ಆರ್‌ಸಿಬಿ ಪಂದ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲ

ಹೈದರಾಬಾದ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ

Team Udayavani, May 4, 2019, 6:00 AM IST

RCN-IPL-2019

ಬೆಂಗಳೂರು: ರಾಯಲ್‌ ಚಾಲೆಂಜರ್ ಬೆಂಗಳೂರು ತಂಡಕ್ಕೆ ಕೂಟದ ಕೊನೆಯ ಲೀಗ್‌ ಪಂದ್ಯಕ್ಕೆ ತವರಿನಲ್ಲಿ ವೇದಿಕೆ ಸಜ್ಜಾಗಿದೆ. ಶನಿವಾರದ ದ್ವಿತೀಯ ಪಂದ್ಯದಲ್ಲಿ ಆರ್‌ಸಿಬಿ-ಸನ್‌ರೈಸರ್ ಹೈದರಾಬಾದ್‌ 2ನೇ ಬಾರಿಗೆ ಮುಖಾಮುಖೀಯಾಗಲಿವೆ.

ಈಗಾಗಲೇ ಪ್ಲೇ ಆಫ್ನಿಂದ ಹೊರಬಿದ್ದಿರುವ ಆರ್‌ಸಿಬಿಗೆ ಇದು ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯ. ಹೈದರಾಬಾದ್‌ ವಿರುದ್ಧ ಮೊದಲ ಮುಖಾಮುಖೀಯಲ್ಲಿ 118 ರನ್‌ಗಳ ಹೀನಾಯ ಸೋಲನುಭವಿಸಿದ ಆರ್‌ಸಿಬಿಗೆ ಇದು ಸೇಡಿನ ಪಂದ್ಯವಾಗಿದೆ. ಆದರೆ ಅಂಕ ಪಟ್ಟಿಯಲ್ಲಿ 12 ಅಂಕದೊಂದಿಗೆ 4ನೇ ಸ್ಥಾನದಲ್ಲಿರುವ ಹೈದರಾಬಾದ್‌ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಗುರುವಾರದ ಮುಂಬೈ ವಿರುದ್ಧ ಸೂಪರ್‌ ಓವರ್‌ನಲ್ಲಿ ಸೋತ ಹೈದಾರಾಬಾದ್‌ಗೆ ಪ್ಲೇ ಆಫ್ಗೇರಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ.

ಹೈದರಾಬಾದ್‌ಗೆ ಪಾಂಡೆ ಬಲ
ವಾರ್ನರ್‌ ನಿರ್ಗಮನದ ಬಳಿಕ ತಂಡಕ್ಕೆ ಆಸರೆಯಾಗಿರುವುದು ಕನ್ನಡಿಗ ಮನೀಷ್‌ ಪಾಂಡೆ. ಕಳೆದ 2 ಪಂದ್ಯದಲ್ಲಿಯೂ ಉತ್ತಮ ಪ್ರದರ್ಶನ ನೀಡುತ್ತ ಬಂದಿರುವುದರಿಂದ ತಂಡ ಇವರ ಬ್ಯಾಟಿಂಗ್‌ ಮೇಲೆ ಹೆಚ್ಚಿನ ನಂಬಿಕೆ ಇರಿಸಿದೆ. ನಾಯಕ ಕೇನ್‌ ವಿಲಿಯಮ್ಸನ್‌ ಪ್ರತೀ ಪಂದ್ಯದಲ್ಲಿಯೂ ವಿಫ‌ಲರಾಗುತ್ತಿರುವುದೂ ದೊಡ್ಡ ತಲೆನೋವಾಗಿದೆ. ಮಧ್ಯಮ ಕ್ರಮಾಂಕದಲ್ಲಿ ವಿಜಯ್‌ ಶಂಕರ್‌, ಅಭಿಷೇಕ್‌ ಶರ್ಮ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ಆರಂಭಿಕ ಆಟಗಾರ ಮಾರ್ಟಿನ್‌ ಗಪ್ಟಿಲ್‌ ಸ್ಫೋಟಕ ಬ್ಯಾಟಿಂಗ್‌ ನೀಡಿದರೆ ತಂಡ ಬೃಹತ್‌ ಮೊತ್ತ ಪೇರಿಸುವಲ್ಲಿ ಯಾವುದೇ ಅನುಮಾನವಿಲ್ಲ.

ಬೌಲಿಂಗ್‌ ಬಲಿಷ್ಠ
ಹೈದರಾಬಾದ್‌ ಬೌಲಿಂಗ್‌ ಘಾತುಕವಾಗಿದೆ. ಮೊಹಮ್ಮದ್‌ ನಬಿ, ರಶೀದ್‌ ಖಾನ್‌, ಖಲೀಲ್‌ ಅಹ್ಮದ್‌, ಭುವನೇಶ್ವರ್‌ ಕುಮಾರ್‌, ಬಾಸಿಲ್‌ ಥಂಪಿ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ.

ಆರ್‌ಸಿಬಿಗೆ ಬೌಲಿಂಗ್‌ ಚಿಂತೆ
ಈ ಬಾರಿಯ ಐಪಿಎಲ್‌ನಲ್ಲಿ ತೀರಾ ಕಳಪೆ ಪ್ರದರ್ಶನದಿಂದ ಪ್ಲೇ ಆಫ್ನಿಂದ ಹೊರಬಿದ್ದಿರುವ ಆರ್‌ಸಿಬಿಗೆ ಬೌಲಿಂಗ್‌ನದ್ದೇ ಚಿಂತೆ. ಯಾವ ಬೌಲರ್‌ ಕೂಡ ಸ್ಥಿರ ಪ್ರದರ್ಶನ ನೀಡುತ್ತಿಲ್ಲ. ಉಮೇಶ್‌ ಯಾದವ್‌, ಚಾಹಲ್‌, ಸೈನಿ ಹೀಗೆ ಪ್ರತಿಯೊಬ್ಬರೂ ದುಬಾರಿಯಾಗುತ್ತಿದ್ದು ಯಾರ ಮೇಲೆಯೂ ತಂಡ ನಂಬಿಕೆ ಇಡುವ ಸ್ಥಿತಿಯಲ್ಲಿಲ್ಲ. ಬ್ಯಾಟಿಂಗ್‌ನಲ್ಲಿ ನಾಯಕ ವಿರಾಟ್‌ ಕೊಹ್ಲಿ, ಎಬಿ ಡಿ’ವಿಲಿಯರ್, ಪಾರ್ಥಿವ್‌ ಪಟೇಲ್‌ ಉತ್ತಮ ಫಾರ್ಮ್ನಲ್ಲಿದ್ದಾರೆ.

ಕೂಟದ ಕೊನೆಯ ಪಂದ್ಯವನ್ನು ಗೆದ್ದು ಅಭಿಮಾನಿಗಳಿಗೆ ಕೊಂಚ ಖುಷಿ ನೀಡುವುದು ಮತ್ತು ಕೂಟವನ್ನು ಗೆಲುವಿನೊಂದಿಗೆ ಮುಗಿಸುವ ಯೋಜನೆ ಕೊಹ್ಲಿ ಪಡೆಯದ್ದಾಗಿದೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.