ಖಾತೆ ತೆರೆದ ಕೆಕೆಆರ್‌; ಮತ್ತೆ ಎಡವಿದ ಹೈದರಾಬಾದ್‌


Team Udayavani, Sep 27, 2020, 12:22 AM IST

ಖಾತೆ ತೆರೆದ ಕೆಕೆಆರ್‌; ಮತ್ತೆ ಎಡವಿದ ಹೈದರಾಬಾದ್‌

ಅಬುಧಾಬಿ: ಸರ್ವಾಂಗೀಣ ಆಟ ಪ್ರದರ್ಶಿಸಿದ ಕೋಲ್ಕತಾ ನೈಟ್‌ರೈಡರ್ 2020ನೇ ಸಾಲಿನ ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆದಿದೆ. ಶನಿವಾರದ ಮುಖಾಮುಖೀಯಲ್ಲಿ ಸನ್‌ರೈಸರ್ ಹೈದರಾಬಾದ್‌ಗೆ 7 ವಿಕೆಟ್‌ಗಳ ಸೋಲುಣಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಹೈದರಾಬಾದ್‌ 4 ವಿಕೆಟಿಗೆ ಕೇವಲ 142 ರನ್‌ ಗಳಿಸಿದರೆ, ಕೆಕೆಆರ್‌ 18 ಓವರ್‌ಗಳಲ್ಲಿ 3 ವಿಕೆಟಿಗೆ 145 ರನ್‌ ಬಾರಿಸಿತು. ವಾರ್ನರ್‌ ಪಡೆ ಸತತ ಎರಡೂ ಪಂದ್ಯಗಳಲ್ಲಿ ಮುಗ್ಗರಿಸಿತು.

ಚೇಸಿಂಗ್‌ ವೇಳೆ ಆರಂಭಕಾರ ಶುಭಮನ್‌ ಗಿಲ್‌ ಮತ್ತು ಇಯಾನ್‌ ಮಾರ್ಗನ್‌ ಮುರಿಯದ 4ನೇ ವಿಕೆಟಿಗೆ 92 ರನ್‌ ಪೇರಿಸಿದರು. ಗಿಲ್‌ 70 (62 ಎಸೆತ, 5 ಬೌಂಡರಿ, 2 ಸಿಕ್ಸರ್‌) ಮತ್ತು ಮಾರ್ಗನ್‌ 42 ರನ್‌ (29 ಎಸೆತ, 3 ಬೌಂಡರಿ, 2 ಸಿಕ್ಸರ್‌) ರನ್‌ ಬಾರಿಸಿ ಅಜೇಯರಾಗಿ ಉಳಿದರು.

ಕೆಕೆಆರ್‌ ಬಿಗಿ ದಾಳಿ
ಡೇವಿಡ್‌ ವಾರ್ನರ್‌ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಳ್ಳುವ ನಿರ್ಧಾರಕ್ಕೆ ಬಂದರು. ಆದರೆ ಜಾನಿ ಬೇರ್‌ಸ್ಟೊ ಐದೇ ರನ್ನಿಗೆ ನಿರ್ಗಮಿಸಿದ್ದು ತಂಡಕ್ಕೆ ದೊಡ್ಡ ಆಘಾತವಿಕ್ಕಿತು. ಅವರನ್ನು ಬೌಲ್ಡ್‌ ಮಾಡುವ ಮೂಲಕ ಪ್ಯಾಟ್‌ ಕಮಿನ್ಸ್‌ ಕಳೆದ ಪಂದ್ಯದ ವೈಫ‌ಲ್ಯವನ್ನು ಬದಿಗೊತ್ತಿದರು. ಅವರು ಮೊದಲ ಸ್ಪೆಲ್‌ನ 3 ಓವರ್‌ಗಳಲ್ಲಿ ನೀಡಿದ್ದು ಬರೀ 11 ರನ್‌.

ಇನ್ನೊಂದು ಬದಿಯಲ್ಲಿ ನಾಯಕ ವಾರ್ನರ್‌ ಕ್ರೀಸ್‌ ಆಕ್ರಮಿಸಿಕೊಳ್ಳುವ ಸೂಚನೆ ನೀಡಿದರೂ ಅವರಿಗೆ ಲೆಗ್‌ಬ್ರೇಕ್‌ ಬೌಲರ್‌ ವರುಣ್‌ ಚಕ್ರವರ್ತಿ ಎಸೆತವೊಂದು ವಂಚಿಸಿತು. 36 ರನ್‌ ಮಾಡಿದ ವಾರ್ನರ್‌ ಕಾಟ್‌ ಆ್ಯಂಡ್‌ ಬೌಲ್ಟ್ ಆಗಿ ವಾಪಸಾದರು. 30 ಎಸೆತಗಳ ಈ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ, ಒಂದು ಸಿಕ್ಸರ್‌ ಒಳಗೊಂಡಿತ್ತು.

ನಿಧಾನ ಗತಿಯ ಟ್ರ್ಯಾಕ್‌ ಆದ ಕಾರಣ ಮುನ್ನುಗ್ಗಿ ಬಾರಿಸುವುದು ಭಾರೀ ಸವಾಲಾಗಿತ್ತು. ಕಮಲೇಶ್‌ ನಾಗರಕೋಟಿ ಅವರಂತೂ 140 ಕಿ.ಮೀ.ಗೆ ಕಡಿಮೆ ಇಲ್ಲದಂತೆ ಎಸೆತಗಳನ್ನಿಕ್ಕುತ್ತಿದ್ದರು. ಹಾಗೆಯೇ 6 ಮಂದಿ ಸ್ಪೆಷಲಿಸ್ಟ್‌ ಬೌಲರ್‌ಗಳ ದಾಳಿಯನ್ನು ನಿಭಾಯಿಸಿ ನಿಲ್ಲುವುದು ಸುಲಭವಾಗಿರಲಿಲ್ಲ. ಬರೀ ಒಂಟಿ-ಅವಳಿ ರನ್ನುಗಳೇ ಬರುತ್ತಿದ್ದವು.

ಪಾಂಡೆ ಅರ್ಧ ಶತಕ
ವನ್‌ಡೌನ್‌ನಲ್ಲಿ ಬಂದ ಮನೀಷ್‌ 35 ಎಸೆತಗಳಿಂದ ಅರ್ಧ ಶತಕ ಪೂರ್ತಿಗೊಳಿಸಿದರು. ರಸೆಲ್‌ಗೆ ರಿಟರ್ನ್ ಕ್ಯಾಚ್‌ ನೀಡಿದ ಪಾಂಡೆ 38 ಎಸೆತಗಳಿಂದ 51 ರನ್‌ ಮಾಡಿ ತಂಡದ ಟಾಪ್‌ ಸ್ಕೋರರ್‌ ಎನಿಸಿದರು. ಇದರಲ್ಲಿ 3 ಫೋರ್‌, 2 ಸಿಕ್ಸರ್‌ ಸೇರಿತ್ತು.
ಇನ್ನೊಂದು ತುದಿಯಲ್ಲಿದ್ದ ವೃದ್ಧಿಮಾನ್‌ ಸಾಹಾ ಮಾತ್ರ ಚಡಪಡಿಸುತ್ತಲೇ ಉಳಿದರು. ಅವರು 30 ರನ್ನಿಗೆ 31 ಎಸೆತ ತೆಗೆದುಕೊಂಡರು (1 ಬೌಂಡರಿ, 1 ಸಿಕ್ಸರ್‌). ಪಾಂಡೆ-ಸಾಹಾ ಜೋಡಿಯಿಂದ 3ನೇ ವಿಕೆಟಿಗೆ 51 ಎಸೆತಗಳಿಂದ 62 ರನ್‌ ಒಟ್ಟುಗೂಡಿತು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.