ಸತತ ಸೋಲಿನ ಹಿನ್ನೆಲೆಯಲ್ಲಿ ಪ್ರಯೋಗಕ್ಕಿಳಿದ ಸನ್ ರೈಸರ್ಸ್: ವಾರ್ನರ್ ಬದಲು ಹೊಸ ನಾಯಕನ ಆಯ್ಕೆ


Team Udayavani, May 1, 2021, 4:52 PM IST

sunrisers hyderabad

ಹೊಸದಿಲ್ಲಿ: ಈ ಬಾರಿಯ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲು ವಿಫಲವಾಗಿದೆ. ಇದುವರೆಗೆ ಆಡಿದ ಆರು ಪಂದ್ಯಗಳಲ್ಲಿ ಹೈದರಾಬಾದ್ ತಂಡ ಗೆಲುವು ಕಂಡಿದ್ದು ಒಂದರಲ್ಲಿ ಮಾತ್ರ. ಹೀಗಾಗಿ ಕೂಟದ ಮಧ್ಯದಲ್ಲೇ ನಾಯಕತ್ವ ಬದಲಾವಣೆಗೆ ಫ್ರಾಂಚೈಸಿ ಮುಂದಾಗಿದೆ.

ಇದುವರೆಗೆ ತಂಡವನ್ನು ಮುನ್ನಡೆಸುತ್ತಿದ್ದ ಡೇವಿಡ್ ವಾರ್ನರ್ ಬದಲಿಗೆ ಕೇನ್ ವಿಲಿಯಮ್ಸನ್ ಗೆ ತಂಡದ ನಾಯಕತ್ವ ನೀಡಲು ಸನ್ ರೈಸರ್ಸ್ ಹೈದರಾಬಾದ್  ಫ್ರಾಂಚೈಸಿ ಮುಂದಾಗಿದೆ. ಈ ಬಗ್ಗೆ ಫ್ರಾಂಚೈಸಿ ಸ್ವತಃ ಹೇಳಿಕೊಂಡಿದ್ದು, ಮುಂದಿನ ಪಂದ್ಯದಿಂದ ಕೇನ್ ವಿಲಿಯಮ್ಸನ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದಿದೆ.

ಇದನ್ನೂ ಓದಿ:ಈ ತಂಡದ ಬ್ಯಾಟಿಂಗ್ ನೋಡಿದರೆ ಬೋರಿಂಗ್ ಸಿನಿಮಾ ನೋಡಿದ ಹಾಗೆ ಅನಿಸುತ್ತಿದೆ: ಸೆಹವಾಗ್

ಅಷ್ಟೇ ಅಲ್ಲದೆ ಮುಂದಿನ ಪಂದ್ಯದಲ್ಲಿ ತಂಡದ ಆಡುವ ಬಳಗದಲ್ಲಿ ವಿದೇಶಿ ಆಟಗಾರರು ಕೂಡಾ ಬದಲಾಗಲಿದ್ದಾರೆ ಎಂದಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಮುಂದಿನ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ.

ಕೇನ್ ವಿಲಿಯಮ್ಸನ್ ಅವರು ಈ ಹಿಂದೆಯೂ ಹೈದರಾಬಾದ್ ತಂಡವನ್ನು ಮುನ್ನಡೆಸಿದ್ದರು.  ಡೇವಿಡ್ ವಾರ್ನರ್ ಬಾಲ್ ಟ್ಯಾಂಪರಿಂಗ್ ವಿವಾದದಿಂದ ನಿಷೇಧ ಶಿಕ್ಷೆ ಅನುಭವಿಸಿದ ವೇಳೆ 2018 ಮತ್ತು 2019ರಲ್ಲಿ ವಿಲಿಯಮ್ಸನ್ ತಂಡದ ಚುಕ್ಕಾಣಿ ಹಿಡಿದಿದ್ದರು.

ಇದನ್ನೂ ಓದಿ:ಬೊರಿವಲಿ ಗಲ್ಲಿಯಲ್ಲಿ ಆಫ್ ಸ್ಪಿನ್ನರ್ ಆಗಿದ್ದ ರೋಹಿತ್ ದ್ವಿಶತಕದ ಕನಸೂ ಕಂಡಿರಲಿಕ್ಕಿಲ್ಲ…

ಒಟ್ಟು 26 ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು ಮುನ್ನಡೆಸಿರುವ ಕೇನ್, 14 ಪಂದ್ಯಗಳಲ್ಲಿ ಜಯ ಗಳಿಸಿದ್ದು, 12 ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ. ಈ ಬಾರಿಯ ಐಪಿಎಲ್ ನಲ್ಲಿ ತಂಡ ಸದ್ಯ ಅಂತಿಮ ಸ್ಥಾನದಲ್ಲಿದ್ದು, ನಾಯಕತ್ವ ಬದಲಾವಣೆಯೊಂದಿಗೆ ತಂಡದ ಅದೃಷ್ಟವೂ ಬದಲಾಗುತ್ತದೆಯೋ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.