ಪ್ಯಾಂಗಾಂಗ್ ನಿಂದ ಸೇನೆ ಹಿಂಪಡೆಯಲ್ಲ ಎಂದ ಚೀನಾ: ಗಡಿಯಲ್ಲಿ ಮತ್ತೆ ಭಾರತದ ಸೇನೆ ಜಮಾವಣೆ
ಚೀನಾ ಜತೆಗಿನ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಡಾಖ್ ಭೇಟಿ
Team Udayavani, Jul 16, 2020, 1:26 PM IST
ನವದೆಹಲಿ/ಬೀಜಿಂಗ್:ಲಡಾಖ್ ನ ವಾಸ್ತವ ಗಡಿ ನಿಯಂತ್ರಣ(ಎಲ್ ಎಸಿ) ರೇಖೆ ಪ್ರದೇಶಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವಿನ ಸಂಘರ್ಷ ಮತ್ತಷ್ಟು ತಾರರಕ್ಕೇರುವ ಲಕ್ಷಣ ಗೋಚರವಾಗತೊಡಗಿದೆ. ಆಯ್ದ ಗಡಿ ಪ್ರದೇಶದಲ್ಲಿನ ಸೇನೆಯನ್ನು ವಾಪಸ್ ತೆಗೆದುಕೊಳ್ಳುವ ಕುರಿತು ಉಭಯ ದೇಶಗಳ ಸೇನಾ ಕಮಾಂಡರ್ ಹಂತದ
ಮಾತುಕತೆ ನಡೆಯುತ್ತಿದ್ದು, ಏತನ್ಮಧ್ಯೆ ಪ್ಯಾಂಗಾಂಗ್ ತ್ಸೋನ ಫಿಂಗರ್ 4 ಪ್ರದೇಶದಿಂದ ಚೀನಾ ಸೇನೆ ಹಿಂಪಡೆಯಲು ನಿರಾಕರಿಸಿದೆ ಎಂದು ವರದಿ ತಿಳಿಸಿದೆ.
ಪ್ಯಾಂಗಾಂಗ್ ತ್ಸೋ ಸರೋವರ ಪ್ರದೇಶದ ಫಿಂಗರ್ 4 ಪ್ರದೇಶದಿಂದ ಚೀನಾ ಸೇನೆ ಹಿಂದೆ ಸರಿಯಲು ನಿರಾಕರಿಸಿ ಹಿನ್ನೆಲೆಯಲ್ಲಿ ಪೂರ್ವ ಲಡಾಖ್ ಪ್ರದೇಶದಲ್ಲಿ ಭಾರತೀಯ ಸೇನೆ ಹೈ ಅಲರ್ಟ್ ಘೋಷಿಸಿದ್ದು ಯುದ್ಧ ಟ್ಯಾಂಕ್ ಸೇರಿದಂತೆ ಯೋಧರನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯೋಜಿಸುತ್ತಿರುವುದಾಗಿ ವರದಿ ವಿವರಿಸಿದೆ.
ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯ ಯಾವುದೇ ಬೆದರಿಕೆ, ಯುದ್ಧವನ್ನು ಎದುರಿಸಲು ಭಾರತೀಯ ಸೇನೆ ಸರ್ವ ಸನ್ನದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ.
ಚೀನಾ ಜತೆಗಿನ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಡಾಖ್ ಮತ್ತು ಜಮ್ಮು ಕಾಶ್ಮೀರಕ್ಕೆ ಜುಲೈ 17-18ರಂದು ಭೇಟಿ ನೀಡಲು ನಿರ್ಧರಿಸಿದ್ದಾರೆ ಎಂದು ವರದಿ ಹೇಳಿದೆ. ಅಲ್ಲದೇ ನಾರ್ಥನ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಚೀಫ್ ವೈ.ಕೆ.ಜೋಶಿ ಅವರು ದೆಹಲಿಗೆ ಆಗಮಿಸುವ ನಿರೀಕ್ಷೆ ಇದ್ದು, ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಅಧಿಕಾರಿಗಳ ಜತೆ ಎಲ್ ಎಸಿಯಲ್ಲಿನ ಪರಿಸ್ಥಿತಿ ಕುರಿತ ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ವರದಿ ವಿವರಿಸಿದೆ.
ಬುಧವಾರ ಭಾರತ ಮತ್ತು ಚೀನಾ ನಡುವಿನ ಕಮಾಂಡರ್ ಹಂತದ ಮಾತುಕತೆ ಸುದೀರ್ಘ 15ಗಂಟೆಗಳ ಕಾಲ ನಡೆದಿತ್ತು. ಈ ಸಂದರ್ಭದಲ್ಲಿ ಚೀನಾ ಫಿಂಗರ್ 4ರಿಂದ ಸೇನೆಯನ್ನು ವಾಪಸ್ ಕರೆಯಿಸಿಕೊಳ್ಳುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿತ್ತು ಎಂದು ಮೂಲಗಳು ತಿಳಿಸಿವೆ. ಗಲ್ವಾನ್ ಕಣಿವೆ ಪ್ರದೇಶ, ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾದಲ್ಲಿ ಸೇನೆಯನ್ನು ವಾಪಸ್ ಕರೆಯಿಸಿಕೊಳ್ಳಲು ಭಾರತ ಮತ್ತು ಚೀನಾ ಎರಡೂ ಒಪ್ಪಿಗೆ ಸೂಚಿಸಿದ್ದವು. ಆದರೆ ಎಲ್ಲಾ ಗಡಿ ಪ್ರದೇಶದಿಂದ ಚೀನಾ ಸೇನೆಯನ್ನು ವಾಪಸ್ ಕರೆಯಿಸಿಕೊಳ್ಳಬೇಕು ಎಂದು ಭಾರತ ಬೇಡಿಕೆ ಇಟ್ಟಿರುವುದಾಗಿ ವರದಿ ತಿಳಿಸಿದೆ.
ಗಡಿಯಲ್ಲಿ ಚೀನಾ ಸೇನೆಯ ಚಟುವಟಿಕೆಯನ್ನು ಗಮನದಲ್ಲಿ ಇರಿಸಿಕೊಂಡಿರುವ ಭಾರತೀಯ ಸೇನೆ ಪೂರ್ವ ಲಡಾಖ್ ಪ್ರದೇಶಕ್ಕೆ 60 ಸಾವಿರ ಸೈನಿಕರನ್ನು ನಿಯೋಜಿಸಿದೆ. ಅಷ್ಟೇ ಅಲ್ಲ ಗಡಿ ಪ್ರದೇಶಕ್ಕೆ ಭೀಷ್ಮ್ ಟ್ಯಾಂಕ್ಸ್, ಅಪಾಚೆ ಯುದ್ಧ ಹೆಲಿಕಾಪ್ಟರ್, ಸುಖೋಯಿ ಯುದ್ಧ ಜೆಟ್ ವಿಮಾನ, ಚಿನೂಕ್ ಮತ್ತು ರುದ್ರ ಹೆಲಿಕಾಪ್ಟರ್ ಎಲ್ ಎಸಿ ಬಳಿ ಸರ್ವ ಸನ್ನದ್ಧವಾಗಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ