ರಾಯಲ್ ಕದನ: ಇಲ್ಲಿದೆ ಬೆಂಗಳೂರು-ರಾಜಸ್ಥಾನ ನಡುವಿನ ಸ್ವಾರಸ್ಯಕರ ಅಂಶಗಳು
Team Udayavani, May 27, 2022, 3:22 PM IST
ಅಹಮದಾಬಾದ್: 2022ರ ಸಾಲಿನ ಐಪಿಎಲ್ ಕೂಟದ ಕೊನೆಯ ಎರಡು ಪಂದ್ಯಗಳು ಬಾಕಿ ಉಳಿದಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲನುಭವಿಸಿದ ರಾಜಸ್ಥಾನ ರಾಯಲ್ಸ್ ಮತ್ತು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇಂದು ಮುಖಾಮುಖಿಯಾಗಲಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಫೈನಲ್ ಪ್ರವೇಶ ಪಡೆಯಲಿರುವ ಎರಡನೇ ತಂಡ ಯಾವುದೆಂಬ ಬಗ್ಗೆ ತಿಳಿಯಲಿದೆ.
ಒಟ್ಟಾರೆಯಾಗಿ, ಇದುವರೆಗೆ ಎರಡು ತಂಡಗಳು 26 ಬಾರಿ ಮುಖಾಮುಖಿಯಾಗಿದ್ದು, ರಾಜಸ್ಥಾನ ತಂಡ 11 ಮತ್ತು ಆರ್ ಸಿಬಿ 13 ರಲ್ಲಿ ವಿಜಯಶಾಲಿಯಾಗಿದೆ. 2018 ರ ಬಳಿಕ ನಾಲ್ಕು ಪಂದ್ಯಗಳಲ್ಲಿ ರಾಜಸ್ಥಾನ ಗೆದ್ದರೆ, ಆರ್ ಸಿಬಿ ಐದರಲ್ಲಿ ಗೆದ್ದಿದೆ.
ಈ ಬಾರಿಯ ಕೂಟದಲ್ಲಿ ಎರಡು ಬಾರಿ ಉಭಯ ತಂಡಗಳು ಮುಖಾಮುಖಿಯಾಗಿದೆ. ಎ.5ರಂದು ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ ನಾಲ್ಕು ವಿಕೆಟ್ ಅಂತರದಿಂದ ಗೆಲುವು ಸಾಧಿಸಿತ್ತು. ಎ.26ರಂದು ಪುಣೆಯಲ್ಲಿ ನಡೆದಿದ್ದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 29 ರನ್ ಅಂತರದ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ಆರ್ ಸಿಬಿ 115 ರನ್ ಗೆ ಆಲೌಟಾಗಿತ್ತು.
ಈ ಬಾರಿ ಆರ್ ಸಿಬಿ ಅತೀ ಹೆಚ್ಚು ಅಂದರೆ 137 ಸಿಕ್ಸರ್ ಗಳನ್ನು ಬಿಟ್ಟುಕೊಟ್ಟಿದೆ. ಮತ್ತೊಂದೆಡೆ ರಾಜಸ್ಥಾನ ತಂಡ ಅತೀ ಹೆಚ್ಚು ಸಿಕ್ಸರ್ ಬಾರಿಸಿದೆ. (123)
ಇದನ್ನೂ ಓದಿ:ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ
2011 ರಲ್ಲಿ ಪ್ಲೇ ಆಫ್ಗಳನ್ನು ಪರಿಚಯಿಸಿದಾಗಿನಿಂದ, ಲೀಗ್ ಹಂತದಲ್ಲಿ ಎರಡನೇ ಸ್ಥಾನ ಗಳಿಸಿದ ತಂಡವು ಹಿಂದಿನ 11 ವರ್ಷಗಳಲ್ಲಿ ಪ್ರತಿಯೊಂದು ಬಾರಿಯೂ ಫೈನಲ್ ಗೆ ತಲುಪಿದೆ. ಏಳು ಬಾರಿ ಪ್ರಶಸ್ತಿಯನ್ನು ಗೆದ್ದಿದೆ. ಈ ಬಾರಿ ರಾಜಸ್ಥಾನ ಲೀಗ್ ಹಂತದಲ್ಲಿ ಎರಡನೇ ಸ್ಥಾನ ಗಳಿಸಿದೆ.
ಸಂಭಾವ್ಯ ತಂಡ
ಆರ್ ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾ), ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್ವೆಲ್, ದಿನೇಶ್ ಕಾರ್ತಿಕ್ (ವಿ.ಕೀ), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ವಾನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್ವುಡ್.
ರಾಜಸ್ಥಾನ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾ ಮತ್ತು ವಿ.ಕೀ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜುವೇಂದ್ರ ಚಾಹಲ್, ಓಬೇಡ್ ಮೆಕಾಯ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!