ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಉಳಿದಿರುವುದು ಇದೊಂದೆ ಮಾರ್ಗ: ಕೊಹ್ಲಿಗೆ ಗೌತಮ್ ‘ಗಂಭೀರ’ ಸಲಹೆ
Team Udayavani, Nov 7, 2020, 11:50 AM IST
ಅಬುಧಾಬಿ: ‘ಈ ಸಲ ಕಪ್ ನಮ್ಮದೇ’ ಎಂದು ಪ್ರತಿ ಬಾರಿಯಂತೆ ಈ ಸಲವೂ ಹೇಳಿಕೊಂಡು ಟೂರ್ನಿ ಆರಂಭಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೆ ಮುಗ್ಗರಿಸಿದೆ. ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೋತು ಕೂಟದಿಂದಲೇ ಹೊರಬಿದ್ದಿದೆ.
ಕಳಪೆ ಆಟದ ಕುರಿತಂತೆ ಆರ್ ಸಿಬಿ ಮತ್ತು ನಾಯಕ ವಿರಾಟ್ ಕೊಹ್ಲಿ ವಿರುದ್ಧ ಭಾರಿ ಅಸಮಾಧಾನ ಕೇಳಿಬಂದಿದೆ. ಅಭಿಮಾನಿಗಳು ವಿರಾಟ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದರ ಮಧ್ಯೆ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ಕೊಹ್ಲಿಗೆ ‘ಗಂಭೀರ’ ಸಲಹೆ ನೀಡಿದ್ದಾರೆ.
ಐಪಿಎಲ್ ಕೂಟದಲ್ಲಿ ಇದುವರೆಗೆ ಎಂಟು ಬಾರಿ ಆರ್ ಸಿಬಿ ತಂಡವನ್ನು ಮುನ್ನಡೆಸಿರುವ ವಿರಾಟ್ ಕೊಹ್ಲಿ ಇದುವರೆಗೂ ಒಂದೂ ಕಪ್ ಗೆದ್ದಿಲ್ಲ. ಹೀಗಾಗಿ ಆರ್ ಸಿಬಿಯ ನಾಯಕತ್ವವನ್ನು ವಿರಾಟ್ ತ್ಯಜಿಸಬೇಕು ಎಂದು ಗಂಭೀರ್ ಹೇಳಿದ್ದಾರೆ.
ಎಂಟು ಬಾರಿ ನಾಯಕನಾಗಿ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ ಎಂದಾದರೆ ನಾಯಕನೇ ಜವಾಬ್ದಾರಿ ಹೊರಬೇಕು. ಎಂಟು ವರ್ಷದಷ್ಟು ದೊಡ್ಡ ಸಮಯವನ್ನೇ ಫ್ರಾಂಚೈಸಿ ನೀಡಿದೆ. ಬೇರೆ ಯಾವ ನಾಯಕನಿದ್ದಾನೆ? ಯಾವ ಆಟಗಾರ ಕಪ್ ಗೆಲ್ಲಲಾಗದೇ ಇಷ್ಟು ಸಮಯ ಒಂದೇ ತಂಡದಲ್ಲಿದ್ದಾನೆ? ಎಂದು ಗಂಭೀರ್ ಖಾಸಗಿ ಕ್ರೀಡಾ ಕಾರ್ಯಕ್ರಮದಲ್ಲಿ ಹೇಳಿದರು.
ಹೈದರಾಬಾದ್ ವಿರುದ್ದದ ಪಂದ್ಯದಲ್ಲಿ ಆರ್ ಸಿಬಿ ಆರು ವಿಕೆಟ್ ಅಂತರದ ಸೋಲನುಭವಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ ಏಳು ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿದ್ದರೆ, ಗುರಿ ಬೆನ್ನಟ್ಟಿದ ಹೈದರಾಬಾದ್ ನಾಲ್ಕು ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?