ಚೀನಾ 1967ರ ಘಟನೆ ಯಾಕೆ ಪ್ರಸ್ತಾಪಿಸುತ್ತಿಲ್ಲ?ಅಂದು ಭಾರತ ಬಲವಾದ ಹೊಡೆತ ಕೊಟ್ಟಿತ್ತು…

ನಾಥುಲಾ ಪ್ರದೇಶಕ್ಕೆ ಆಗಮಿಸಿ ಭಾರತೀಯ ಯೋಧರನ್ನು ಬೆದರಿಸುವ ತಂತ್ರ ನಡೆಸಿತ್ತು.

Team Udayavani, Jun 17, 2020, 1:09 PM IST

ಚೀನಾ 1967ರ ಘಟನೆ ಯಾಕೆ ಪ್ರಸ್ತಾಪಿಸುತ್ತಿಲ್ಲ?ಅಂದು ಭಾರತ ಬಲವಾದ ಹೊಡೆತ ಕೊಟ್ಟಿತ್ತು

ಮಣಿಪಾಲ:ಭಾರತ, ಚೀನಾ ನಡುವಿನ ಗಡಿ ತಕರಾರು ಹೊಸದೇನಲ್ಲ. ಸುಮಾರು 45 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಉಭಯ ದೇಶಗಳ ನಡುವಿನ ಸಂಘರ್ಷದಲ್ಲಿ ಯುದ್ಧೇತರ ಹಲ್ಲೆಯಲ್ಲಿ ಹೆಚ್ಚಿನ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಆದರೆ ಪದೇ, ಪದೇ 1962ರ ಯುದ್ಧದ ಘಟನೆ ನೆನಪಿಸಿ ಬೀಗುತ್ತಿರುವ ಚೀನಾಕ್ಕೆ ಭಾರತೀಯ ಸೈನಿಕರ ತಾಕತ್ತು, ಶೌರ್ಯದ ಬಗ್ಗೆ ಜಾಣ ಕುರುಡು ಪ್ರದರ್ಶಿಸುತ್ತಿರುವುದೇಕೆ? ಗಡಿ ತಕರಾರು ವಿಚಾರ ಬಂದಾಗಲೆಲ್ಲಾ ಭಾರತ ಕೂಡಾ ಡ್ರ್ಯಾಗನ್ ಸೇನೆಯನ್ನು ಹಲವು ಬಾರಿ ಎದುರಿಸಿ ಹಿಂದಕ್ಕೆ ಕಳುಹಿಸಿದ್ದನ್ನು ನೆನಪಿಸಿಕೊಳ್ಳಬೇಕು.

ಇದನ್ನೂ ಓದಿ:ಚೀನ ಉದ್ಧಟತನಕ್ಕೆ ಏನು ಕಾರಣ?

ಚೀನಾ 1967ರ ಘಟನೆ ಯಾಕೆ ಪ್ರಸ್ತಾಪಿಸುತ್ತಿಲ್ಲ?
1967ರ ಆಗಸ್ಟ್ 13ರಂದು ಭಾರತದ ಗಡಿ ಪ್ರದೇಶವಾದ ನಾಥು ಲಾ ಪ್ರದೇಶದಲ್ಲಿ ಚೀನಾ ಸೇನೆ ಕಂದಕ ಮಾಡಲು ಆರಂಭಿಸಿತ್ತು. ಇದನ್ನು ಭಾರತೀಯ ಸೇನೆ ಸೂಕ್ಷ್ಮವಾಗಿ ಗಮನಿಸುತ್ತಲೇ ಇತ್ತು, ಅದರಲ್ಲಿ ಸಿಕ್ಕಿಂ ಒಳಭಾಗದಲ್ಲಿಯೂ ಚೀನಾ ಕೆಲವು ಕಂದಕ ಮಾಡಿದ್ದರು. ಈ ವೇಳೆಯೂ ಸ್ಥಳೀಯ ಚೀನಾ ಕಮಾಂಡರ್ ಗಳ ಹಂತದಲ್ಲಿ ಮಾತುಕತೆ ನಡೆಸಿದ ಪರಿಣಾಮ ಕಂದಕ ಮುಚ್ಚಿ ಸೇನೆಯನ್ನು ವಾಪಸ್ ತೆಗೆದುಕೊಳ್ಳುವಂತೆ ಭಾರತ ಮಾಡಿತ್ತು. ನಂತರ ಆಗಸ್ಟ್ 23ರಂದು ಶಸ್ತ್ರಸಜ್ಜಿತ ಹಲವು ಚೀನಿ ಸೈನಿಕರು ನಾಥುಲಾ ಪ್ರದೇಶಕ್ಕೆ ಆಗಮಿಸಿ ಭಾರತೀಯ ಯೋಧರನ್ನು ಬೆದರಿಸುವ ತಂತ್ರ ನಡೆಸಿತ್ತು. ಆದರೆ ಭಾರತದ ಸೈನಿಕರು ಬಗ್ಗದ ಪರಿಣಾಮ ಚೀನಿ ಪಡೆ ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ವಾಪಸ್ ಆಗಿತ್ತು ಎಂದು ವರದಿ ವಿವರಿಸಿದೆ.

ಇದನ್ನೂ ಓದಿ:ಗಡಿ ಘರ್ಷಣೆ: ಚೀನದ 43 ಸೈನಿಕರ ಹತ್ಯೆ?

1967ರ ಅಕ್ಟೋಬರ್ 1ರಂದು ಉತ್ತರ ನಾಥುಲಾ ಪ್ರದೇಶದಿಂದ ಕೆಲವು ಕಿಲೋ ಮೀಟರ್ ದೂರದಲ್ಲಿರುವ ಚೋ ಲಾ ಪ್ರದೇಶದಲ್ಲಿ ಮತ್ತೆ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಆರಂಭವಾಗಿತ್ತು. ಭಾರತ ಸರ್ಕಾರ ನೀಡಿರುವ ಹೇಳಿಕೆ ಪ್ರಕಾರ ಸಿಕ್ಕಿಂ ಪ್ರದೇಶದೊಳಕ್ಕೆ ಚೀನಾ ಸೈನಿಕರು ಒಳನುಸುಳಿ ಬಂದಾಗ ಭಾರತೀಯ ಸೇನೆ ಪ್ರತಿರೋಧ ವ್ಯಕ್ತಪಡಿಸಿ ಕೈ, ಕೈ ಮಿಲಾಯಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ನಡೆದ ದಾಳಿಯಲ್ಲಿ 88 ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಭಾರತೀಯ ಪಡೆಯ ತಿರುಗೇಟಿಗೆ ಬರೋಬ್ಬರಿ 340 ಸೈನಿಕರು ಸಾವನ್ನಪ್ಪಿದ್ದರು ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಮಾತುಕತೆಗೆಂದು ತೆರಳಿದ್ದ ಭಾರತೀಯ ಯೋಧರ ಮೇಲೆ ಚೀನಿ ಸೈನಿಕರ ಅಟ್ಟಹಾಸ

ಈಗಾಗಲೇ ಡೋಕ್ಲಾಂ ಪ್ರದೇಶದಲ್ಲಿ ಚೀನಾ ರಸ್ತೆ ನಿರ್ಮಿಸುವ ಕೆಲಸಕ್ಕೆ ಮುಂದಾದ ವೇಳೆ ಭಾರತದ ಸೇನೆ ಅದನ್ನು ತಡೆದಿದೆ. ಈ ಸಂಘರ್ಷ ತಿಂಗಳು ಕಾಲ ನಡೆದಿತ್ತು. ಇದೀಗ ಭಾರತ ಸರ್ಕಾರ ಲಡಾಖ್ ಹಾಗೂ ಸಮೀಪದ ಪ್ರದೇಶದಲ್ಲಿ ರಸ್ತೆ ನಿರ್ಮಿಸುತ್ತಿರುವುದು ಚೀನಾಕ್ಕೆ ನುಂಗಲಾರದ ಬಿಸಿ ತುಪ್ಪವಾಗಿದ್ದು, ಇದರ ಪರಿಣಾಮ ಸಂಘರ್ಷದ ಹಾದಿ ಹಿಡಿದಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ 1962ರ ಸ್ಥಿತಿ ಈಗಿಲ್ಲ, ಪ್ರಸ್ತುತ ಭಾರತ ಸದೃಢವಾಗಿದ್ದು, ಎಲ್ಲಾ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದೆ ಎಂದು ಕೇಂದ್ರ ರಕ್ಷಣಾ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.