ಗೆಲುವಿನ ಹಳಿ ಏರಲು ರಾಜಸ್ಥಾನ ಹೋರಾಟ: ಡೆಲ್ಲಿಗೆ ಮತ್ತೊಂದು ಗೆಲುವಿನ ಯೋಜನೆ


Team Udayavani, Oct 9, 2020, 9:12 AM IST

ಗೆಲುವಿನ ಹಳಿ ಏರಲು ರಾಜಸ್ಥಾನ ಹೋರಾಟ: ಡೆಲ್ಲಿಗೆ ಮತ್ತೊಂದು ಗೆಲುವಿನ ಯೋಜನೆ

ಶಾರ್ಜಾ: ಟೂರ್ನಿಯಲ್ಲಿ ಇದುವರೆಗೂ ಸ್ಥಿರ ನಿರ್ವಹಣೆ ನೀಡಿರುವ ಡೆಲ್ಲಿ ಕ್ಯಾಪಿಟಲ್ಸ್‌ ಶುಕ್ರವಾರದ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಶಾರ್ಜಾ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಸೆಣಸಾಟ ನಡೆಸಲಿದೆ. ಈ ಪಂದ್ಯ ಮತ್ತೂಮ್ಮೆ ಸಿಕ್ಸರ್‌ ಸುರಿಮಳೆಗೆ ಸಾಕ್ಷಿಯಾಗುವ ನಿರೀಕ್ಷೆ ಇದೆ. ಉಭಯ ತಂಡಗಳಿಗೂ ಯುವ ಆಟಗಾರರೇ ಹೆಚ್ಚಿನ ಬಲ ತುಂಬಿರುವುದರಿಂದ ಈ ಕಾದಾಟ  ಕುತೂಹಲಕಾರಿ ಎನಿಸಲಿದೆ.

ಡೆಲ್ಲಿ ಸಮರ್ಥ ತಂಡ: ಈ ಬಾರಿಯ ಐಪಿಎಲ್‌ ಕೂಟದಲ್ಲಿ ಸೈಲೆಂಟ್‌ ಆಗಿ ಆಟವಾಡುತ್ತಾ ಎಲ್ಲರ ಮನಗೆದ್ದಿರುವ ಡೆಲ್ಲಿ ಮೊದಲು ಪ್ಲೇ ಆಫ್ಗೆ ಪ್ರವೇಶ ಪಡೆಯುವ ಸೂಚನೆಯೊಂದನ್ನು ನೀಡಿದೆ. ಈಗಾಗಲೇ ಆಡಿದ 5 ಪಂದ್ಯಗಳಲ್ಲಿ 4 ಪಂದ್ಯ ಗೆದ್ದು 8 ಅಂಕದೊಂದಿಗೆ 2ನೇ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಡೆಲ್ಲಿ ಈ ಪಂದ್ಯವನ್ನು ಗೆದ್ದು ಅಗ್ರಸ್ಥಾನಕ್ಕೇರಿ ನಿಟ್ಟುಸಿರು ಬಿಡುವ ಯೋಜನೆ ಅಯ್ಯರ್‌ ಬಳಗದ್ದಾಗಿದೆ. ಡೆಲ್ಲಿ ತಂಡದ ಬ್ಯಾಟಿಂಗ್‌ ವಿಭಾಗದಲ್ಲಿ ಭಾರತೀಯರು ಮಿಂಚುತ್ತಿರುವುದು ತಂಡಕ್ಕೆ ಹೆಚ್ಚು ಸಹಕಾರಿಯಾಗಿದೆ.

ಪೃಥ್ವಿಶಾ, ಶಿಖರ್‌ ಧವನ್‌, ನಾಯಕ ಶ್ರೇಯಸ್‌ ಅಯ್ಯರ್‌ ಶ್ರೇಷ್ಠ ಪ್ರದರ್ಶನ ತೋರುತ್ತಿದ್ದಾರೆ. ಬೌಲಿಂಗ್‌ನಲ್ಲಿ ರಬಾಡ, ಅನ್ರಿಚ್‌ ನೋರ್ಜೆ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ. ಕಳೆದ ಆರ್‌ಸಿಬಿ ವಿರುದ್ಧ ಮಿಂಚಿದ್ದ ಮಾರ್ಕಸ್‌ ಸ್ಟೋಯಿನಿಸ್‌ ಆಲ್‌ ರೌಂಡ್‌ ಪ್ರದರ್ಶನ ಕೂಡ ತಂಡಕ್ಕೆ ಪ್ಲಸ್‌ ಪಾಯಿಂಟ್‌. ಆದರೆ ಅನುಭವಿ ಸ್ಪಿನ್ನರ್‌ ಅಮಿತ್‌ ಮಿಶ್ರಾ ಗಾಯದ ಸಮಸ್ಯೆಯಿಂದ ಕೂಟದಿಂದ ಹೊರನಡೆದಿದ್ದು ಡೆಲ್ಲಿ ಸ್ಪಿನ್‌ ವಿಭಾಗಕ್ಕೆ ಕೊಂಚ ಮಟ್ಟಿನ ಹಿನ್ನಡೆಯಾಗುವುದಂತು ನಿಜ

ಇದು ಸಣ್ಣ ಅಂಗಳ
ಶಾರ್ಜಾ ಮೈದಾನ ಟಿ20 ಮಾದರಿಯ ಕ್ರಿಕೆಟಿಗೆ ಹೇಳಿ ಮಾಡಿಸಿದಂತಿದೆ ಇಲ್ಲಿ ಹೊಡಿಬಡಿ ಆಟ ಸರ್ವೆಸಾಮಾನ್ಯ ಇಲ್ಲಿ ಆಡಿದ ಬಹುತೇಕ ಪಂದ್ಯಗಳಲ್ಲಿ 200 ಪ್ಲಸ್‌ ಮೊತ್ತ ದಾಖಲಾಗಿದ್ದರೂ ಚೇಸಿಂಗ್‌ ಮಾಡಿ ಎದುರಾಳಿ ತಂಡಗಳು ಗೆದ್ದ ಅದೆಷ್ಟೊ ನಿದರ್ಶನಗಳಿವೆ ಆದ್ದರಿಂದ ಈ ಪಂದ್ಯವೂ ಸಿಕ್ಸರ್‌ ಬೌಂಡರಿಗಳ ಸುರಿಮಳೆಗೆ ಕಮ್ಮಿ ಇರಲಾರದು. ರಾಜಸ್ಥಾನ ಇಲ್ಲಿ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವುದರಿಂದ ಈ ಪಂದ್ಯದಲ್ಲಿಯೂ ಮೇಲುಗೈ ಸಾಧಿಸುವ ಸಾಧ್ಯತೆಯೂ ಹೆಚ್ಚಿದೆ ಎನ್ನಲಡ್ಡಿಯಿಲ್ಲ.

ಇದನ್ನೂ ಓದಿ:ರಾಹುಲ್‌ ನಾಮ್‌ ತೊ ಸುನಾ ಹಿ ಹೋಗಾ!

ರಾಜಸ್ಥಾನಕ್ಕೆ ಬ್ಯಾಟಿಂಗ್‌ ಚಿಂತೆ ಮೊದಲೆರಡು ಪಂದ್ಯಗಳಲ್ಲಿ ಸ್ಫೋಟಕ ಬ್ಯಾಟಿಂಗ್‌ ನಡೆಸಿ ಮಿಂಚಿದ್ದ ಸಂಜು ಸ್ಯಾಮ್ಸನ್‌, ನಾಯಕ ಸ್ಟೀವನ್‌ ಸ್ಮಿತ್‌ ಇದೀಗ ಸತತ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸುತ್ತಿರುವುದು ತಂಡದ ವ್ಯವಸ್ಥಾಪಕರಿಗೆ ತಲೆನೋವು ತಂದಿದೆ. ಯುವ ಆಟಗಾರ ಯಶಸ್ವಿ ಜೈಸ್ವಾಲ್‌ ಕೂಡ ತಮ್ಮ ಅವಕಾಶವನ್ನು ಸಮರ್ಥಿ ಸಿಕೊಳ್ಳುವಲ್ಲಿ ವಿಫ‌ಲರಾಗಿದ್ದಾರೆ. ಕಳೆದ ಪಂದ್ಯದಲ್ಲಿ ಮೇಜರ್‌ ಬದಲಾವಣೆ ಮಾಡಿ ಯಶಸ್ಸು ಕಾಣದ ರಾಜಸ್ಥಾನ್‌ ಈ ಪಂದ್ಯಕ್ಕೂ ಕೆಲ ಬದಲಾವಣೆ ಮಾಡಿದರೂ ಅಚ್ಚರಿಯಿಲ್ಲ. ದುಬಾರಿ ಸ್ಪೆಲ್‌ ನಡೆಸಿದ ಅಂಕಿತ್‌ ರಜಪೂತ್‌ ಬದಲಿಗೆ ವರಣ್‌ ಆ್ಯರನ್‌ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಆರಂಭಿಕನಾಗಿ ಜೈಸ್ವಾಲ್‌ ಬದಲು ಮನನ್‌ ವೋಹ್ರಾ ಬ್ಯಾಟ್‌ ಬೀಸಲೂಬಹುದು.

ರಾಜಸ್ಥಾನ: ಜೈಸ್ವಾಲ್‌/ಮನನ್‌ ವೋಹ್ರಾ, ಸ್ಟೀವನ್‌ ಸ್ಮಿತ್‌ (ನಾಯಕ), ಜಾಸ್‌ ಬಟ್ಲರ್‌, ಸಂಜು ಸ್ಯಾಮ್ಸನ್‌, ಮಹಿಪಾಲ್‌ ಲೊನ್ರೊರ್‌, ರಾಹುಲ್‌ ತೆವಾತಿಯ, ಜೋಫ್ರಾ ಆರ್ಚರ್‌, ಟಾಮ್‌ ಕರನ್‌, ಶ್ರೇಯಸ್‌ ಗೋಪಾಲ್‌, ಅಂಕಿತ್‌ ರಜಪೂತ್‌/ ವರುಣ್‌ ಆ್ಯರನ್‌ ಕಾರ್ತಿಕ್‌ ತ್ಯಾಗಿ.

ಡೆಲ್ಲಿ ಕ್ಯಾಪಿಟಲ್ಸ್‌: ಪೃಥ್ವಿ ಶಾ, ಶಿಖರ್‌ ಧವನ್‌, ಶ್ರೇಯಸ್‌ ಅಯ್ಯರ್‌ (ನಾಯಕ), ರಿಷಭ್‌ ಪಂತ್‌, ಶಿಮ್ರಾನ್‌ ಹೆಟ್‌ಮೇರ್‌, ಮಾರ್ಕಸ್‌ ಸ್ಟೋಯಿನಿಸ್‌, ಆರ್‌. ಅಶ್ವಿ‌ನ್‌, ಅಕ್ಷರ್‌ ಪಟೇಲ್‌, ಹರ್ಷಲ್‌ ಪಟೇಲ್‌, ಕಗಿಸೊ ರಬಾಡ, ಅನ್ರಿಚ್‌ ನೋರ್ಜೆ

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.