ರಾಜಸ್ಥಾನ ಲೆಕ್ಕಾಚಾರ ಉಲ್ಟಾ ಮಾಡುತ್ತಾ ಡೆಲ್ಲಿ?


Team Udayavani, May 4, 2019, 6:00 AM IST

PTI5_1_2019_000001B

ಹೊಸದಿಲ್ಲಿ: ಈಗಾಗಲೇ ಅಧಿಕೃತವಾಗಿ ಪ್ಲೇ ಆಫ್ಗೇರಿರುವ ಡೆಲ್ಲಿ ಕ್ಯಾಪಿಟಲ್ಸ್‌ ಲೀಗ್‌ ಹಂತದ ಕೊನೆಯ ಪಂದ್ಯವನ್ನಾಡಲು ಸಜ್ಜಾಗಿದೆ. ಶನಿವಾರದ ಮೊದಲ ಪಂದ್ಯದಲ್ಲಿ “ಕೋಟ್ಲಾ’ ಅಂಗಳದಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಮುಖಾಮುಖೀಯಾಗಲಿದೆ.

ಡೆಲ್ಲಿಗೆ ಇದು ತವರಿನ ಪಂದ್ಯ. ರಾಯಲ್ಸ್‌ ವಿರುದ್ಧ ಗೆದ್ದು ಮತ್ತೆ ಪ್ಲೇ ಆಫ್ ರೇಸ್‌ನಲ್ಲಿ 2ನೇ ಸ್ಥಾನಕ್ಕೇರುವ ವಿಶ್ವಾಸ ಸದ್ಯ ತಂಡದಲ್ಲಿದೆ. ಇತ್ತ ಹಲವು ಲೆಕ್ಕಾಚಾರ ಹಾಕಿಕೊಳ್ಳುತ್ತಿರುವ ರಾಜಸ್ಥಾನ್‌ ಹೇಗಾದರೂ ಡೆಲ್ಲಿಗೆ ಸೋಲುಣಿಸಿ ಪ್ಲೇ ಆಫ್ ಪ್ರವೇಶದ ಸಣ್ಣ ಕನಸೊಂದನ್ನು ಕಾಣುತ್ತಿದೆ.

ಡೆಲ್ಲಿಗೆ ನಾಯಕ ಅಯ್ಯರ್‌ ಆಸರೆ
7 ವರ್ಷಗಳ ಬಳಿಕ ಪ್ಲೇ ಆಫ್ ಪ್ರವೇಶಿಸಿರುವ ಡೆಲ್ಲಿ ಕ್ಯಾಪಿಟಲ್ಸ್‌ ಈ ಬಾರಿ ಯುವ ಆಟಗಾರರನ್ನೇ ನೆಚ್ಚಿಕೊಂಡ ತಂಡವಾಗಿ ಗುರುತಿಸಿಕೊಂಡಿದೆ. ಸ್ಟಾರ್‌ ಆಟಗಾರರಿಲ್ಲದೆಯೇ ಡೆಲ್ಲಿ ಪ್ಲೇ ಆಫ್ಗೇರಿದೆ. ಆದರೆ ಈ ಹಂತದಲ್ಲೇ ಡೆಲ್ಲಿಯ ಪ್ರಮುಖ ಅಸ್ತ್ರವಾಗಿದ್ದ ಕಾಗಿಸೊ ರಬಾಡ ಅವರನ್ನು ಕ್ರಿಕೆಟ್‌ ದಕ್ಷಿಣ ಆಫ್ರಿಕಾ ತವರಿಗೆ ವಾಪಸಾಗುವಂತೆ ಹೇಳಿದ್ದರಿಂದ ತಂಡಕ್ಕೆ ಹೊಡೆತ ಬಿದ್ದಿದೆ. ರಬಾಡ 12 ಪಂದ್ಯಗಳಲ್ಲಿ 25 ವಿಕೆಟ್‌ ಕಿತ್ತು ಅತೀ ಹೆಚ್ಚು ವಿಕೆಟ್‌ ಕಿತ್ತವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕೂಟದಲ್ಲಿ ಉತ್ತಮವಾಗಿ ಆಡುತ್ತ ಬಂದಿದ್ದ ಶಿಖರ ಧವನ್‌, ರಿಷಬ್‌ ಪಂತ್‌ ಚೆನ್ನೈ ವಿರುದ್ಧದ ಹಿಂದಿನ ಪಂದ್ಯದಲ್ಲಿ ಎಡವಿರುವುದು ಇನ್ನೊಂದು ಹಿನ್ನಡೆ. ಆದರೆ ನಾಯಕ ಶ್ರೇಯಸ್‌ ಅಯ್ಯರ್‌ ಫಾರ್ಮ್ಗೆ ಮರಳಿರುವುದರಿಂದ ತಂಡಕ್ಕೆ ಸ್ವಲ್ಪ ನಿರಾಳತೆ ದೊರಕಿದೆ. ಮಧ್ಯಮ ಕ್ರಮಾಂಕದಲ್ಲಿ ಕಾಲಿನ್‌ ಇನ್‌ಗಾÅಮ್‌, ರುದರ್‌ಫೋರ್ಡ್‌ ಸ್ಫೋಟಕ ಬ್ಯಾಟಿಂಗ್‌ ನಡೆಸಿದರೆ ಡೆಲ್ಲಿಗೆ ಗೆಲುವು ನಿರೀಕ್ಷಿತ. ಬೌಲಿಂಗ್‌ನಲ್ಲಿ ಆಲ್‌ ರೌಂಡರ್‌ ಕ್ರಿಸ್‌ ಮಾರಿಸ್‌, ಅಕ್ಷರ್‌ ಪಟೇಲ್‌, ಟ್ರೆಂಟ್‌ ಬೌಲ್ಟ್ , ಜಗದೀಶ್‌ ಸುಚಿತ್‌, ಇಶಾಂತ್‌ ಶರ್ಮ ಸಂಘಟಿತ ದಾಳಿ ನಡೆಸುವ ವಿಶ್ವಾಸದಲ್ಲಿÉದ್ದಾರೆ.

ರಾಯಲ್ಸ್‌ಗೆ ಕನ್ನಡಿಗ ಗೋಪಾಲ್‌ ಬಲ
ನಾಯಕತ್ವದ ಬದಲಾವಣೆಯಿಂದ ಕೊಂಚ ಚೇತರಿಸಿಕೊಂಡಿರುವ ರಾಜಸ್ಥಾನಕ್ಕೆ ಮತ್ತೆ ಆಘಾತ ಎದುರಾಗಿದೆ. ವಿಶ್ವಕಪ್‌ ತಯಾರಿಗಾಗಿ ಸ್ಟೀವನ್‌ ಸ್ಮಿತ್‌ ತವರಿಗೆ ಮರಳಿದ್ದಾರೆ. ತಂಡದ ನಾಯಕತ್ವದ ಜವಾಬ್ದಾರಿ ಮತ್ತೆ ಅಜಿಂಕ್ಯ ರಹಾನೆ ಹೆಗಲೇರಿದೆ. ಈಗಾಗಲೇ ಸ್ಟಾರ್‌ ಆಟಗಾರರಾದ ಬಟ್ಲರ್‌, ಸ್ಟೋಕ್ಸ್‌ , ಜೋಪ್ರ ಆರ್ಚರ್‌ ನಿರ್ಗಮನದ ಬಳಿಕ ಇದೀಗ ಸ್ಮಿತ್‌ ತೊರೆದಿರುವುದೂ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸಂಜು ಸ್ಯಾಮ್ಸನ್‌, ಲಿವಿಂಗ್‌ಸ್ಟೋನ್‌, ರಹಾನೆ, ರಿಯಾನ್‌ ಪರಾಗ್‌ ಬ್ಯಾಟಿಂಗ್‌ ಬಲವಾದರೆ, ಕನ್ನಡಿಗ ಶ್ರೇಯಸ್‌ ಗೋಪಾಲ್‌ ತಂಡದ ಬೌಲಿಂಗಿಗೆ ಬಲ ತುಂಬಿದ್ದಾರೆ. ಉಳಿದಂತೆ ಉನಾದ್ಕತ್‌, ವರುಣ್‌ ಆರೋನ್‌ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರೆ ತಂಡಕ್ಕೆ ಗೆಲುವು ಖಚಿತ ಎನ್ನಲಡ್ಡಿಯಿಲ್ಲ. ಒಟ್ಟಾರೆಯಾಗಿ ಇತ್ತಂಡಗಳಿಗೂ ಸ್ಟಾರ್‌ ಆಟಗಾರರ ಅಲಭ್ಯತೆ ಕಾಡಲಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.