ಗಾಯಕ್ವಾಡ್ ಮನಮೋಹಕ ಅರ್ಧಶತಕ: ಚೆನ್ನೈ ಎದುರು ಮುಗ್ಗರಿಸಿದ ಆರ್ ಸಿಬಿ


Team Udayavani, Oct 25, 2020, 6:41 PM IST

RCB

ದುಬೈ: ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ನೀಡಿದ 145 ರನ್ ಗಳ  ಸಾಧಾರಣ ಮೊತ್ತವನ್ನು ಬೆನ್ನತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ 2 ವಿಕೆಟ್ ನಷ್ಟಕ್ಕೆ  150 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿದೆ.

ರುತುರಾಜ್ ಗಾಯಕ್ವಾಡ್ ಮನಮೋಹಕ ಅರ್ಧಶತಕ ಮತ್ತು ಮಧ್ಯಮ ಕ್ರಮಾಂಕದ ಸಮಯೋಚಿತ ಆಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ಆರ್ ಸಿಬಿ ಎದುರು ಭರ್ಜರಿ ಜಯಸಾಧಿಸಿದೆ.

ಚೆನ್ನೈ ಪರ ಕಣಕ್ಕಿಳಿದ ರುತುರಾಜ್ ಗಾಯಕ್ ವಾಡ್ ಮತ್ತು ಫಾಫ್ ಡು ಪ್ಲೆಸಿಸ್ ತಂಡಕ್ಕೆ  ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್ ಗೆ 46 ರನ್ ಗಳ ಜೊತೆಯಾಟ ನಡೆಸಿತು. ಡುಪ್ಲೆಸಿಸ್ 2 ಸಿಕ್ಸ್ ಹಾಗೂ 2 ಪೋರ್ ಮೂಲಕ 13 ಎಸೆತಗಳಲ್ಲಿ 25 ರನ್ ಗಳಿಸಿದ್ದ ವೇಳೆ ಕ್ರಿಸ್ ಮೋರಿಸ್ ಎಸೆತದಲ್ಲಿ ಸಿರಾಜ್ ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ನಂತರ ಗಾಯಕ್ವಾಡ್ ಜೊತೆಯಾದ ಅಂಬಟಿ ರಾಯುಡು, ಬೆಂಗಳೂರು ಬೌಲರ್ಸ್ ಗಳ ಬೆವರಿಳಿಸಿದರು. ಬೌಂಡರಿ ಸಿಕ್ಸರ್ ಗಳ ಸುರಿಮಳೆಗೈದ ಈ ಜೋಡಿ ತಂಡದ ಮೊತ್ತವನ್ನು 113ರ ಗಡಿ ತಲುಪಿಸಿದರು. ಈ ವೇಳೆ ದಾಳಿಗಿಳಿದ ಚಹಲ್, 2 ಸಿಕ್ಸರ್ ಮೂಲಕ 39 ರನ್ ಗಳಿಸಿದ್ದ, ರಾಯಡುವನ್ನು ಔಟ್ ಮಾಡುವ ಮೂಲಕ ತಂಡಕ್ಕೆ ಅಲ್ಪ ಭರವಸೆ ನೀಡಿದರು. ‘

ಮತ್ತೊಂದೆಡೆ ಗಾಯಕ್ವಾಡ್  ಏಕಾಂಗಿಯಾಗಿ ಹೋರಾಡಿ ಐಪಿಎಲ್ 13ನೇ ಆವೃತ್ತಿಯ ಮೊದಲ ಅರ್ಧಶತಕ ಸಿಡಿಸಿದರು. 51 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 4 ಬೌಂಡರಿಗಳ ನೆರವಿನಿಂದ 65 ರನ್ ಗಳಿಸಿದ ಗಾಯಕ್ವಾಡ್ ನಾಟೌಟ್ ಆಗಿ ಉಳಿದರು. ಕೊನೆಯಲ್ಲಿ ನಾಯಕ ಧೋನಿ ಕೂಡ ಪಂದ್ಯವನ್ನು ಗೆಲ್ಲಿಸುವಲ್ಲಿ ಮಹತ್ವದ ಪಾತ್ರವಹಿಸಿದರು. 21 ಎಸೆತಗಳಲ್ಲಿ 3 ಬೌಂಡರಿ ಸಹಿತ 19 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಅಂತಿಮವಾಗಿ ಚೆನ್ನೈ 18. 4ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 150 ರನ್ ಗಳಿಸುವ ಮೂಲಕ ಜಯಭೇರಿ ಬಾರಿಸಿತು. ಬೆಂಗಳೂರು ಪರ ಕ್ರಿಸ್ ಮೋರಿಸ್ ಹಾಗೂ ಯಜುವೇಂದ್ರ ಚಹಾಲ್ ತಲಾ 1 ವಿಕೆಟ್ ಪಡೆದರು.

ಇದಕ್ಕೂ ಮೊದಲು ನಾಯಕ ಕೊಹ್ಲಿ ಭರ್ಜರಿ ಅರ್ಧಶತಕ ಹಾಗೂ ಎಬಿಡಿ ಗಳಿಸಿದ 39 ರನ್ ಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ  146 ರನ್ ಗಳ ಅಲ್ಪ ಮೊತ್ತವನ್ನು ಪೇರಿಸಿತ್ತು. ಆರ್ ಸಿಬಿಯನ್ನು ತನ್ನ ಮಾರಕ ಬೌಲಿಂಗ್ ಮೂಲಕ ಕಟ್ಟಿಹಾಕಿದ ಮೋನು ಕುಮಾರ್ 3 ವಿಕೆಟ್ ಗಳಿಸಿದರೆ, ಸ್ಯಾಮ್ ಕರನ್ 2 ವಿಕೆಟ್ ಪಡೆದು ಮಿಂಚಿದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.