ಹೈದರಾಬಾದ್‌-ಪಂಜಾಬ್‌: ಪ್ಲೇ ಆಫ್ ಪೈಪೋಟಿ

ಗೆದ್ದವರು ಮುಂದಿನ ಸುತ್ತಿನತ್ತ * ವಾರ್ನರ್‌ಗೆ ಕೊನೆಯ ಪಂದ್ಯ

Team Udayavani, Apr 29, 2019, 12:35 PM IST

RAHUL

ಹೈದರಾಬಾದ್‌: ಒಂದೇ ದೋಣಿಯ ಪಯಣಿಗರಂತಿರುವ ಹೈದರಾಬಾದ್‌ ಮತ್ತು ಪಂಜಾಬ್‌ ತಂಡಗಳು ಸೋಮವಾರ ದ್ವಿತೀಯ ಸುತ್ತಿನ ಅದೃಷ್ಟ ಪರೀಕ್ಷೆಗೆ ಇಳಿಯಲಿವೆ. ಇಲ್ಲಿ ಗೆದ್ದವ ರಿಗೆ ಪ್ಲೇ ಆಫ್ ಅವಕಾಶವೊಂದು ಎದುರಾಗಲಿದೆ.

ಹೈದರಾಬಾದ್‌ ವಿರುದ್ಧ ತವರಿನ ಪಂದ್ಯದಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿರುವ ಪಂಜಾಬ್‌ ಇನ್ನೊಂದು ಗೆಲುವಿಗೆ ಹಾತೊರೆಯುತ್ತಿದ್ದರೆ, ಹೈದರಾಬಾದ್‌ ಸೇಡು ತೀರಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. 11 ಪಂದ್ಯಗಳಲ್ಲಿ ತಲಾ 5 ಪಂದ್ಯಗಳನ್ನು ಗೆದ್ದಿರುವ ಎರಡೂ ತಂಡಗಳಿಗೆ ಈ ಜಯ ಕೊಂಚ ನೆಮ್ಮದಿ ನೀಡಲಿದೆ.

ಸರಣಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿ 600 ರನ್‌ ಸಾಧನೆಯೊಂದಿಗೆ ಆರೇಂಜ್‌ ಕ್ಯಾಪ್‌ ಪಡೆದಿರುವ ಡೇವಿಡ್‌ ವಾರ್ನರ್‌ ಪಾಲಿಗೆ ಇದು ಕೊನೆಯ ಪಂದ್ಯ. ಅವರು ಗೆಲುವಿನೊಂದಿಗೆ ಕೂಟಕ್ಕೆ ಗುಡ್‌ಬೈ ಹೇಳುವ ಯೋಜನೆಯಲ್ಲಿದ್ದಾರೆ.

ವಾರ್ನರ್‌ ನಿರ್ಗಮನಕ್ಕೂ ಮುನ್ನ ಅಗತ್ಯವಾದ ಜಯವೊಂದನ್ನು ಸಾಧಿಸುವುದು ಹೈದರಾಬಾದ್‌ ಯೋಜನೆ. ತವರಿನ ಪಂದ್ಯವಾದ್ದರಿಂದ ಮೇಲುಗೈ ಅವಕಾಶ ಕೂಡ ಅಧಿಕವಾಗಿದೆ. ವಿಲಿಯಮ್ಸನ್‌, ಪಾಂಡೆ ಕ್ರೀಸ್‌ ಆಕ್ರಮಿಸಿಕೊಳ್ಳಬೇಕಾದ ಅಗತ್ಯ ಎಂದಿಗಿಂತ ಹೆಚ್ಚಿದೆ. ಘಾತಕ ಬೌಲಿಂಗ್‌ ದಾಳಿ ಹೊಂದಿದ್ದರೂ ಡೆತ್‌ ಓವರ್‌ನಲ್ಲಿ ಯಶಸ್ಸು ಮರೀಚಿಕೆ ಆಗುತ್ತಿದೆ. ಭುವನೇಶ್ವರ್‌, ರಶೀದ್‌ ಖಾನ್‌, ಮೊಹ್ಮಮದ್‌ ನಬಿ ಅವರಿಂದ ನಿರೀಕ್ಷಿತ ಪ್ರದರ್ಶನ ತೋರಿಬರುತ್ತಿಲ್ಲ.

ಬೌಲಿಂಗ್‌ನಲ್ಲಿ ಪಂಜಾಬ್‌ ಕಳಪೆ
ರಾಹುಲ್‌, ಗೇಲ್‌, ಅಗರ್ವಾಲ್‌ ಅವರಿಂದ ಉತ್ತಮ ಆರಂಭ ಪಡೆಯುತ್ತಿರುವ ಪಂಜಾಬ್‌ಗ ಮಧ್ಯಮ ಕ್ರಮಾಂಕದಲ್ಲಿ ಮಿಲ್ಲರ್‌, ಪೂರಣ್‌ ಸಾಥ್‌ ನೀಡುತ್ತಿದ್ದಾರೆ. ಆದರೆ ಬೌಲಿಂಗ್‌ನಲ್ಲಿ ಧಾರಾಳವಾಗಿ ರನ್‌ ಬಿಟ್ಟು ಕೊಟ್ಟು ದುಬಾರಿಯಾಗುತ್ತಿರುವುದು ತಂಡಕ್ಕೆ ಸಮಸ್ಯೆಯಾಗಿದೆ. ಶಮಿ, ಅಂಕಿತ್‌ ರಜಪೂತ್‌ ಜತೆಗೆ ನಾಯಕ ಅಶ್ವಿ‌ನ್‌ ಕೂಡ ವಿಕೆಟ್‌ ಕೀಳಲು ಪರದಾಡುತ್ತಿದ್ದಾರೆ.

ಟಾಪ್ ನ್ಯೂಸ್

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.