ಧೋನಿ – ಸ್ಮಿತ್‌ ತಂಡಗಳ ಮೇಲಾಟ

ಮೊದಲ ಪಂದ್ಯ ಗೆದ್ದ ಉತ್ಸಾಹದಲ್ಲಿ ಚೆನ್ನೈ; ಸ್ಟೋಕ್ಸ್‌, ಬಟ್ಲರ್‌ ಗೈರಿನ ಚಿಂತೆಯಲ್ಲಿ ರಾಜಸ್ಥಾನ್‌

Team Udayavani, Sep 21, 2020, 9:33 PM IST

CSKಧೋನಿ – ಸ್ಮಿತ್‌ ತಂಡಗಳ ಮೇಲಾಟ

ಶಾರ್ಜಾ: ಯುಎಇಯ ತೃತೀಯ ಕ್ರೀಡಾಂಗಣವಾದ “ಶಾರ್ಜಾ ಇಂಟರ್‌ನ್ಯಾಶನಲ್‌ ಸ್ಟೇಡಿಯಂ’ ಮಂಗಳವಾರ ಐಪಿಎಲ್‌ಗೆ ತೆರೆದುಕೊಳ್ಳಲಿದೆ. ಈಗಾಗಲೇ ಉದ್ಘಾಟನಾ ಪಂದ್ಯವನ್ನು ಗೆದ್ದ ಖುಷಿಯಲ್ಲಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಸ್ಟೀವನ್‌ ಸ್ಮಿತ್‌ ನೇತೃತ್ವದ ರಾಜಸ್ಥಾನ್‌ ರಾಯಲ್ಸ್‌ ಇಲ್ಲಿ ಮುಖಾಮುಖೀಯಾಗಲಿವೆ.

ಮೇಲ್ನೋಟಕ್ಕೆ ಚೆನ್ನೈ ಈ ಪಂದ್ಯದ ನೆಚ್ಚಿನ ತಂಡ. ಶನಿವಾರದ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈಯನ್ನು ಮಣಿಸುವ ಮೂಲಕ ಧೋನಿ ಪಡೆ ಶುಭಾರಂಭ ಮಾಡಿದೆ. ಕಳೆದ ವರ್ಷದ ಫೈನಲ್‌ ಸೋಲಿಗೆ ಭರ್ಜರಿಯಾಗಿಯೇ ಸೇಡು ತೀರಿಸಿಕೊಂಡಿದೆ. ಯುವ ಪಡೆಯನ್ನೂ ನಾಚಿಸುವ ಸಾಮರ್ಥ್ಯ ತಮ್ಮದು ಎಂಬುದನ್ನು ಈ ಹಿರಿಯರ ಬಳಗ ಪ್ರಸಕ್ತ ಋತುವಿನಲ್ಲೂ ಸಾಬೀತುಪಡಿಸುವ ಸೂಚನೆಯೊಂದನ್ನು ರವಾನಿಸಿದೆ.

ಆದರೆ ನೆಚ್ಚಿನ ತಂಡವೇ ಗೆಲ್ಲಬೇಕಿಲ್ಲ, ಚುಟಕು ಕ್ರಿಕೆಟ್‌ನಲ್ಲಿ ಫ‌ಲಿತಾಂಶ ಉಲ್ಟಾ ಹೊಡೆಯುವ ಎಲ್ಲ ಸಾಧ್ಯತೆ ಇದೆ ಎಂಬುದನ್ನು ರವಿವಾರ ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್‌ ತೋರಿಸಿ ಕೊಟ್ಟಿದೆ. ಹೀಗಾಗಿ ರಾಜಸ್ಥಾನ್‌ ತಂಡವನ್ನು ಲಘುವಾಗಿ ಪರಿಗಣಿಸಿದರೆ ಅದು ಚೆನ್ನೈಗೆ ಅಪಾಯ ತಂದೊಡ್ಡಲೂಬಹುದು.

ವಿದೇಶಿ ಆಟಗಾರರ ಸಮಸ್ಯೆ
ನಿಜ, ರಾಜಸ್ಥಾನ್‌ ತಂಡದ ನಾಯಕ ಸ್ಟೀವನ್‌ ಸ್ಮಿತ್‌ ಇತ್ತೀಚಿನ ದಿನಗಳಲ್ಲಿ ಪೂರ್ತಿ ಫಿಟ್‌ನೆಸ್‌ ಹೊಂದಿಲ್ಲ. ಅಲ್ಲದೆ ಸ್ಟಾರ್‌ ಆಟಗಾರ ಬೆನ್‌ ಸ್ಟೋಕ್ಸ್‌ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಮತ್ತೋರ್ವ ಪ್ರಮುಖ ಆಟಗಾರ ಜಾಸ್‌ ಬಟ್ಲರ್‌ ಆಗಮಿಸಿದರೂ ಅವರ ಕ್ವಾರಂಟೈನ್‌ ಅವಧಿ ಮುಗಿದಿಲ್ಲ. ಈ ಮೂರು ವಿದೇಶಿ ಕ್ರಿಕೆಟಿಗರ ಸಮಸ್ಯೆಗಳನ್ನು ನಿಭಾಯಿಸುವುದರ ಮೇಲೆ ರಾಜಸ್ಥಾನ್‌ ಯಶಸ್ಸು ಅಡಗಿದೆ.
ಉಳಿದಂತೆ ಫಾರಿನ್‌ ಕ್ರಿಕೆಟಿಗರ ಯಾದಿಯಲ್ಲಿ ಗೋಚರಿಸುವ ಪ್ರಮುಖರೆಂದರೆ ಆ್ಯಂಡ್ರೂ ಟೈ, ಜೋಫ್ರ ಆರ್ಚರ್‌, ಡೇವಿಡ್‌ ಮಿಲ್ಲರ್‌, ಟಾಮ್‌ ಕರನ್‌ ಮತ್ತು ಒಶೇನ್‌ ಥಾಮಸ್‌. 4 ಮಂದಿ ವಿದೇಶಿಗರ ಆಯ್ಕೆ ತುಸು ಜಟಿಲವಾಗಬಹುದು.

ಉಳಿದಂತೆ ಈ ತಂಡದಲ್ಲಿ ಭಾರತೀಯರದ್ದೇ ಪ್ರಾಬಲ್ಯ. ಆದರೆ ಕಳೆದ 6 ತಿಂಗಳಿಂದ ಸೂಕ್ತ ಅಭ್ಯಾಸವನ್ನೂ ನಡೆಸದ ಭಾರತದ ಕ್ರಿಕೆಟಿಗರ ಫಾರ್ಮ್ ಮೇಲೆ ಎಷ್ಟರ ಮಟ್ಟಿಗೆ ನಂಬಿಕೆ ಇಡಬಹುದೆಂಬುದೊಂದು ಪ್ರಶ್ನೆ. ಸಂಜು ಸ್ಯಾಮ್ಸನ್‌, ರಾಬಿನ್‌ ಉತ್ತಪ್ಪ, ಜೈದೇವ್‌ ಉನಾದ್ಕತ್‌, ವರುಣ್‌ ಆರೋನ್‌, ಶ್ರೇಯಸ್‌ ಗೋಪಾಲ್‌ ಅವರ ಫಾರ್ಮ್ ನಿರ್ಣಾಯಕ. ಹಾಗೆಯೇ ಯಶಸ್ವಿ ಜೈಸ್ವಾಲ್‌, ಕಾರ್ತಿಕ್‌ ತ್ಯಾಗಿ, ರಿಯಾನ್‌ ಪರಾಗ್‌ ಮೊದಲಾದ ಅಂಡರ್‌-19 ತಂಡದ ಹೀರೋಗಳ ಮೇಲೆ ಎಲ್ಲರೂ ಒಂದು ಕಣ್ಣಿಟ್ಟಿದ್ದಾರೆ.

ಚೆನ್ನೈ ಓಪನಿಂಗ್‌ ವೈಫ‌ಲ್ಯ
ಚೆನ್ನೈ ಮೊದಲ ಪಂದ್ಯವನ್ನು ಗೆದ್ದರೂ ಓಪನಿಂಗ್‌ ಕೈಕೊಟ್ಟಿದೆ. ಮುರಳಿ ವಿಜಯ್‌, ಶೇನ್‌ ವಾಟ್ಸನ್‌ ಒಟ್ಟು ಸೇರಿ ಗಳಿಸಿದ್ದು ಐದೇ ರನ್‌. ಆದರೆ ಅಂಬಾಟಿ ರಾಯುಡು-ಫಾ ಡು ಪ್ಲೆಸಿಸ್‌ ಸಿಡಿದು ನಿಲ್ಲುವ ಮೂಲಕ ಮುಂಬೈಗೆ ನೀರು ಕುಡಿಸಿದರು. ಸ್ಯಾಮ್‌ ಕರನ್‌ ಆಲ್‌ರೌಂಡ್‌ ಶೋ ಮೂಲಕ ಬ್ರಾವೊ ಸ್ಥಾನವನ್ನು ತುಂಬಬಲ್ಲ ಸೂಚನೆ ನೀಡಿದ್ದಾರೆ. ಗೆಲುವಿನ ಲಯದಲ್ಲಿ ಮುಂದುವರಿಯುವುದು ನಮ್ಮ ಯೋಜನೆ ಎಂದಿದ್ದಾರೆ ಧೋನಿ.

 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.