಲ್ಲಿ ಈಗಾಗಲೇ ಆಡಿರುವ ಏಳು ಪಂದ್ಯಗಳಲ್ಲಿ ಆರ್ ಸಿಬಿ ಐದು ಪಂದ್ಯಗಳನ್ನು ಜಯಿಸಿದೆ. ಚೆನ್ನೈ ಮತ್ತು ಪಂಜಾಬ್ ವಿರುದ್ಧ ವಿರಾಟ್ ಬಳಗ ಮುಗ್ಗರಿಸಿತ್ತು. ಹತ್ತು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆರ್ ಸಿಬಿ ತನ್ನ ಮುಂದಿನ ಪಂದ್ಯವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ತಪ್ಪಿಸಿಕೊಳ್ಳಬಾರದೆಂದು ಮಕ್ಕಳನ್ನು ಸರಪಳಿಯಲ್ಲಿ ಕಟ್ಟಿದ ಮದರಸಾದ ಮೌಲಾನಾ
ಮುಂದುವರೆದ ಮಳೆ: ಶಾಲಾ ಆವರಣಕ್ಕೆ ನುಗ್ಗಿದ ನೀರು, ಮರದ ಕೆಳಗೆ ಪಾಠ
ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ