ಪ್ಲೇ ಆಫ್ ಹೊಸ್ತಿಲಲ್ಲಿ ಕೊಹ್ಲಿ ಹುಡುಗರು, ನಿರ್ಗಮನದ ಬಾಗಿಲಲ್ಲಿ ಚೆನ್ನೈ


Team Udayavani, Oct 25, 2020, 11:11 AM IST

ಪ್ಲೇ ಆಫ್ ಹೊಸ್ತಿಲಲ್ಲಿ ಕೊಹ್ಲಿ ಹುಡುಗರು, ನಿರ್ಗಮನದ ಬಾಗಿಲಲ್ಲಿ ಚೆನ್ನೈ

ದುಬಾೖ: ಬಲಿಷ್ಠ ತಂಡವಾಗಿ ರೂಪುಗೊಂಡಿರುವ ಆರ್‌ಸಿಬಿ ಮತ್ತು ಸತತ ಸೋಲಿನಿಂದ ಕಂಗೆಟ್ಟಿರುವ ಚೆನ್ನೈ ರವಿವಾರದ ಮೊದಲ ಐಪಿಎಲ್‌ ಪಂದ್ಯದಲ್ಲಿ ಮುಖಾಮುಖೀಯಾಗಲಿವೆ. ಈ ಪಂದ್ಯವನ್ನು ಗೆದ್ದರೆ ಕೊಹ್ಲಿ ಪಡೆಯ ಪ್ಲೇ ಆಫ್ ಪ್ರವೇಶ ಅಧಿಕೃತಗೊಳ್ಳಲಿದೆ. ಹಾಗೆಯೇ ಧೋನಿ ಪಡೆಯ ನಿರ್ಗಮನವೂ.

ಆತ್ಮವಿಶ್ವಾಸದಲ್ಲಿ ಆರ್‌ಸಿಬಿ

ಹತ್ತರಲ್ಲಿ 7 ಪಂದ್ಯ ಗೆದ್ದಿರುವ ಆರ್‌ ಸಿಬಿ ಈಗ ತುಂಬು ಆತ್ಮವಿಶ್ವಾಸದಲ್ಲಿದೆ. ಕಳೆದ ಪಂದ್ಯದಲ್ಲಿ ಕೆಕೆಆರ್‌ ತಂಡವನ್ನು ಮಗುಚಿದ ರೀತಿಯೊಂದೇ ಸಾಕು, ಆರ್‌ಸಿಬಿ ಎಷ್ಟು ಪ್ರಬಲವಾಗಿ ಸಂಘಟಿಗೊಂಡಿದೆ ಎಂಬುದು ತಿಳಿಯುತ್ತದೆ. ಕೋಲ್ಕತಾ ಎದುರು ಸಿರಾಜ್‌ ಘಾತಕ ಬೌಲಿಂಗ್‌, ರಾಜಸ್ಥಾನ್‌ ವಿರುದ್ಧ “ಮಿಸ್ಟರ್‌ 360 ಡಿಗ್ರಿ’ ಖ್ಯಾತಿಯ ಎಬಿಡಿ ಪ್ರಚಂಡ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು. ಆದರೆ ಆಸೀಸ್‌ ಬಿಗ್‌ ಹಿಟ್ಟರ್‌ ಫಿಂಚ್‌ ವೈಫ‌ಲ್ಯದಿಂದ ಹೊರಬರಬೇಕಿದೆ. ಪಡಿಕ್ಕಲ್‌ ಆರಂಭಿಕ ಸಾಹಸವನ್ನು ಪುನರಾವರ್ತಿಸಬೇಕಿದೆ. ಇವರಿಬ್ಬರು ಸಿಡಿದು ನಿಂತರೆ ಆರ್‌ ಸಿಬಿ ಹೆಚ್ಚು ಆಕ್ರಮಣಕಾರಿಯಾಗಿ ಗೋಚರಿಸುವುದು ಖಚಿತ. ಶಿವಂ ದುಬೆ ಈ ಪಂದ್ಯದಲ್ಲಿ ಮತ್ತೆ ಆಡುವ ಬಳಗದಲ್ಲಿ ಕಾಣಿಸುವ ಸಾಧ್ಯತೆ ಇದೆ.

ಘಾತಕ ಬೌಲಿಂಗ್‌ ಲೈನ್‌ಅಪ್‌

ಸಾಮಾನ್ಯವಾಗಿ ಆರ್‌ಸಿಬಿ ಪ್ರತೀ ಸಲವೂ ಬೌಲಿಂಗ್‌ ಬಗ್ಗೆ ಚಿಂತಿಸುತ್ತಿತ್ತು. ಆದರೆ ಈ ವರ್ಷ ಬೌಲಿಂಗ್‌ ವಿಭಾಗ ಹೈಚ್ಚು ವೈವಿಧ್ಯಮಯವಾಗಿದ್ದು, ಘಾತಕವಾಗಿ ಗೋಚರಿಸಿದೆ. ಚಹಲ್‌, ವಾಷಿಂಗ್ಟನ್‌ ಸುಂದರ್‌ ಸ್ಪಿನ್‌ ವಿಭಾಗದಲ್ಲಿ ಮಿಂಚುತಿದ್ದಾರೆ. ಮಾರಿಸ್‌, ಸಿರಾಜ್‌, ಸೈನಿ ವೇಗದ ಬೌಲಿಂಗ್‌ವಿಭಾಗವನ್ನು ಸಮರ್ಥ ರೀಯಲ್ಲಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ:ಚೇತರಸಿಕೊಳ್ಳುತ್ತಿರುವ ಕಪಿಲ್‌ ದೇವ್: ಅಭಿಮಾನಿಗಳಿಗೆ ಕೃತಜ್ಞತೆ ಹೇಳಿದ ಲೆಜೆಂಡ್

ಚೆನ್ನೈಗೆ ಪ್ರತಿಷ್ಠೆಯ ಪಂದ್ಯ

ಪವಾಡ ಸಂಭವಿಸಿದರೂ ಚೆನ್ನೈ ಪ್ಲೇ ಆಫ್ಗೆ ತೇರ್ಗಡೆಯಾಗದು ಎಂಬುದು ಸದ್ಯದ ಸ್ಥಿತಿ. ಧೋನಿ ಪಡೆ ಮೊದಲ ಸಲ ಮುಂದಿನ ಸುತ್ತನ್ನು ಕಾಣದೆ ಹೊರಬೀಳುವ ಸಂಕಟದಲ್ಲಿದೆ. ಜತೆಗೆ ಕೂಟದಿಂದ ಹೊರಬಿದ್ದ ಮೊದಲ ತಂಡವೆಂಬ ಕಳಂಕವೂ ತಟ್ಟಲಿದೆ. ಹೀಗಾಗಿ ಧೋನಿ ಪಡೆ ಪಾಲಿಗೆ ಇದೊಂದು ಪ್ರತಿಷ್ಠೆಯ ಪಂದ್ಯ. ಗೆದ್ದರೆ ತನ್ನ ನಿರ್ಗಮನವನ್ನು ಒಂದಿಷ್ಟು ಮುಂದೂಡಿದ ಸಮಾಧಾನ ಲಭಿಸಲಿದೆ

ಇಂದು ಆರ್‌ಸಿಬಿ ಹಸುರುಡುಗೆ

“ಗೋ ಗ್ರೀನ್‌’ ಅಭಿಯಾನದ ಅಂಗವಾಗಿ ಆರ್‌ಸಿಬಿ ಕ್ರಿಕೆಟಿಗರು ರವಿವಾರದ ಪಂದ್ಯದಲ್ಲಿ ಹಸಿರು ಬಣ್ಣದ ಉಡುಗೆ ಧರಿಸಿ ಆಡಲಿದ್ದಾರೆ. ಜತೆಗೆ ತಂಡದ ಎಲ್ಲ ಅಧಿಕಾರಿಗಳು, ಸಿಬಂದಿ ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಳ್ಳುವರು. 2011ರಿಂದ ಆರ್‌ಸಿಬಿ ಇಂಥದೊಂದು “ಗ್ರೀನ್‌ ಮ್ಯಾಚ್‌’ಗೆ ಸಾಕ್ಷಿಯಾಗುತ್ತಲೇ ಇದೆ. ಭೂಮಿಯ ವಾತಾವರಣವನ್ನು ಸ್ವತ್ಛವಾಗಿರಿಸಿ ತನ್ಮೂಲಕ ಜೀವಸಂಕುಲ ಆರೋಗ್ಯದಿಂದ ಇರುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು, ಮುಂದಿನ ಪೀಳಿಗೆಗೆ ಉಜ್ವಲ ಭವಿಷ್ಯವೊಂದನ್ನು ರೂಪಿಸುವಂತೆ ಮಾಡುವುದು ಈ ಅಭಿಯಾನದ ಪ್ರಮುಖ ಉದ್ದೇಶ ಎಂದು ಆರ್‌ಸಿಬಿ ಟ್ವೀಟ್‌ ಮಾಡಿದೆ.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.