ರಾಜಸ್ಥಾನ್ – ಡೆಲ್ಲಿ ಮುಖಾಮುಖಿ: ಟಾಸ್ ಗೆದ್ದ ಸ್ಮಿತ್ ಪಡೆ ಬೌಲಿಂಗ್ ಆಯ್ಕೆ
Team Udayavani, Oct 9, 2020, 7:00 PM IST
ಶಾರ್ಜಾ: ಐಪಿಎಲ್ 13ನೇ ಆವೃತ್ತಿಯ 23 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಸ್ಮಿತ್ ಪಡೆ ಬೌಲಿಂಗ್ ಆಯ್ದುಕೊಂಡಿದೆ.
ಶಾರ್ಜಾ ಕ್ರೀಡಾಂಗಣದಲ್ಲಿ ಇಂದಿನ ಪಂದ್ಯ ನಡೆಯಲಿದ್ದು, ಸತತ 3 ಸೋಲಿನಿಂದ ಕಂಗೆಟ್ಟಿರುವ ರಾಜಸ್ಥಾನ್, ಗೆಲುವಿನ ಅಲೆಯಲ್ಲಿರುವ ಡೆಲ್ಲಿಗೆ ಎದುರಾಗುತ್ತಿದೆ. 2 ತಂಡಗಳೂ ಈವರೆಗೂ 20 ಬಾರಿ ಮುಖಾಮುಖಿಯಾಗಿದ್ದು, 11ರಲ್ಲಿ ರಾಜಸ್ಥಾನ್ ಮತ್ತು 9ರಲ್ಲಿ ಡೆಲ್ಲಿ ಜಯಗಳಿಸಿದೆ.
ರಾಜಸ್ಥಾನ್ ಪಡೆ ಬಲಿಷ್ಟ ಬ್ಯಾಟಿಂಗ್ ಲೈನ್ ಅಪ್ ಹೊಂದಿದ್ದರೂ ಸಮರ್ಥ ಪ್ರದರ್ಶನ ಹೊರಬರುತ್ತಿಲ್ಲ. ಅಗ್ರ ಕ್ರಮಾಂಕದ ಬ್ಯಾಟಿಂಗ್ ನಲ್ಲಿ ಸಂಪೂರ್ಣ ವೈಫಲ್ಯ ಕಾಣುತ್ತಿದೆ. ಸಂಜು, ಸ್ಮಿತ್ ಆರ್ಭಟಿಸಿದರೆ ಗೆಲ್ಲುವ ಅವಕಾಶ ಹೆಚ್ಚಿದೆ.
ಶ್ರೇಯಸ್ ಆಯ್ಯರ್ ನೇತೃತ್ವದ ಡೆಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 5 ಪಂದ್ಯಗಳಲ್ಲಿ 4ರಲ್ಲಿ ಜಯ ಸಾಧಿಸಿದೆ. ಅಯ್ಯರ್, ಪಂತ್, ಪೃಥ್ವಿ ಶಾ, ಸ್ಟೋಯ್ನಿಸ್ ಉತ್ತಮ ಲಯದಲ್ಲಿದ್ದಾರೆ. ಬೌಲಿಂಗ್ ನಲ್ಲಿ ರಬಾಡ, ಅಶ್ವಿನ್, ಅಕ್ಷರ್ ಉತ್ತಮ ದಾಳಿ ಸಂಘಟಿಸುತ್ತಿದ್ದಾರೆ.
ಆಡುವ ಹನ್ನೊಂದರ ಬಳಗ:
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್, ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮಿಯರ್, ರವಿಚಂದ್ರನ್ ಅಶ್ವಿನ್, ಆಕ್ಸರ್ ಪಟೇಲ್, ಹರ್ಷಲ್ ಪಟೇಲ್, ಕಗಿಸೊ ರಬಾಡಾ, ಎನ್ರಿಚ್ ನೋರ್ತ್ ಜೆ
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ಮಹಿಪಾಲ್ ಲೋಮರ್, ರಾಹುಲ್ ತೇವಟಿಯಾ, ಜೋಫ್ರಾ ಆರ್ಚರ್, ಆಂಡ್ರ್ಯೂ ಟೈ, ಶ್ರೇಯಾಸ್ ಗೋಪಾಲ್, ಕಾರ್ತಿಕ್ ತ್ಯಾಗಿ, ವರುಣ್ ಆ್ಯರನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್