ಆರ್‌ಸಿಬಿ ಫೀಲ್ಡಿಂಗ್‌ ಕಳಪೆ; ಎಬಿಡಿ ಕಳವಳ


Team Udayavani, Apr 11, 2019, 6:30 AM IST

AB

ಬೆಂಗಳೂರು: ಸತತ 6 ಸೋಲುಂಡ ಆರ್‌ಸಿಬಿ ಮೇಲಿನ ನಂಬಿಕೆ ನಿಧಾನವಾಗಿ ಹೊರಟು ಹೋಗುತ್ತಿದೆ. ಕೊಹ್ಲಿ ಪಡೆಯ ಸೋಲಿಗೆ ಕಾರಣಗಳು ಹಲವು.

ತಂಡದ ಬಿಗ್‌ ಹಿಟ್ಟರ್‌ ಎಬಿ ಡಿ ವಿಲಿಯರ್ ಪ್ರಕಾರ, ಆರ್‌ಸಿಬಿಯ ಫೀಲ್ಡಿಂಗ್‌ ಪಾತಾಳ ಕಂಡಿದೆ. ಇದನ್ನವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
“ಕ್ರಿಕೆಟ್‌ನಲ್ಲಿ ತಂಡವೊಂದರ ಸಾಮರ್ಥ್ಯವನ್ನು ಅದರ ಕ್ಷೇತ್ರರಕ್ಷಣೆಯ ಮಟ್ಟವನ್ನು ನೋಡಿ ಅಳೆಯಬಹುದು. ತಂಡದ ಪ್ರತಿಯೊಬ್ಬ ಆಟಗಾರ ಬ್ಯಾಟ್ಸ್‌ಮನ್‌, ಬೌಲರ್‌ ಅಥವಾ ಆಲ್‌ರೌಂಡರ್‌ ಆಗಿ ಗುರುತಿಸಿಕೊಂಡಿರುತ್ತಾರೆ. ಆದರೆ ಯಾರನ್ನೂ ಫೀಲ್ಡರ್‌ ಎಂದು ಗುರುತಿಸುವುದಿಲ್ಲ. ನನ್ನ ಪ್ರಕಾರ ಪ್ರತಿಯೊಬ್ಬ ಆಟಗಾರ ಫೀಲ್ಡರ್‌ ಕೂಡ ಆಗಿರುತ್ತಾನೆ. ಆತ ಅಂಗಳದಲ್ಲಿ ಬಲಿಷ್ಠ ನಿರ್ವಹಣೆ ತೋರಬೇಕಾಗುತ್ತದೆ. ಆರ್‌ಸಿಬಿ ಈ ವಿಷಯದಲ್ಲಿ ಎಡವುತ್ತಿದೆ’ ಎಂದು ಎಬಿಡಿ ಹೇಳಿದರು.

ಆರೂ ಪಂದ್ಯಗಳನ್ನು ಸೋತಿರುವ ಆರ್‌ಸಿಬಿ ಈಗ ಕೂಟದಿಂದ ಹೊರಬೀಳುವ ಅಪಾಯದಲ್ಲಿದೆ. ಇನ್ನೊಂದು ಪಂದ್ಯದಲ್ಲಿ ಎಡವಿದರೆ ಕೊಹ್ಲಿ ಬಳಗದ ಕತೆ ಮುಗಿಯಲಿದೆ.

“6 ಅಂಕ ಹೊಂದಿರಬೇಕಿತ್ತು’
“ಈ ಕೂಟದಲ್ಲಿ ನಮ್ಮ ಫೀಲ್ಡಿಂಗ್‌ ಅತ್ಯಂತ ಕಳಪೆ ಆಗಿದೆ. ಪ್ರತಿಯೊಂದು ಪಂದ್ಯದಲ್ಲೂ ನಾವು ಬಹಳಷ್ಟು ಕ್ಯಾಚ್‌ಗಳನ್ನು ಕೈಚೆಲ್ಲಿದೆವು. ಸಣ್ಣ ಅಂತರದಿಂದ ಸೋತೆವು. ತವರಿನ ಪಂದ್ಯಗಳಲ್ಲಿ ನಾವು ಮುಂಬೈ ಮತ್ತು ಕೆಕೆಆರ್‌ ವಿರುದ್ಧ ಗೆಲ್ಲಬಹುದಿತ್ತು. ರವಿವಾರ ಡೆಲ್ಲಿ ವಿರುದ್ಧ 20 ರನ್‌ ಹೆಚ್ಚು ಗಳಿಸಿದ್ದರೆ ಈ ಪಂದ್ಯವನ್ನೂ ಗೆಲ್ಲುವ ಸಾಧ್ಯತೆ ಇತ್ತು. ಈಗ ನಾವು 6 ಅಂಕಗಳನ್ನು ಹೊಂದಿರುತ್ತಿದ್ದೆವು’ ಎಂದು ಎಬಿಡಿ ಹೇಳಿದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.