ಬ್ಯಾಟಿಂಗ್‌ ವೈಫ‌ಲ್ಯ: ಧೋನಿ ಚಿಂತೆ


Team Udayavani, May 9, 2019, 6:00 AM IST

MS-a

ಚೆನ್ನೈ: ಮುಂಬೈ ವಿರುದ್ಧದ ಸೋಲಿಗೆ ತಂಡದ ಬ್ಯಾಟಿಂಗ್‌ ವೈಫ‌ಲ್ಯವೇ ಮುಖ್ಯ ಕಾರಣ ಎಂಬುದಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಮಹೇಂದ್ರ ಸಿಂಗ್‌ ಧೋನಿ ಅಭಿಪ್ರಾಯಪಟ್ಟಿದ್ದಾರೆ. ಜತೆಗೆ ಕಳಪೆ ಕ್ಷೇತ್ರರಕ್ಷಣೆಯ ಬಗ್ಗೆಯೂ ಚಿಂತೆ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ರಾತ್ರಿ ತವರಿನಂಗಳದಲ್ಲೇ ಆಡಿದ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಚೆನ್ನೈ ನಾಲ್ಕೇ ವಿಕೆಟ್‌ ಕಳೆದುಕೊಂಡರೂ ಗಳಿಸಿದ್ದು 131 ರನ್‌ ಮಾತ್ರ. ಮುಂಬೈ ಇದನ್ನು 18.3 ಓವರ್‌ಗಳಲ್ಲಿ ನಾಲ್ಕೇ ವಿಕೆಟಿಗೆ ಹಿಂದಿಕ್ಕಿ ಫೈನಲಿಗೆ ನೆಗೆಯಿತು.

131 ರನ್‌ ಉಳಿಸಿಕೊಳ್ಳುವುದು ಕಷ್ಟ
ತವರು ಅಂಗಳ ನಮಗೆ ಹೆಚ್ಚು ಪರಿಚಿತ. ಇಲ್ಲಿನ ವಾತಾವರಣಕ್ಕೆ ಬೇರೆಲ್ಲರಿಗಿಂತ ನಾವೇ ಬಹಳ ಬೇಗ ಹೊಂದಿಕೊಳ್ಳುತ್ತೇವೆ. ಈಗಾಗಲೇ ಇಲ್ಲಿ 6-7 ಪಂದ್ಯಗಳನ್ನು ಆಡಲಾಗಿದೆ. ಹೀಗಾಗಿ ಇಲ್ಲಿನ ಪಿಚ್‌ ಹೇಗೆ ವರ್ತಿಸುತ್ತದೆ ಎಂಬ ಸ್ಪಷ್ಟ ಅರಿವು ನಮಗಿರಬೇಕಿತ್ತು. ಆದರೆ ಇದನ್ನು ಅಂದಾಜಿಸುವಲ್ಲಿ ನಾವು ವಿಫ‌ಲರಾದೆವು. ನಮ್ಮ ಬ್ಯಾಟಿಂಗ್‌ ಬಹಳಷ್ಟು ಸುಧಾರಿಸಬೇಕಾದ ಅಗತ್ಯವಿದೆಎಂದು ಸೋಲಿನ ಬಳಿಕ ಧೋನಿ ಅಭಿಪ್ರಾಯಪಟ್ಟರು.

ನಾವು ಸಮರ್ಥ ಹಾಗೂ ಅನುಭವಿ ಬ್ಯಾಟ್ಸ್‌ಮನ್‌ಗಳನ್ನೇ ಹೊಂದಿದ್ದೇವೆ. ಎಲ್ಲರೂ ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡು ಉತ್ತಮ ಪ್ರದರ್ಶನ ನೀಡಬೇಕಿತ್ತು. ನಮ್ಮ ಬ್ಯಾಟಿಂಗ್‌ ವೇಳೆ ಎಲ್ಲೂ ಟಿ20 ಜೋಶ್‌ ಕಂಡುಬರಲಿಲ್ಲ. ಕೇವಲ 131 ರನ್‌ ಮಾಡಿ ಇದನ್ನು ಉಳಿಸಿಕೊಳ್ಳುವುದೆಂದರೆ ಅದು ಬಹಳ ಕಷ್ಟ. ಇನ್ನು ನಮಗೆ ತವರಿನ ಪಂದ್ಯವಿಲ್ಲ. ಮುಂದಿನ ಕ್ವಾಲಿಫೈಯರ್‌ ಪಂದ್ಯದಲ್ಲಿ ಬ್ಯಾಟಿಂಗ್‌ ಸುಧಾರಿಸಿಕೊಳ್ಳದೇ ಹೋದರೆ ಮೇಲುಗೈ ಕಷ್ಟವಾದೀತು ಎಂಬುದಾಗಿ ಧೋನಿ ಹೇಳಿದರು.

ಸೂರ್ಯಕುಮಾರ್‌ಗೆ ಜೀವದಾನ
ತಂಡದ ಕಳಪೆ ಫೀಲ್ಡಿಂಗ್‌ ಕೂಡ ಧೋನಿ ಆತಂಕಕ್ಕೆ ಕಾರಣವಾಗಿದೆ. ಮುಂಬೈ ತಂಡದ ಗೆಲುವಿನ ರೂವಾರಿ ಸೂರ್ಯಕುಮಾರ್‌ ಯಾದವ್‌ಗೆ ಕೇವಲ 11 ರನ್‌ ಮಾಡಿದ ವೇಳೆ ಮುರಳಿ ವಿಜಯ್‌ ನೀಡಿದ ಜೀವದಾನ ದುಬಾರಿಯಾಗಿ ಪರಿಣಮಿಸಿತ್ತು. ಇದರ ಲಾಭವೆತ್ತಿದ ಸೂರ್ಯಕುಮಾರ್‌ ಅಜೇಯ 71 ರನ್‌ ಬಾರಿಸಿ ತಂಡವನ್ನು ದಡ ತಲುಪಿಸಿದರು.

ಇಂಥ ಸಮಯದಲ್ಲಿ ಕ್ಯಾಚ್‌ ಬಿಡುವುದು, ಸೋಲುವುದನ್ನು ಯಾರೂ ಬಯಸರು. ಅದೃಷ್ಟವಶಾತ್‌ ನಾವು ಅಗ್ರ ಎರಡು ಸ್ಥಾನದೊಂದಿಗೆ ಲೀಗ್‌ ಮುಗಿಸಿದ್ದೇವೆ. ಹೀಗಾಗಿ ನಮ್ಮ ಮುಂದೆ ಇನ್ನೊಂದು ಅವಕಾಶವಿದೆ. ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಧೋನಿ ಹೇಳಿದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.