ನನ್ನೊಳಗಿನ “ನಾನು’ ಹೋದರೆ ಹೋದೇನು


Team Udayavani, Jun 23, 2022, 6:15 AM IST

ನನ್ನೊಳಗಿನ “ನಾನು’ ಹೋದರೆ ಹೋದೇನು

ಅಹಂಕಾರ ಎಂದರೆ ಜೀವದ ಸ್ವಕೃತ ಧರ್ಮ ಎನ್ನಬಹುದು. ಸ್ವಕೃತ ಎಂಬ ಶಬ್ದವನ್ನು “ಸ್ವ’ದ ಅರಿವಿನಿಂದ ಅಂದರೆ ತನ್ನತನದ ಅರಿವಿನಿಂದ ಜೀವವು ಸ್ವೀಕರಿಸಿದ ಕೃತಿಸ್ವರೂಪ ಕರ್ಮ ಎಂಬ ಅರ್ಥದಲ್ಲಿ ಬಳಸಬಹುದು. “ನನ್ನೊಳಗಿರುವ ನಾನು ಹೋದರೆ ಹೋದೇನು’ ಎಂದು ಹೇಳಿದ ಕನಕದಾಸರ ಮಾತಿನಿಂದ ಮನುಷ್ಯನಲ್ಲಿನ ನನ್ನತನದ, ಅಂದರೆ ಅಹಂಭಾವದ ವ್ಯರ್ಥತೆಯು ತಿಳಿಯುತ್ತದೆ.

ಅಹಂಭಾವವು ಮನುಷ್ಯನ ಲೌಕಿಕ ಮತ್ತು ಪಾರಮಾರ್ಥಿಕ ಸುಖದಲ್ಲಿನ ಒಂದು ದೊಡ್ಡ ಅಡಚಣೆಯಾಗಿದೆ. ಅಹಂ ಭಾವದ ಬೀಜವು ಮನುಷ್ಯ ಜನ್ಮದಲ್ಲಿಯೇ ಇರುವುದರಿಂದ ಇದಕ್ಕೆ ಹಿರಿಯ-ಕಿರಿಯ, ಬಡವ-ಬಲ್ಲಿದ, ಅಶಿಕ್ಷಿತ-ಸುಶಿಕ್ಷಿತ ಎಂಬ ಯಾವುದೇ ಭೇದ ಇಲ್ಲ. ಎಲ್ಲರಲ್ಲಿಯೂ ಹೆಚ್ಚು ಅಥವಾ ಕಡಿಮೆ ಪ್ರಮಾಣದಲ್ಲಿ ಅಹಂಕಾರ ಭಾವವು ಇದ್ದೇ ಇರುತ್ತದೆ.
ಅಹಂಭಾವವು ಹೊಲದಲ್ಲಿ ಬೆಳೆಯುವ ಹುಲ್ಲಿನಂತೆ ಇರುತ್ತದೆ. ಎಲ್ಲಿಯವರೆಗೆ ನಾವು ಆ ಹುಲ್ಲನ್ನು ಬೇರುಸಹಿತವಾಗಿ ನಾಶ ಮಾಡುವುದಿಲ್ಲವೋ ಅಲ್ಲಿ ಯವರೆಗೆ ಆ ಹೊಲದಲ್ಲಿ ಉತ್ತಮ ಫ‌ಸಲು ಬರುವುದಿಲ್ಲ. ಆ ಹುಲ್ಲನ್ನು ಮನುಷ್ಯ ಪ್ರತೀ ದಿನವೂ ಸತತವಾಗಿ ನಾಶಮಾಡುತ್ತಲೇ ಇರಬೇಕಾಗುತ್ತದೆ. ಅದು ಸಾಧ್ಯವಾಗದಿದ್ದಲ್ಲಿ ಆ ಹುಲ್ಲು ಇಡೀ ಹೊಲವನ್ನು ಆವರಿಸಿ ನಿಷ#ಲ ವನ್ನಾಗಿಸುತ್ತದೆ. ಅದರಂತೆಯೇ ನಮ್ಮಲ್ಲಿರುವ ಅಹಂಭಾವವು ಸಂಪೂರ್ಣ ನಾಶವಾಗದ ಹೊರತು ನಾವು ಪರಿಪೂರ್ಣ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. ಸಾಧನೆಯ ಹಾದಿಯಲ್ಲಿ ಅಹಂಕಾರ ಎನ್ನುವುದು ಕಲ್ಲುಮುಳ್ಳುಗಳಿದ್ದಂತೆ. ಅಹಂಕಾರದ ಮುಳ್ಳನ್ನು ಹಾದಿಯಿಂದ ದೂರವಾಗಿಸಿ ಗುರಿಯತ್ತ ಹೆಜ್ಜೆ ಹಾಕಿದಲ್ಲಿ ಸಾಧನೆ ಸಾಧ್ಯ.ಒಂದೇ ಮಾತಿನಲ್ಲಿ ಹೇಳುವುದಾದರೆ ಸಾಧನೆಯ ಶಿಖರ ಏರಲು ನಮ್ಮಲ್ಲಿನ ಅಹಂಕಾರದ ದಮನವೇ ಮೊದಲ ಮೆಟ್ಟಿಲು.

ಸಾಧನೆಯ ಉದ್ದೇಶವೇ ಅಹಂ ಭಾವವನ್ನು ನಾಶ ಮಾಡುವುದು ಆಗಿದೆ. ಆದರೂ ಮನುಷ್ಯನಲ್ಲಿ ಅಹಂ ಭಾವವು ಎಷ್ಟು ಬೇರೂರಿರುತ್ತದೆ ಎಂದರೆ ಸಾಧನೆಯ ಪಥದಲ್ಲಿರುವಾಗಲೂ ಅದನ್ನು ಸಂಪೂರ್ಣ ನಾಶಮಾಡಲು ಸಹಜವಾಗಿ ಸಾಧ್ಯ ಆಗುವುದಿಲ್ಲ. ಆದು ದರಿಂದ ಸಾಧನೆಯಿಂದ ಅಹಂಭಾವವು ತಾನಾಗಿಯೇ ಕಡಿಮೆ ಆಗುವುದು ಎಂದು ವಿಚಾರವನ್ನು ಮಾಡದೇ ಅಹಂಭಾವ ವನ್ನು ಕಡಿಮೆ ಮಾಡಿಕೊಳ್ಳಲು ಸತತವಾಗಿ ಪ್ರಯತ್ನವನ್ನು ಮಾಡಬೇಕು.

ಇದನ್ನೂ ಓದಿ : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆಗೆ ಅಕ್ಟೋಬರ್‌ನಲ್ಲಿ ಚಾಲನೆ: ಬೊಮ್ಮಾಯಿ

ಹಾಗಾದರೆ ಮನುಷ್ಯ ಅಹಂಕಾರದಿಂದ ಪೂರ್ಣ ಮುಕ್ತನಾಗಲು ಸಾಧ್ಯವೇ ಎಂಬ ಪ್ರಶ್ನೆ ನಮ್ಮನ್ನು ಕಾಡದೇ ಇರದು. ಇದು ಸಹಜ ಕೂಡ. ಅಹಂಕಾರ ಇದ್ದರೆ ತಾನೆ ವ್ಯಕ್ತಿಯೋರ್ವನಲ್ಲಿ ಛಲ ಮೂಡಲು ಸಾಧ್ಯ. ಹಾಗೆಂದು ಅಹಂಕಾರವೇ ಆತನನ್ನು ಆವರಿಸಿಕೊಂಡರೆ ಅದು ಆತ ನನ್ನು ವಿನಾಶದತ್ತ ಕೊಂಡೊಯ್ಯುತ್ತದೆ. ಅಹಂಕಾರ ಎನ್ನುವುದು ಒಂದು ಮಿತಿಯಲ್ಲಿರಬೇಕೇ ಹೊರತು ಅದು ಅತಿರೇಕಕ್ಕೆ ತಲುಪಬಾರದು. ಅಹಂಕಾರ ಎಂದಿಗೂ ದುರಹಂಕಾರವಾಗಬಾರದು. ಯಾವಾಗ ನಮ್ಮಲ್ಲಿ ಅಹಂಕಾರ ಮೊಳಕೆ ಯೊಡೆಯಲಾರಂಭಿಸಿತೋ ಅದನ್ನು ನಮ್ಮ ನಿಯಂತ್ರಣ ದಲ್ಲಿಟ್ಟುಕೊಳ್ಳಬೇಕು. ಇಲ್ಲವಾದಲ್ಲಿ ಅದು ನಮ್ಮ ಹಿಡಿತವನ್ನು ತಪ್ಪಿ ನಮ್ಮನ್ನೇ ಆಹುತಿ ತೆಗೆದುಕೊಳ್ಳುತ್ತದೆ. ಈ ಕಾರಣಕ್ಕಾಗಿಯೇ ಅಹಂಕಾರದಿಂದ ದೂರವುಳಿಯುವುದೇ ಒಳಿತು ಎಂದು ಸಾಧಕರು ಮತ್ತು ಪ್ರಾಜ್ಞರು ಕಿವಿಮಾತು ಹೇಳಿರುವುದು.

ನಾನು, ನನ್ನದು, ನನಗೆ ಇಂತಹ ಅಭಿಮಾನವನ್ನು ಇಟ್ಟುಕೊಳ್ಳುವುದು ಎಂದರೆ ಅಹಂಕಾರ. ನನ್ನ ದೇಹ, ನನ್ನ ಮನಸ್ಸು, ನನ್ನ ಪ್ರಾಣ, ನನ್ನ ಬುದ್ಧಿ, ನನ್ನ ಸಂಪತ್ತು, ನನ್ನ ಪತ್ನಿ, ಮಕ್ಕಳು, ನನಗೆ ಸುಖ ಸಿಗಬೇಕು ಎಂಬ ವಿಚಾರಗಳು ಅಹಂನಿಂದಲೇ ನಿರ್ಮಾಣ ಆಗುತ್ತವೆ. ಈರುಳ್ಳಿಯ ಸಿಪ್ಪೆಯನ್ನು ಸುಲಿದರೆ ಕೇವಲ ಸಿಪ್ಪೆಯೇ ಸಿಗುತ್ತದೆಯೇ ಹೊರತು, ಯಾವ ಸಾರವೂ ಕೈಗೆ ಸಿಗುವುದಿಲ್ಲ, ಹಾಗೆಯೇ ವಿಚಾರ ಮಾಡಿದಾಗ ನಮ್ಮೊಳಗಿನಿಂದ ನಾನು ಎನ್ನುವ ವಸ್ತುವೇ (ಅಹಂ) ಸಿಗಲಾರದು. ಕೊನೆಗೆ ಏನು ಉಳಿಯುತ್ತದೆಯೋ ಅದೇ ವ್ಯಕ್ತಿಯ ಸಾಧನೆ. ಸಾಧನೆಯ ಗುರಿ ತಲುಪಿದಾಗ ಆ ವ್ಯಕ್ತಿಗೆ ಲಭಿಸುವ ಅನುಭವ, ಆತನ ಸಂಭ್ರಮಕ್ಕೆ ಎಣೆ ಇರಲಾರದು. ನಾವು ಯಾವ ಅಹಂಕಾರವನ್ನು ಮೆಟ್ಟಿನಿಂತು ಈ ಸಾಧನೆ ಮಾಡಿದ್ದೇವೆಯೋ ಅದುವೇ ನಮ್ಮಲ್ಲಿ ಮತ್ತೆ ಅಹಂಕಾರದ ಬೀಜ ಮೊಳಕೆಯೊಡೆಯುವಂತೆ ಮಾಡಿದಲ್ಲಿ ಆ ಸಾಧನೆಯೂ ನಿಷ್ಪ್ರಯೋಜಕವಾಗುತ್ತದೆ.

- ಸಂತೋಷ್‌ ರಾವ್‌ ಪೆರ್ಮುಡ

ಟಾಪ್ ನ್ಯೂಸ್

1-sdsadsad

Sugar factory; ಎಥೆನಾಲ್‌ಗೆ ಕಬ್ಬಿನ ರಸ ಬಳಸದಿರಿ: ಕೇಂದ್ರ ಸರಕಾರ ನಿರ್ದೇಶನ 

1-sadsdsa-d

BJP ಜನರ ಆಯ್ಕೆ ಎನ್ನುವುದು ಸಾಬೀತು: 3 ರಾಜ್ಯಗಳ ಗೆಲುವಿನ ಬಗ್ಗೆ ಮೋದಿ ಬಣ್ಣನೆ

1-sadasdd

Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ

1-sadasd

Painkiller ‘ಮೆಫ್ತಾಲ್’ ಮಾತ್ರೆ ಅಡ್ಡಪರಿಣಾಮ ಬೀರುತ್ತದೆ: ಸರಕಾರದ ಎಚ್ಚರಿಕೆ

ARINDAM BAGCHI

PoK ಭಾರತದ ಭಾಗ; ಯಾವುದೇ ಕಾರಣಕ್ಕೂ ಹೇಳಿಕೆಯನ್ನು ಬದಲಿಸುವುದಿಲ್ಲ: MEA

ವಾರದಲ್ಲಿ ಐಸಿಸ್ ನಂಟು ಸಾಬೀತಿಗೆ ಯತ್ನಾಳ್ ಗೆ ತನ್ವೀರ ಹಾಶ್ಮಿ ಸವಾಲು

Vijayapura; ವಾರದಲ್ಲಿ ಐಸಿಸ್ ನಂಟು ಸಾಬೀತಿಗೆ ಯತ್ನಾಳ್ ಗೆ ತನ್ವೀರ ಹಾಶ್ಮಿ ಸವಾಲು

pinarayi

Dowry ಬೇಡಿಕೆ ಪ್ರಸ್ತಾಪಗಳನ್ನು ತಿರಸ್ಕರಿಸಲು ಯುವತಿಯರಿಗೆ ಪ್ರೋತ್ಸಾಹ ನೀಡಬೇಕು:ಕೇರಳ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನವ ಜನ್ಮವನ್ನು ವ್ಯರ್ಥಗೊಳಿಸದಿರೋಣ

ಮಾನವ ಜನ್ಮವನ್ನು ವ್ಯರ್ಥಗೊಳಿಸದಿರೋಣ

achivement

ಗೆಲುವಿನ ದಾರಿ ದೂರ… ಪ್ರಯತ್ನ ನಿರಂತರವಾಗಿರಲಿ

ಆತ್ಮತೃಪ್ತಿ, ಹೃದಯ ಶ್ರೀಮಂತಿಕೆಯೇ ಶ್ರೇಷ್ಠ

ಆತ್ಮತೃಪ್ತಿ, ಹೃದಯ ಶ್ರೀಮಂತಿಕೆಯೇ ಶ್ರೇಷ್ಠ

ನಾವೆಲ್ಲರೂ ಸ್ನೇಹಜೀವಿಗಳಾಗೋಣ

ನಾವೆಲ್ಲರೂ ಸ್ನೇಹಜೀವಿಗಳಾಗೋಣ

ಮಾರ್ಗ ಸುಗಮವಾದರೆ ಗುರಿ ಸಾಧನೆ ಸುಲಭ

ಮಾರ್ಗ ಸುಗಮವಾದರೆ ಗುರಿ ಸಾಧನೆ ಸುಲಭ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

vijayendra R Ashok

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್‌, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

china pnuemonia

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್‌

kempanna

ಕೆಂಪಣ್ಣ ಹೊಸ ಕಮಿಷನ್‌ ಬಾಂಬ್‌ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ

pro

Mangaluru: ಅತಿಥಿ ಉಪನ್ಯಾಸಕರ ಖಾಯಮಾತಿ ಆಗ್ರಹಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.