ರಾಹುಲ್ Vs ಸ್ಮಿತ್:  ರಾಜಸ್ಥಾನಕ್ಕೆ ಬಟ್ಲರ್‌ ಬಲ; ಪಂಜಾಬ್‌ ನಿರಾಳ


Team Udayavani, Sep 27, 2020, 7:44 AM IST

ರಾಹುಲ್ Vs ಸ್ಮಿತ್:  ರಾಜಸ್ಥಾನಕ್ಕೆ ಬಟ್ಲರ್‌ ಬಲ; ಪಂಜಾಬ್‌ ನಿರಾಳ

ಶಾರ್ಜಾ: ಗೆಲುವಿನೊಂದಿಗೆ ಅಭಿಯಾನ ಆರಂಭಿಸಿದ ರಾಜಸ್ಥಾನ್‌ ರಾಯಲ್ಸ್‌ ಮತ್ತು ಗೆಲುವಿನ ಹಳಿ ಏರುವಲ್ಲಿ ಯಶಸ್ವಿಯಾದ ಕಿಂಗ್ಸ್‌ ಇಲೆವೆನ್‌ ತಂಡಗಳು ರವಿವಾರ ಶಾರ್ಜಾದಲ್ಲಿ ಸೆಣಸಾಟ ನಡೆಸಲಿವೆ. ಹಿಂದಿನ ಪಂದ್ಯಗಳಲ್ಲಿ ಎರಡೂ ತಂಡಗಳು ತೋರ್ಪಡಿಸಿದ ಸ್ಫೋಟಕ ಬ್ಯಾಟಿಂಗ್‌ ಪರಾಕ್ರಮದಿಂದ ಈ ಮುಖಾಮುಖೀ ತೀವ್ರ ಕುತೂಹಲ ಕೆರಳಿಸಿದೆ.

ಚೆನ್ನೈ ವಿರುದ್ಧ 216 ರನ್‌ ಪೇರಿಸಿ ಮೆರೆದಾಡಿದ್ದ ರಾಜಸ್ಥಾನ್‌ ಪಾಲಿಗೆ ರವಿವಾರ ಶುಭ ಸಮಾಚಾರವೊಂದು ಕಾದಿದೆ. ಇಂಗ್ಲೆಂಡಿನ ಬಿಗ್‌ ಹಿಟ್ಟರ್‌ ಜಾಸ್‌ ಬಟ್ಲರ್‌ ಅವರ ಕ್ವಾರಂಟೈನ್‌ ಅವಧಿ ಮುಗಿದಿದ್ದು, ಪಂಜಾಬ್‌ ಎದುರಿನ ಪಂದ್ಯಕ್ಕೆ ಲಭ್ಯರಾಗುತ್ತಾರೆ. ಅವರು ಯಶಸ್ವಿ ಜೈಸ್ವಾಲ್‌ ಜತೆ ಇನ್ನಿಂಗ್ಸ್‌ ಆರಂಭಿಸುವುದು ಖಚಿತ. ಆಗ, ಸ್ಟೀವನ್‌ ಸ್ಮಿತ್‌ ಮಧ್ಯಮ ಕ್ರಮಾಂಕಕ್ಕೆ ವಾಪಸಾಗಲಿದ್ದಾರೆ.

ಜಾಸ್‌ ಬಟ್ಲರ್‌ ಅವರಿಗಾಗಿ ಡೇವಿಡ್‌ ಮಿಲ್ಲರ್‌ ಜಾಗ ಖಾಲಿ ಮಾಡುವ ಸಾಧ್ಯತೆ ಇದೆ. ಕೀಪಿಂಗ್‌ ಜವಾಬ್ದಾರಿ ಬಟ್ಲರ್‌ ಹೆಗಲೇರಿದರೆ, ಸಂಜು ಸ್ಯಾಮ್ಸನ್‌ ಇನ್ನಷ್ಟು ಬಿಂದಾಸ್‌ ಆಗಿ ಬ್ಯಾಟ್‌ ಬೀಸಬಹುದು.

ಹರಿತಗೊಳ್ಳಬೇಕಿದೆ ರಾಜಸ್ಥಾನ್‌ ಬೌಲಿಂಗ್‌

ಚೆನ್ನೈ ವಿರುದ್ಧ ಸಿಡಿದು ನಿಂತ ಸಂಜು ಸ್ಯಾಮ್ಸನ್‌ ಕೇವಲ 32 ಎಸೆತಗಳಿಂದ 74 ರನ್‌ ಸಿಡಿಸಿ ಈಗಾಗಲೇ ಅಪಾಯದ ಮುನ್ಸೂಚನೆ ನೀಡಿದ್ದಾರೆ. ಸ್ಪಿನ್‌ ಎಸೆತಗಳನ್ನು ಕಣ್ಣುಮುಚ್ಚಿ ಬಾರಿಸಿದ ಸ್ಯಾಮ್ಸನ್‌ ಬರೋಬ್ಬರಿ 9 ಸಿಕ್ಸರ್‌ ಸಿಡಿಸಿದ್ದರು. ಪಂಜಾಬ್‌ ವಿರುದ್ಧವೂ ಅವರು ಇದೇ ಆಟವನ್ನು ಪುನರಾವರ್ತಿಸಿದರೆ ರಾಜಸ್ಥಾನಕ್ಕೆ ಲಾಭ ಖಚಿತ. ಸ್ಮಿತ್‌ ಕೂಡ 69 ರನ್‌ ಬಾರಿಸಿ ಕಪ್ತಾನನ ಜವಾಬ್ದಾರಿಯನ್ನು ಚೊಕ್ಕವಾಗಿ ನಿಭಾಯಿಸಿದ್ದರು. ಕೊನೆಯಲ್ಲಿ ಜೋಫ್ರಾ ಆರ್ಚರ್‌ 8 ಎಸೆತಗಳಿಂದ 4 ಸಿಕ್ಸರ್‌ ಸಿಡಿಸಿದ್ದನ್ನು ಮರೆಯಲಾಗದು.

ಆದರೆ ರಾಜಸ್ಥಾನ್‌ ಬೌಲಿಂಗ್‌ ಇನ್ನಷ್ಟು ಹರಿತಗೊಳ್ಳಬೇಕಿದೆ. ಪಂಜಾಬ್‌ ಬ್ಯಾಟಿಂಗ್‌ ಸರದಿ ಚೆನ್ನೈಗಿಂತ ಬಲಿಷ್ಠವಾಗಿರುವುದೇ ಇದಕ್ಕೆ ಕಾರಣ.

ಚಳಿ ಹಿಡಿಸಿದ ರಾಹುಲ್‌

ಚಳಿ ಹಿಡಿಸಿದ ರಾಹುಲ್‌

ಆರ್‌ಸಿಬಿ ಎದುರಿನ ಮುಖಾಮುಖೀಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದ ಕೆ.ಎಲ್‌.ರಾಹುಲ್‌ ಈಗ ಪಂಜಾಬ್‌ ತಂಡದ ದೈತ್ಯ ಶಕ್ತಿಯಾಗಿ ಬೆಳೆದಿದ್ದು, ಎದುರಾಳಿಗಳಿಗೆಲ್ಲ ಚಳಿ ಹಿಡಿಸಿದ್ದಾರೆ. ಜತೆಗೆ ಮತ್ತೋರ್ವ ಬಿಗ್‌ ಹಿಟ್ಟರ್‌ ಕ್ರಿಸ್‌ ಗೇಲ್‌ ಕೂಡ ರೇಸ್‌ನಲ್ಲಿದ್ದಾರೆ. ಮೂರನೇ ಪಂದ್ಯದಲ್ಲಾದರೂ “ಯುನಿವರ್ಸ್‌ ಬಾಸ್‌’ ಆಡಬಹುದೇ ಎಂಬ ನಿರೀಕ್ಷೆ ಎಲ್ಲರದು. ಅವರು ನಿಕೋಲಸ್‌ ಪೂರಣ್‌ ಜಾಗಕ್ಕೆ ಬರಬಹುದು. ಪೂರಣ್‌ ಕೂಡ ಈವರೆಗೆ ಪರಿಪೂರ್ಣ ಪ್ರದರ್ಶನ ನೀಡುವಲ್ಲಿ ವಿಫ‌ಲರಾಗಿದ್ದಾರೆ.

ಆಲ್‌ರೌಂಡರ್‌ ಜಿಮ್ಮಿ ನೀಶಮ್‌ ತಂಡದ ಮತ್ತೋರ್ವ ಅಪಾಯಕಾರಿ ಆಟಗಾರ. ಜತೆಗೆ ಗ್ಲೆನ್‌ ಮ್ಯಾಕ್ಸ್‌ವೆಲ್‌ ಸಿಡಿದು ನಿಲ್ಲುವುದನ್ನೂ ತಂಡ ನಿರೀಕ್ಷಿಸುತ್ತಿದೆ.

ಆರ್‌ಸಿಬಿಯನ್ನು ದಿಕ್ಕಾಪಾಲು ಮಾಡಿದ ಶಮಿ, ಕಾಟ್ರೆಲ್‌, ಬಿಶ್ನೋಯ್‌, ಮುರುಗನ್‌ ಅಶ್ವಿ‌ನ್‌, ಟೆವಾಟಿಯಾ ಅವರನ್ನೊಳಗೊಂಡ ಬೌಲಿಂಗ್‌ ಪಡೆ ರಾಜಸ್ಥಾನ ವಿರುದ್ಧವೂ ಮೇಲುಗೈ ಸಾಧಿಸೀತೇ ಎಂಬುದು ಮತ್ತೂಂದು ಕೌತುಕ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.