ಗಡಿ ತಂಟೆ, ಲಡಾಖ್ ಪ್ರದೇಶದಲ್ಲಿ ಭಾರತ, ಚೀನಾ ಸೈನಿಕರು ಗುಂಡಿನ ದಾಳಿ ಏಕೆ ನಡೆಸಿಲ್ಲ ಗೊತ್ತಾ?
ಗುಂಡು ಹಾರಾಟ ನಡೆಸದೇ ಕಲ್ಲು, ದೊಣ್ಣೆ, ಸರಳುಗಳಿಂದ ಹೊಡೆದಾಡಿಕೊಂಡಿದ್ದರು
Team Udayavani, Jun 17, 2020, 12:15 PM IST
ನವದೆಹಲಿ:ಲಡಾಖ್ ನ ಗಾಲ್ವಾನ್ ಪ್ರದೇಶದಲ್ಲಿ ಕುತಂತ್ರದಿಂದ ಚೀನಾ ಯೋಧರು ಭಾರತೀಯ ಸೈನಿಕರ ಮೇಲೆ ದೊಣ್ಣೆ, ರಾಡ್ ಗಳಿಂದ ಹಲ್ಲೆ ನಡೆಸಿದ ಪರಿಣಾಮ 20 ಮಂದಿ ಯೋಧರು ಹುತಾತ್ಮರಾಗಿದ್ದು, ಭಾರತೀಯ ಸೈನಿಕರ ಪ್ರತೀಕಾರಕ್ಕೆ 43 ಚೀನಿ ಸೈನಿಕರು ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.
ಮಂಗಳವಾರ ಬೆಳಗ್ಗೆ ಮೂವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಶಾಂತಿ ಮಂತ್ರ ಪಠಿಸುತ್ತಲೇ ಚೀನಿ ಸೈನಿಕರು ದಾಳಿ ನಡೆಸುವ ಮೂಲಕ ವಿಶ್ವದ ಕೆಂಗಣ್ಣಿಗೆ ಗುರಿಯಾಗಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ:ಚೀನ ಉದ್ಧಟತನಕ್ಕೆ ಏನು ಕಾರಣ?
ಅಂದು ರಾತ್ರಿ ನಡೆದಿದ್ದೇನು…
ಚೀನಾದ ಪಡೆಗಳು ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶಿಸಿರುವುದನ್ನು ಗಮನಿಸಿದ ಭಾರತೀಯ ಯೋಧರು ವಾಪಸ್ ತೆರಳುವಂತೆ ಸೂಚಿಸಿದ್ದರು. ಆದರೆ ಇದಕ್ಕೆ ಚೀನಾ ಸೈನಿಕರು ವಿರೋಧ ವ್ಯಕ್ತಪಡಿಸಿ ಸಂಘರ್ಷಕ್ಕೆ ಇಳಿದಿದ್ದರು. ಈ ಸಂದರ್ಭದಲ್ಲಿ ಎರಡೂ ಕಡೆಗಳ ಸೈನಿಕರು ಗುಂಡು ಹಾರಾಟ ನಡೆಸದೇ ಕಲ್ಲು, ದೊಣ್ಣೆ, ಸರಳುಗಳಿಂದ ಹೊಡೆದಾಡಿಕೊಂಡಿದ್ದರು ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿ ನೀಡಿತ್ತು.
ಇದನ್ನೂ ಓದಿ:ಗಡಿ ಘರ್ಷಣೆ: ಚೀನದ 43 ಸೈನಿಕರ ಹತ್ಯೆ?
ಗುಂಡಿನ ದಾಳಿ ಏಕೆ ನಡೆಯಲಿಲ್ಲ?
ಈಗಾಗಲೇ ಡೋಕ್ಲಾಂ ಪ್ರದೇಶದಲ್ಲಿ ತಿಂಗಳುಗಳ ಕಾಲ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಅದೇ ರೀತಿ ಪದೇ, ಪದೇ ಚೀನಾ ಭಾರತ ಸೇನೆ ನಡುವೆ ಘರ್ಷಣೆಗಳಾಗುತ್ತಿದೆ. ಆದರೆ ಪ್ರತೀ ಬಾರಿ ಇಂತಹ ಸಂಘರ್ಷ ನಡೆದಾಗ ಕೈ-ಕೈ ಮಿಲಾಯಿಸುತ್ತಿದ್ದರೇ ವಿನಃ ಗುಂಡು ಹಾರಿಸಿದ ಘಟನೆ ನಡೆದಿಲ್ಲ. ಯಾಕೆಂದರೆ 1993ರಲ್ಲಿ ಭಾರತ ಮತ್ತು ಚೀನಾ ನಡುವೆ ನಡೆದಿರುವ ಒಪ್ಪಂದದ ಪ್ರಕಾರ, ಎರಡು ದೇಶಗಳ ಪೈಕಿ ಯಾವುದೇ ಯೋಧ ಗಡಿ ದಾಟಿ ಬಂದರೆ ಅವರಿಗೆ ಎಚ್ಚರಿಕೆ ಕೊಟ್ಟು ಕಳುಹಿಸಬೇಕು.
ಇದನ್ನೂ ಓದಿ:ಮಾತುಕತೆಗೆಂದು ತೆರಳಿದ್ದ ಭಾರತೀಯ ಯೋಧರ ಮೇಲೆ ಚೀನಿ ಸೈನಿಕರ ಅಟ್ಟಹಾಸ
ಅಷ್ಟೇ ಅಲ್ಲ 1996ರ ಒಪ್ಪಂದದ ಪ್ರಕಾರ ಗಡಿ ರೇಖೆಯ 2 ಕಿಲೋ ಮೀಟರ್ ಸುತ್ತಳತೆಯಲ್ಲಿ ಗುಂಡಿನ ದಾಳಿಯಾಗಲಿ, ಸ್ಫೋಟ ನಡೆಸುವಂತಿಲ್ಲ. ಹೀಗಾಗಿ ಭಾರತ, ಚೀನಾ ಯೋಧರು ಶಸ್ತ್ರಾಸ್ತ್ರ ಬಳಸದೇ ಮಲ್ಲಯುದ್ಧದ ತಂತ್ರಗಾರಿಕೆ ಬಳಸುತ್ತಾರೆ ಎಂದು ವರದಿ
ವಿಶ್ಲೇಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ