ಚಿನ್ನಸ್ವಾಮಿಯಲ್ಲಿ ಅಂಪಾಯರ್‌ ಲಾಂಗ್‌ ಪುಂಡಾಟ!


Team Udayavani, May 8, 2019, 6:24 AM IST

chinnaswamy

ಬೆಂಗಳೂರು: ಕ್ರಿಕೆಟಿಗರು ಅಶಿಸ್ತು ಪ್ರದರ್ಶಿಸುವುದು ಮಾಮೂಲಿ ಸುದ್ದಿ. ಅಂಪಾಯರ್‌ಗಳು ಅಶಿಸ್ತು ಪ್ರದರ್ಶಿಸುವುದನ್ನು ಕೇಳಿದ್ದೀರಾ? ಅದೂ ಸಿಟ್ಟಿನಲ್ಲಿ ಬಾಗಿಲು ಒಡೆದು ಹಾಕುವುದು? ಶನಿವಾರ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು-ಸನ್‌ರೈಸರ್ಸ್‌ ಹೈದರಾಬಾದ್‌ ನಡುವಿನ ಪಂದ್ಯದಲ್ಲಿ ಇಂತಹ ದೊಂದು ಘಟನೆ ಸಂಭವಿಸಿದೆ. ಅಂಪಾಯರ್‌ ನೈಜೆಲ್‌ ಲಾಂಗ್‌ ತಪ್ಪಾಗಿ ನೋಬಾಲ್‌ ತೀರ್ಪು ನೀಡಿದ್ದರು. ಇದರಿಂದ ಸಿಟ್ಟಿಗೆದ್ದ ಬೆಂಗಳೂರು ನಾಯಕ ಕೊಹ್ಲಿ, ಲಾಂಗ್‌ ಜತೆಗೆ ವಾಗ್ವಾದ ನಡೆಸಿದ್ದರು. ಇದೇ ಸಿಟ್ಟಿನಲ್ಲಿದ್ದ ಲಾಂಗ್‌ ಪಂದ್ಯ ಮುಗಿದ ಮೇಲೆ, ಅಂಪಾಯರ್‌ ಕೊಠಡಿಯ ಬಾಗಿಲಿಗೇ ಒದ್ದು ಒಡೆದು ಹಾಕಿದ್ದಾರೆ!

ಒಟ್ಟಾರೆ ನಡೆದಿದ್ದೇನು?
ಹೈದರಾಬಾದ್‌ ಇನ್ನಿಂಗ್ಸ್‌ ವೇಳೆ ಬೆಂಗಳೂರು ವೇಗಿ ಉಮೇಶ್‌ ಯಾದವ್‌ ಬೌಲಿಂಗ್‌ ಮಾಡುತ್ತಿದ್ದರು. ಆಗ ಇಂಗ್ಲೆಂಡ್‌ ಅಂಪಾಯರ್‌ ನೈಜೆಲ್‌ ಲಾಂಗ್‌ ನೋಬಾಲ್‌ ತೀರ್ಪು ನೀಡಿದರು. ಟಿವಿ ಪರಿಶೀಲನೆಯಲ್ಲಿ ಅದು ನೋಬಾಲ್‌ ಅಲ್ಲ ಎಂದು ಕಂಡು ಬಂದಿದೆ. ಇದರಿಂದ ಸಿಟ್ಟಾದ ಬೆಂಗಳೂರು ನಾಯಕ ಕೊಹ್ಲಿ, ಅಂಪಾಯರ್‌ ಜತೆಗೆ ಜೋರಾಗಿ ಮಾತಿನ ಚಕಮಕಿ ನಡೆಸಿದ್ದರು. ಆ ಸಿಟ್ಟನ್ನು ಪಂದ್ಯ ಮುಗಿದ ಮೇಲೆ ಚಿನ್ನಸ್ವಾಮಿ ಮೈದಾನದಲ್ಲಿದ್ದ ಅಂಪಾಯರ್‌ ಕೊಠಡಿಯ ಬಾಗಿಲಿಗೆ ಒದ್ದು ತೀರಿಸಿಕೊಂಡಿದ್ದಾರೆ.

ಕೆಎಸ್‌ಸಿಎ ಆಗ್ರಹ
ಘಟನೆಯ ಅನಂತರ ಕೆಎಸ್‌ಸಿಎ ಸಿಬಂದಿ ಜತೆಗೂ ಬಿರುಸಿನ ವಾಗ್ವಾದ ನಡೆಸಿದ ಲಾಂಗ್‌, 5,000 ರೂ. ದಂಡ ತೆತ್ತಿದ್ದಾರೆ. ಈ ವಿಷಯವನ್ನು ರೆಫ್ರಿ ಗಮನಕ್ಕೆ ತಂದಿರುವ ಕೆಎಸ್‌ಸಿಎ ಕಾರ್ಯದರ್ಶಿ ಸುಧಾಕರ್‌ ರಾವ್‌, ಅಶಿಸ್ತು ತೋರಿದ ಆಟಗಾರರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾದರೆ, ಅಂಪಾಯರ್‌ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಬಿಸಿಸಿಐ ಕಠಿನ ಕ್ರಮ?
ಲಾಂಗ್‌ ಅಶಿಸ್ತು ಪ್ರದರ್ಶಿಸಿರುವುದರಿಂದ ಅವರನ್ನು ಅಂತಿಮ ಪಂದ್ಯದಿಂದ ತೀರ್ಪುಗಾರರ ಪಟ್ಟಿಯಿಂದ ಹೊರಹಾಕುವ ಚಿಂತನೆಯಲ್ಲಿ ಬಿಸಿಸಿಐಯಿದೆ. ಇನ್ನೊಂದು ಕಡೆ ಒಂದೇ ಒಂದು ಘಟನೆಯಿಟ್ಟುಕೊಂಡು ಇಷ್ಟು ಕಠಿನ ಕ್ರಮ ತೆಗೆದು ಕೊಳ್ಳಬೇಕೆ ಎಂಬ ಗೊಂದಲವೂ ಇದೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.