ಆಂಗ್ಲರ ಐಪಿಎಲ್‌ ಎ. 26ಕ್ಕೆ ಅಂತ್ಯ

ಐಪಿಎಲ್‌ ಆಡುತ್ತಿರುವ 6 ಆಂಗ್ಲರು ತವರಿಗೆ ವಾಪಸ್‌

Team Udayavani, Apr 19, 2019, 9:51 AM IST

Ben-Stokes-and-Jos-Buttler

ಹೊಸದಿಲ್ಲಿ: ಈ ಬಾರಿಯ ಐಪಿಎಲ್‌ನಲ್ಲಿ ಇಂಗ್ಲೆಂಡ್‌ ಕ್ರಿಕೆಟಿಗರ ಆಟ ಮುಗಿಯುವ ಹಂತಕ್ಕೆ ಬಂದಿದೆ. ಮೊದಲೇ ನಿಗದಿಯಾದಂತೆ ಇಂಗ್ಲೆಂಡ್‌ ಆಟಗಾರರು ಎ. 26ರ ಬಳಿಕ ಐಪಿಎಲ್‌ಗೆ ಲಭ್ಯರಿರುವುದಿಲ್ಲ.

ಈ ಐಪಿಎಲ್‌ನಲ್ಲಿ ಆಡುತ್ತಿರುವ ಇಂಗ್ಲೆಂಡಿನ ಆಟಗಾರರೆಂದರೆ ಜಾಸ್‌ ಬಟ್ಲರ್‌, ಜಾನಿ ಬೇರ್‌ಸ್ಟೊ, ಬೆನ್‌ ಸ್ಟೋಕ್ಸ್‌, ಮೊಯಿನ್‌ ಅಲಿ, ಜೋ ಡೆನ್ಲಿ ಮತ್ತು ಜೋಫ‌Å ಆರ್ಚರ್‌. ಇವರಲ್ಲಿ ಮೊದಲ 5 ಮಂದಿ ಇಂಗ್ಲೆಂಡಿನ ವಿಶ್ವಕಪ್‌ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆರ್ಚರ್‌ ಪಾಕಿಸ್ಥಾನ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲಿದ್ದಾರೆ.

ರಾಯಲ್ಸ್‌ ಹೊಡೆತ
ಇವರಲ್ಲಿ ದೊಡ್ಡ ಮಟ್ಟದ ನಷ್ಟ ಸಂಭವಿಸುವುದು ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೆ. ಈಗಾಗಲೇ 7ನೇ ಸ್ಥಾನಕ್ಕೆ ಕುಸಿದಿರುವ ರಾಜಸ್ಥಾನ್‌ ತಂಡದಲ್ಲಿ ಇಂಗ್ಲೆಂಡಿನ ಮೂವರು ಆಟಗಾರರಿದ್ದಾರೆ-ಬಟ್ಲರ್‌, ಸ್ಟೋಕ್ಸ್‌ ಮತ್ತು ಆರ್ಚರ್‌. ಇವರಲ್ಲಿ ಮಿಂಚಿದ್ದು ಬಟ್ಲರ್‌ ಮಾತ್ರ. ಅವರು 8 ಪಂದ್ಯಗಳಿಂದ 311 ರನ್‌ ಪೇರಿಸಿದ್ದಾರೆ. ಆದರೆ ಸ್ಟೋಕ್ಸ್‌ 6 ಪಂದ್ಯಗಳಿಂದ ಗಳಿಸಿದ್ದು ಕೇವಲ 104 ರನ್‌. ಆರ್ಚರ್‌ ರಾಜಸ್ಥಾನ್‌ ಪರ ಸರ್ವಾಧಿಕ ವಿಕೆಟ್‌ ಉರುಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ (8 ಇನ್ನಿಂಗ್ಸ್‌, 10 ವಿಕೆಟ್‌). ಡೆತ್‌ ಓವರ್‌ನಲ್ಲಿ ಆರ್ಚರ್‌ ಬೌಲಿಂಗ್‌ ಅತ್ಯಂತ ಘಾತಕವಾಗಿ ಪರಿಣಮಿಸಿತ್ತು.

ಆರ್‌ಸಿಬಿ ತಂಡದ ಆಲ್‌ರೌಂಡರ್‌ ಮೊಯಿನ್‌ ಅಲಿ ಗಮನಾರ್ಹ ಪ್ರದರ್ಶನ ನೀಡುತ್ತ ಬಂದಿದ್ದಾರೆ. 124 ರನ್‌ ಜತೆಗೆ 5 ವಿಕೆಟ್‌ ಸಂಪಾದಿಸಿದ್ದಾರೆ. ಆದರೆ ಈಗಾಗಲೇ ಪ್ಲೇ ಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿರುವುದರಿಂದ ಅಲಿ ನಿರ್ಗಮನ ಆರ್‌ಸಿಬಿ ಪಾಲಿಗೆ ನಷ್ಟವೇನೂ ಉಂಟುಮಾಡದು!
ಕೆಕೆಆರ್‌ ತಂಡದ ಜೋ ಡೆನ್ಲಿ ಈವರೆಗೆ ಆಡಿದ್ದು ಒಂದು ಪಂದ್ಯ ಮಾತ್ರ. ಅದರಲ್ಲಿ “ಗೋಲ್ಡನ್‌ ಡಕ್‌’ ಸಂಕಟಕ್ಕೆ ಸಿಲುಕಿದ್ದಾರೆ.

ಹೈದರಾಬಾದ್‌ಗೆ ನಷ್ಟ
ಜಾನಿ ಬೇರ್‌ಸ್ಟೊ ಹೈದರಾಬಾದ್‌ ತಂಡದ ಪ್ರಮುಖ ಆಟಗಾರನಾಗಿ ಮಿಂಚುತ್ತ ಬಂದಿದ್ದಾರೆ. ವಾರ್ನರ್‌-ಬೇರ್‌ಸ್ಟೊ ಈ ಐಪಿಎಲ್‌ನ ಯಶಸ್ವೀ ಆರಂಭಿಕ ಜೋಡಿಯಾಗಿದೆ. 7 ಪಂದ್ಯಗಳಿಂದ 304 ರನ್‌ ಬಾರಿಸಿದ್ದು ಬೇರ್‌ಸ್ಟೊ ಸಾಧನೆ. ಸದ್ಯ ಈ ಬಾರಿಯ ಗರಿಷ್ಠ ರನ್‌ ಸಾಧಕರಲ್ಲಿ ಬೇರ್‌ಸ್ಟೊ ಅವರಿಗೆ ದ್ವಿತೀಯ ಸ್ಥಾನ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.