ನೋ ಬಾಲ್ ವಿವಾದ: ರಿಷಭ್ ಪಂತ್, ಶಾರ್ದೂಲ್ ಠಾಕೂರ್, ಕೋಚ್ ಆಮ್ರೆಗೆ ಭಾರೀ ದಂಡ!
Team Udayavani, Apr 23, 2022, 3:03 PM IST
ಮುಂಬೈ: ರಾಜಸ್ಥಾನ ರಾಯಲ್ಸ್ ವಿರುದ್ಧ ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಮೀರಿದ ಕಾರಣಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್, ಆಟಗಾರ ಶಾರ್ದೂಲ್ ಠಾಕೂರ್ ಮತ್ತು ಸಹಾಯಕ ಸಿಬ್ಬಂದಿ ಪ್ರವೀಣ್ ಆಮ್ರೆಗೆ ದಂಡ ವಿಧಿಸಲಾಗಿದೆ.
ಪಂದ್ಯದ ಕೊನೆಯ ಓವರ್ ವೇಳೆ ಅಂಪೈರ್ ನೋ ಬಾಲ್ ನೀಡಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಕ್ರೀಸ್ ನಲ್ಲಿದ್ದ ಆಟಗಾರರಿಗೆ ಪಂದ್ಯ ಬಿಟ್ಟು ಬರುವಂತೆ ಪಂತ್ ಸೂಚಿಸಿದ್ದರು.
ಇದನ್ನೂ ಓದಿ:‘ಕೆಜಿಎಫ್ 2’ ನನ್ನ ಸ್ವಂತ ಸಾಮರ್ಥ್ಯವನ್ನು ನೆನಪಿಸಿತು: ಸಂಜಯ್ ದತ್
ನಾಯಕ ರಿಷಭ್ ಪಂತ್ ಮತ್ತು ಪ್ರವೀಣ್ ಆಮ್ರೆಗೆ ಪಂದ್ಯದ ಸಂಭಾವನೆಯ ಶೇಕಡಾ 100 ಮತ್ತು ಶಾರ್ದೂಲ್ ಠಾಕೂರ್ ಗೆ ಪಂದ್ಯದ ಸಂಭಾವನೆಯ ಶೇಕಡಾ 50ರಷ್ಟು ದಂಡ ವಿಧಿಸಲಾಗಿದೆ. ಅಲ್ಲದೆ ಪ್ರವೀಣ್ ಆಮ್ರೆಗೆ ಒಂದು ಪಂದ್ಯದ ನಿಷೇಧ ಹೇರಲಾಗಿದೆ.
ಆಗಿದ್ದೇನು?: ಪಂದ್ಯದ ಕೊನೆಯ ಓವರ್ ನಲ್ಲಿ ಡೆಲ್ಲಿ ಆಟಗಾರ ರೋಮನ್ ಪೊವೆಲ್ ಆಡುತ್ತಿದ್ದರು. ಕೊನೆಯ ಓವರ್ ನಲ್ಲಿ ಡೆಲ್ಲಿಗೆ 36 ರನ್ ಅಗತ್ಯವಿತ್ತು. ಪೊವಲ್ ಮೊದಲ ಮೂರು ಎಸೆತವನ್ನು ಸಿಕ್ಸರ್ ಗೆ ಅಟ್ಟಿದರು. ಒಬೆಡ್ ಮೆಕಾಯ್ ಎಸೆದ ನಾಲ್ಕನೇ ಎಸೆತ ಫುಲ್ ಟಾಸ್ ಆಗಿತ್ತು. ಆದರೆ ಚೆಂಡು ಸೊಂಟಕ್ಕಿಂತ ಮೇಲಕ್ಕೆತ್ತು, ಹೀಗಾಗಿ ನೋ ಬಾಲ್ ನೀಡಬೇಕು ಎಂದು ಡೆಲ್ಲಿ ಆಟಗಾರರು ಕೇಳಿದರು. ಆದರೆ ಅಂಪೈರ್ ನೀಡಲಿಲ್ಲ. ಇದರಿಂದ ಸಿಟ್ಟಾದ ಡೆಲ್ಲಿ ನಾಯಕ ರಿಷಭ್ ಪಂತ್ ಆಟಗಾರರಿಗೆ ಆಡುವುದು ಬೇಡ, ಹಿಂದಕ್ಕೆ ಬನ್ನಿ ಎಂದು ಕರೆದರು.
ಅಲ್ಲದೆ ಡೆಲ್ಲಿ ಸಹಾಯಕ ಸಿಬ್ಬಂದಿ ಪ್ರವೀಣ್ ಆಮ್ರೆ ಮೈದಾನಕ್ಕೆ ಬಂದರು. ಅಂಪೈರ್ಸ್ಸ್ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡ 15 ರನ್ ಅಂತರದಿಂದ ಸೋಲನುಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ