ಪ್ರಧಾನಿ ಮೋದಿ ದಿಢೀರ್ ಲಡಾಖ್ ಭೇಟಿ; ಕಂಗಾಲಾದ ಚೀನ ಪ್ರತಿಕ್ರಿಯೆ ಏನು ಗೊತ್ತಾ?
ಉಭಯ ದೇಶಗಳ ನಡುವೆ ರಾಜತಾಂತ್ರಿಕ, ಸೇನಾ ಮಟ್ಟದಲ್ಲಿ ಚರ್ಚೆ, ಮಾತುಕತೆ ನಡೆಯುತ್ತಿದೆ
Team Udayavani, Jul 3, 2020, 4:45 PM IST
ಬೀಜಿಂಗ್/ನವದೆಹಲಿ:ಗಾಲ್ವಾನ್ ಕಣಿವೆ ಪ್ರದೇಶದಲ್ಲಿನ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ, ಚೀನ ನಡುವೆ ಮಾತುಕತೆ ನಡೆಯುತ್ತಿದ್ದರೆ ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದಿಢೀರ್ ಎಂದು ಲಡಾಖ್ ಗೆ ಭೇಟಿ ನೀಡಿ ಯೋಧರ ಜತೆ ಮಾತುಕತೆ ನಡೆಸಿರುವುದು ಚೀನಾದ ಹುಬ್ಬೇರಿಸುವಂತೆ ಮಾಡಿದೆ ಎಂದು ವರದಿ ತಿಳಿಸಿದೆ.
ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಭಾರತದ ಜತೆ ಚರ್ಚೆ ನಡೆಸುವ ಮೂಲಕ ಉದ್ವಿಗ್ನ ಸ್ಥಿತಿಯನ್ನು ಕಡಿಮೆಗೊಳಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾವುದೇ ದೇಶವಾಗಲಿ ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಲು ಹೋಗಬಾರದು ಎಂದು ಚೀನ ಪ್ರತಿಕ್ರಿಯೆ ನೀಡಿದೆ.
ಇಂದು ಪ್ರಧಾನಿ ಮೋದಿ ಅವರು ಲಡಾಖ್ ಗೆ ಭೇಟಿ ನೀಡಿದ ಬಳಿಕ ಪ್ರತಿಕ್ರಿಯೆ ನೀಡಿರುವ ಚೀನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಜೋ ಲಿಜಿಯಾನ್, ಉಭಯ ದೇಶಗಳ ನಡುವೆ ರಾಜತಾಂತ್ರಿಕ, ಸೇನಾ ಮಟ್ಟದಲ್ಲಿ ಚರ್ಚೆ, ಮಾತುಕತೆ ನಡೆಯುತ್ತಿರುವ ವೇಳೆ ಯಾವ ದೇಶವಾಗಲಿ ಪರಿಸ್ಥಿತಿಯನ್ನು ಬಿಗಡಾಯಿಸಲು ಅವಕಾಶ ನೀಡಬಾರದು ಎಂದು ಪರೋಕ್ಷವಾಗಿ ಭಾರತಕ್ಕೆ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
India & China are in communication and negotiations on lowering the temperatures through military & diplomatic channels. No party should engage in any action that may escalate the situation at this point:Zhao Lijian, Chinese Foreign Ministry spokesperson on PM Modi’s Ladakh visit pic.twitter.com/ZYGjGGIdt9
— ANI (@ANI) July 3, 2020
ಪ್ರಧಾನಿ ನರೇಂದ್ರ ಮೋದಿ, ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಜತೆ ಲಡಾಖ್ ಗೆ ಭೇಟಿ ನೀಡಿ ಗಡಿ ಪ್ರದೇಶದಲ್ಲಿನ ಸ್ಥಿತಿಗತಿಯನ್ನು ಪರಿಶೀಲಿಸಿ ಮಾಹಿತಿ ಪಡೆದಿದ್ದರು. ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ, ಚೀನ ಸೈನಿಕರ ನಡುವೆ ಘರ್ಷಣೆ ನಡೆದು 20 ಸೈನಿಕರು ಹುತಾತ್ಮರಾದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ದಿಢೀರ್ ಎಂದು ಭೇಟಿ ನೀಡುವ ಮೂಲಕ ಯೋಧರಿಗೆ ಆತ್ಮಸ್ಥೈರ್ಯ ತುಂಬಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ