ನನ್ನೊಳಗಿನ “ನಾನು’ ಹೋದರೆ ಹೋದೇನು


Team Udayavani, Jun 23, 2022, 6:15 AM IST

ನನ್ನೊಳಗಿನ “ನಾನು’ ಹೋದರೆ ಹೋದೇನು

ಅಹಂಕಾರ ಎಂದರೆ ಜೀವದ ಸ್ವಕೃತ ಧರ್ಮ ಎನ್ನಬಹುದು. ಸ್ವಕೃತ ಎಂಬ ಶಬ್ದವನ್ನು “ಸ್ವ’ದ ಅರಿವಿನಿಂದ ಅಂದರೆ ತನ್ನತನದ ಅರಿವಿನಿಂದ ಜೀವವು ಸ್ವೀಕರಿಸಿದ ಕೃತಿಸ್ವರೂಪ ಕರ್ಮ ಎಂಬ ಅರ್ಥದಲ್ಲಿ ಬಳಸಬಹುದು. “ನನ್ನೊಳಗಿರುವ ನಾನು ಹೋದರೆ ಹೋದೇನು’ ಎಂದು ಹೇಳಿದ ಕನಕದಾಸರ ಮಾತಿನಿಂದ ಮನುಷ್ಯನಲ್ಲಿನ ನನ್ನತನದ, ಅಂದರೆ ಅಹಂಭಾವದ ವ್ಯರ್ಥತೆಯು ತಿಳಿಯುತ್ತದೆ.

ಅಹಂಭಾವವು ಮನುಷ್ಯನ ಲೌಕಿಕ ಮತ್ತು ಪಾರಮಾರ್ಥಿಕ ಸುಖದಲ್ಲಿನ ಒಂದು ದೊಡ್ಡ ಅಡಚಣೆಯಾಗಿದೆ. ಅಹಂ ಭಾವದ ಬೀಜವು ಮನುಷ್ಯ ಜನ್ಮದಲ್ಲಿಯೇ ಇರುವುದರಿಂದ ಇದಕ್ಕೆ ಹಿರಿಯ-ಕಿರಿಯ, ಬಡವ-ಬಲ್ಲಿದ, ಅಶಿಕ್ಷಿತ-ಸುಶಿಕ್ಷಿತ ಎಂಬ ಯಾವುದೇ ಭೇದ ಇಲ್ಲ. ಎಲ್ಲರಲ್ಲಿಯೂ ಹೆಚ್ಚು ಅಥವಾ ಕಡಿಮೆ ಪ್ರಮಾಣದಲ್ಲಿ ಅಹಂಕಾರ ಭಾವವು ಇದ್ದೇ ಇರುತ್ತದೆ.
ಅಹಂಭಾವವು ಹೊಲದಲ್ಲಿ ಬೆಳೆಯುವ ಹುಲ್ಲಿನಂತೆ ಇರುತ್ತದೆ. ಎಲ್ಲಿಯವರೆಗೆ ನಾವು ಆ ಹುಲ್ಲನ್ನು ಬೇರುಸಹಿತವಾಗಿ ನಾಶ ಮಾಡುವುದಿಲ್ಲವೋ ಅಲ್ಲಿ ಯವರೆಗೆ ಆ ಹೊಲದಲ್ಲಿ ಉತ್ತಮ ಫ‌ಸಲು ಬರುವುದಿಲ್ಲ. ಆ ಹುಲ್ಲನ್ನು ಮನುಷ್ಯ ಪ್ರತೀ ದಿನವೂ ಸತತವಾಗಿ ನಾಶಮಾಡುತ್ತಲೇ ಇರಬೇಕಾಗುತ್ತದೆ. ಅದು ಸಾಧ್ಯವಾಗದಿದ್ದಲ್ಲಿ ಆ ಹುಲ್ಲು ಇಡೀ ಹೊಲವನ್ನು ಆವರಿಸಿ ನಿಷ#ಲ ವನ್ನಾಗಿಸುತ್ತದೆ. ಅದರಂತೆಯೇ ನಮ್ಮಲ್ಲಿರುವ ಅಹಂಭಾವವು ಸಂಪೂರ್ಣ ನಾಶವಾಗದ ಹೊರತು ನಾವು ಪರಿಪೂರ್ಣ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. ಸಾಧನೆಯ ಹಾದಿಯಲ್ಲಿ ಅಹಂಕಾರ ಎನ್ನುವುದು ಕಲ್ಲುಮುಳ್ಳುಗಳಿದ್ದಂತೆ. ಅಹಂಕಾರದ ಮುಳ್ಳನ್ನು ಹಾದಿಯಿಂದ ದೂರವಾಗಿಸಿ ಗುರಿಯತ್ತ ಹೆಜ್ಜೆ ಹಾಕಿದಲ್ಲಿ ಸಾಧನೆ ಸಾಧ್ಯ.ಒಂದೇ ಮಾತಿನಲ್ಲಿ ಹೇಳುವುದಾದರೆ ಸಾಧನೆಯ ಶಿಖರ ಏರಲು ನಮ್ಮಲ್ಲಿನ ಅಹಂಕಾರದ ದಮನವೇ ಮೊದಲ ಮೆಟ್ಟಿಲು.

ಸಾಧನೆಯ ಉದ್ದೇಶವೇ ಅಹಂ ಭಾವವನ್ನು ನಾಶ ಮಾಡುವುದು ಆಗಿದೆ. ಆದರೂ ಮನುಷ್ಯನಲ್ಲಿ ಅಹಂ ಭಾವವು ಎಷ್ಟು ಬೇರೂರಿರುತ್ತದೆ ಎಂದರೆ ಸಾಧನೆಯ ಪಥದಲ್ಲಿರುವಾಗಲೂ ಅದನ್ನು ಸಂಪೂರ್ಣ ನಾಶಮಾಡಲು ಸಹಜವಾಗಿ ಸಾಧ್ಯ ಆಗುವುದಿಲ್ಲ. ಆದು ದರಿಂದ ಸಾಧನೆಯಿಂದ ಅಹಂಭಾವವು ತಾನಾಗಿಯೇ ಕಡಿಮೆ ಆಗುವುದು ಎಂದು ವಿಚಾರವನ್ನು ಮಾಡದೇ ಅಹಂಭಾವ ವನ್ನು ಕಡಿಮೆ ಮಾಡಿಕೊಳ್ಳಲು ಸತತವಾಗಿ ಪ್ರಯತ್ನವನ್ನು ಮಾಡಬೇಕು.

ಇದನ್ನೂ ಓದಿ : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆಗೆ ಅಕ್ಟೋಬರ್‌ನಲ್ಲಿ ಚಾಲನೆ: ಬೊಮ್ಮಾಯಿ

ಹಾಗಾದರೆ ಮನುಷ್ಯ ಅಹಂಕಾರದಿಂದ ಪೂರ್ಣ ಮುಕ್ತನಾಗಲು ಸಾಧ್ಯವೇ ಎಂಬ ಪ್ರಶ್ನೆ ನಮ್ಮನ್ನು ಕಾಡದೇ ಇರದು. ಇದು ಸಹಜ ಕೂಡ. ಅಹಂಕಾರ ಇದ್ದರೆ ತಾನೆ ವ್ಯಕ್ತಿಯೋರ್ವನಲ್ಲಿ ಛಲ ಮೂಡಲು ಸಾಧ್ಯ. ಹಾಗೆಂದು ಅಹಂಕಾರವೇ ಆತನನ್ನು ಆವರಿಸಿಕೊಂಡರೆ ಅದು ಆತ ನನ್ನು ವಿನಾಶದತ್ತ ಕೊಂಡೊಯ್ಯುತ್ತದೆ. ಅಹಂಕಾರ ಎನ್ನುವುದು ಒಂದು ಮಿತಿಯಲ್ಲಿರಬೇಕೇ ಹೊರತು ಅದು ಅತಿರೇಕಕ್ಕೆ ತಲುಪಬಾರದು. ಅಹಂಕಾರ ಎಂದಿಗೂ ದುರಹಂಕಾರವಾಗಬಾರದು. ಯಾವಾಗ ನಮ್ಮಲ್ಲಿ ಅಹಂಕಾರ ಮೊಳಕೆ ಯೊಡೆಯಲಾರಂಭಿಸಿತೋ ಅದನ್ನು ನಮ್ಮ ನಿಯಂತ್ರಣ ದಲ್ಲಿಟ್ಟುಕೊಳ್ಳಬೇಕು. ಇಲ್ಲವಾದಲ್ಲಿ ಅದು ನಮ್ಮ ಹಿಡಿತವನ್ನು ತಪ್ಪಿ ನಮ್ಮನ್ನೇ ಆಹುತಿ ತೆಗೆದುಕೊಳ್ಳುತ್ತದೆ. ಈ ಕಾರಣಕ್ಕಾಗಿಯೇ ಅಹಂಕಾರದಿಂದ ದೂರವುಳಿಯುವುದೇ ಒಳಿತು ಎಂದು ಸಾಧಕರು ಮತ್ತು ಪ್ರಾಜ್ಞರು ಕಿವಿಮಾತು ಹೇಳಿರುವುದು.

ನಾನು, ನನ್ನದು, ನನಗೆ ಇಂತಹ ಅಭಿಮಾನವನ್ನು ಇಟ್ಟುಕೊಳ್ಳುವುದು ಎಂದರೆ ಅಹಂಕಾರ. ನನ್ನ ದೇಹ, ನನ್ನ ಮನಸ್ಸು, ನನ್ನ ಪ್ರಾಣ, ನನ್ನ ಬುದ್ಧಿ, ನನ್ನ ಸಂಪತ್ತು, ನನ್ನ ಪತ್ನಿ, ಮಕ್ಕಳು, ನನಗೆ ಸುಖ ಸಿಗಬೇಕು ಎಂಬ ವಿಚಾರಗಳು ಅಹಂನಿಂದಲೇ ನಿರ್ಮಾಣ ಆಗುತ್ತವೆ. ಈರುಳ್ಳಿಯ ಸಿಪ್ಪೆಯನ್ನು ಸುಲಿದರೆ ಕೇವಲ ಸಿಪ್ಪೆಯೇ ಸಿಗುತ್ತದೆಯೇ ಹೊರತು, ಯಾವ ಸಾರವೂ ಕೈಗೆ ಸಿಗುವುದಿಲ್ಲ, ಹಾಗೆಯೇ ವಿಚಾರ ಮಾಡಿದಾಗ ನಮ್ಮೊಳಗಿನಿಂದ ನಾನು ಎನ್ನುವ ವಸ್ತುವೇ (ಅಹಂ) ಸಿಗಲಾರದು. ಕೊನೆಗೆ ಏನು ಉಳಿಯುತ್ತದೆಯೋ ಅದೇ ವ್ಯಕ್ತಿಯ ಸಾಧನೆ. ಸಾಧನೆಯ ಗುರಿ ತಲುಪಿದಾಗ ಆ ವ್ಯಕ್ತಿಗೆ ಲಭಿಸುವ ಅನುಭವ, ಆತನ ಸಂಭ್ರಮಕ್ಕೆ ಎಣೆ ಇರಲಾರದು. ನಾವು ಯಾವ ಅಹಂಕಾರವನ್ನು ಮೆಟ್ಟಿನಿಂತು ಈ ಸಾಧನೆ ಮಾಡಿದ್ದೇವೆಯೋ ಅದುವೇ ನಮ್ಮಲ್ಲಿ ಮತ್ತೆ ಅಹಂಕಾರದ ಬೀಜ ಮೊಳಕೆಯೊಡೆಯುವಂತೆ ಮಾಡಿದಲ್ಲಿ ಆ ಸಾಧನೆಯೂ ನಿಷ್ಪ್ರಯೋಜಕವಾಗುತ್ತದೆ.

- ಸಂತೋಷ್‌ ರಾವ್‌ ಪೆರ್ಮುಡ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನವ ಜನ್ಮವನ್ನು ವ್ಯರ್ಥಗೊಳಿಸದಿರೋಣ

ಮಾನವ ಜನ್ಮವನ್ನು ವ್ಯರ್ಥಗೊಳಿಸದಿರೋಣ

achivement

ಗೆಲುವಿನ ದಾರಿ ದೂರ… ಪ್ರಯತ್ನ ನಿರಂತರವಾಗಿರಲಿ

ಆತ್ಮತೃಪ್ತಿ, ಹೃದಯ ಶ್ರೀಮಂತಿಕೆಯೇ ಶ್ರೇಷ್ಠ

ಆತ್ಮತೃಪ್ತಿ, ಹೃದಯ ಶ್ರೀಮಂತಿಕೆಯೇ ಶ್ರೇಷ್ಠ

ನಾವೆಲ್ಲರೂ ಸ್ನೇಹಜೀವಿಗಳಾಗೋಣ

ನಾವೆಲ್ಲರೂ ಸ್ನೇಹಜೀವಿಗಳಾಗೋಣ

ಮಾರ್ಗ ಸುಗಮವಾದರೆ ಗುರಿ ಸಾಧನೆ ಸುಲಭ

ಮಾರ್ಗ ಸುಗಮವಾದರೆ ಗುರಿ ಸಾಧನೆ ಸುಲಭ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.