ಮಾನವ ಜನ್ಮವನ್ನು ವ್ಯರ್ಥಗೊಳಿಸದಿರೋಣ


Team Udayavani, Jun 6, 2022, 6:15 AM IST

ಮಾನವ ಜನ್ಮವನ್ನು ವ್ಯರ್ಥಗೊಳಿಸದಿರೋಣ

ಮಾನವನಾಗಿ ಹುಟ್ಟಿದ ಮೇಲೆ ಯಾವುದೇ ಕಷ್ಟಗಳು ಬಂದರೂ ಅದನ್ನು ಎದುರಿಸಿ ಬದುಕಬೇಕು. ಸಾಯುವವರೆಗೆ ಬದುಕಬೇಕಾದುದು ಧರ್ಮ. ಯಾರ ಬಳಿಯಲ್ಲಿ ದೇವರು ಕರುಣಿಸಿದ ಎರಡು ಕೈಗಳಿವೆಯೇ ಅವರೇ ಸಿ¨ªಾರ್ಥರು. ಅಂಥವರು ಏನನ್ನೂ ಸಾಧಿಸಬಹುದು. ಕೈಗಳಿಂದ ದುಡಿದು ಬದುಕಬಹುದು. ಕೈಗಳನ್ನು ತಿನ್ನುವುದಕ್ಕಿಂತ ಹೆಚ್ಚಾಗಿ ದುಡಿಯಲು ಬಳಸಬೇಕು. ಯಾರೂ ದೀನರೂ ಅಲ್ಲ, ದುರ್ಬಲರೂ ಅಲ್ಲ. ಇಂದ್ರಿಯಗಳೇ ಎಲ್ಲ ಬಯಕೆಗಳಿಗೂ ಕರ್ಮ ಗಳಿಗೂ ಮೂಲವಾಗಿದೆ. ಆದರೆ ಮನಸನ್ನು ಹತೋಟಿಗೆ ತಂದು ಧರ್ಮದಲ್ಲಿ ನಡೆದರೆ ನಮ್ಮನ್ನು ಜುಗುಪ್ಸೆ ಕಾಡಲಾರದು. ಯಾವುದೇ ಸಮಸ್ಯೆ, ಜಂಜಾಟಗಳಿಗೆ ಎಂದಿಗೂ ಆತ್ಮಹತ್ಯೆ ಮಾಡಿಕೊಳ್ಳುವುದು ಪರಿಹಾರವಲ್ಲ.

ನಮ್ಮ ಜೀವನದ ಯಾವುದಾದರೊಂದು ಕಾಲಘಟ್ಟದಲ್ಲಿ ನಿರಾಸೆ ಕಾಡಿದಾಗ ದೇವರನ್ನು ಧ್ಯಾನಿಸಿ. ಕಷ್ಟಗಳು ಮನುಷ್ಯರಿಗೆ ಬಾರದೆ ಇನ್ಯಾರಿಗೆ ಬರುತ್ತದೆ. ನಮ್ಮ ಜೀವನ ಸಂಜೀವನವಾದರೆ ಅದಕ್ಕಿಂತ ಸಂತೋಷ ಬೇರೆ ಇಲ್ಲ. ಸಂಜೀವನ ಆಗಬೇಕಾದರೆ ಜೀವನವನ್ನು ಸರಿಯಾದ ರೀತಿಯಲ್ಲಿ ನೋಡಬೇಕು. “ಕೈ ಕೆಸರಾದರೆ ಬಾಯಿ ಮೊಸರು’ ಎಂಬ ಗಾದೆ ಸುಳ್ಳಲ್ಲ. ಹೆಚ್ಚು ಸಂಪಾದನೆ ಮಾಡಿದರೆ ಸ್ವಲ್ಪ ಕೂಡಿಸಿಡಿ. ಮುಂದೆ ಕಷ್ಟ ಕಾಲಕ್ಕೆ ಅದು ನೆರವಾಗಬಹುದು. ಮಿಕ್ಕಿದ್ದರೆ ದಾನ ಮಾಡಿ. ದಾನ ಮಾಡು ವಾಗ ಪ್ರಚಾರ ಸಲ್ಲದು. ಬಲ ಕೈಯಲ್ಲಿ ಕೊಟ್ಟರೆ ಅದು ಎಡ ಕೈಗೆ ಗೊತ್ತಾಗಬಾರದು.

ಇನ್ನು ಆತ್ಮಹತ್ಯೆ ಮಹಾಪಾಪ. ಯಾರು ಸಂತೋಷದಲ್ಲಿ ಮರಣಿಸುತ್ತಾನೋ ಅವನೇ ಧನ್ಯನು. ನಾವು ನಮ್ಮನ್ನು ಅಂಗವಿಕಲ ವ್ಯಕ್ತಿಗೆ ಹೋಲಿಸಿ ನೋಡಿದಾಗ ನಾವೇ ಪುಣ್ಯವಂತರು ಎಂದು ಭಾಸವಾಗಬಹುದು. ಅದೇ ಅಂಗವಿಕಲ ದುಡಿದು ತಿನ್ನುವಾಗ ನಮಗೆ ದುಡಿಯುವ ಮನಸ್ಸು ಬರಬಹುದು. ಅವನಿಗಿಂತ ನಾವೇ ಮೇಲು ಎಂದು ಭಾಸವಾಗಬಹುದು. ಸಂಸಾರದ ಜವಾಬ್ದಾರಿಯಲ್ಲಿ ನೋವು ಮರೆಯಬಹುದು ಇಲ್ಲವೇ ಸಾಧಿಸಬೇಕೆಂಬ ಛಲ ಮೂಡಬಹುದು. ಯಾರೊಬ್ಬರೂ ಒಂಟಿಯಾಗಿ ಇರಬಾರದು. ಸಂಗಾತಿ ಅಥವಾ ಸ್ನೇಹಿತರನ್ನು ಹೊಂದಿರಬೇಕು. ಆಗ ಕಷ್ಟ-ಸುಖಗಳನ್ನು ಅವರೊಂದಿಗೆ ಹಂಚಿಕೊಳ್ಳಬಹುದು. ಆಗ ಮನಸ್ಸಿನ ತುಮುಲಗಳಿಗೆ ಒಂದು ಪರಿಹಾರ ಸಿಕ್ಕೇ ಸಿಗುತ್ತದೆ. ಇದು ಬಿಟ್ಟು ಎಲ್ಲವನ್ನೂ ತಮ್ಮ ಮನಸ್ಸಿನೊಳಗೆ ಇರಿಸಿಕೊಂಡು ಒಂಟಿಯಾಗಿ ಮರುಗುತ್ತಾ ಕುಳಿತರೆ ನಮ್ಮನ್ನು ಕಾಡುತ್ತಿರುವ ಸಮಸ್ಯೆಗೆ ಪರಿಹಾರ ಸಿಗಲು ಅಸಾಧ್ಯ.

ನಾವು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಮೊದಲು ಮನಗಾಣ ಬೇಕು. ನಮ್ಮನ್ನು ನಮಗಿಂತ ಕೆಳಗಿನವರಿಗೆ ಹೋಲಿಸಿ ನೋಡಿ. ನಮಗಿಂತ ಮೇಲಿ ನವರನ್ನು ನೋಡಿ ಅದೇ ರೀತಿ ಆಗ ಬೇಕೆಂಬ ಕನಸು ಕಾಣಬೇಕು. ಮುಂದೆ ಆ ಕನಸು ನನಸಾಗಬಹುದು. ಜೀವನ ಶಾಶ್ವತವಲ್ಲ. ಅದಕ್ಕೆ ಅಳಿವಿದೆ. ಹುಟ್ಟು-ಸಾವುಗಳ ಮಧ್ಯೆ ಜೀವಿಸುವುದು ಮನುಷ್ಯನ ಧರ್ಮ. ನಾಳೆ ಏನಾಗುತ್ತದೆ ಎಂದು ಯಾರಿಗೂ ತಿಳಿಯುವುದಿಲ್ಲ. ಆದುದರಿಂದ ನಾಳೆ ಮಾಡುವ ಕೆಲಸವನ್ನು ಇವತ್ತೇ ಮಾಡುವ. ನಾವು ಮಾಡುವ ಕೆಲಸದ ಪ್ರತಿಫ‌ಲಕ್ಕಾಗಿ ಹಂಬಲಿಸದಿರೋಣ. ನಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕೇ ಸಿಗುತ್ತದೆ.

ನಾನು ನಿಷ್ಪ್ರಯೋಜಕ ಎಂಬುದನ್ನು ಮನಸ್ಸಿನಿಂದ ತೊಡೆದು ಹಾಕಬೇಕು. ಯಾರೂ ನಿಷ್ಪ್ರಯೋಜಕರಲ್ಲ. ಎಲ್ಲರೂ ಶಕ್ತರು. ಸಾಧಿಸಿ ತೋರಿಸಬೇಕು.ಆಗ ಯಶಸ್ಸು ತನ್ನಿಂತಾನೆ ಸಿಗುತ್ತದೆ. ಆಕಾಶಕ್ಕೆ ಏಣಿ ಹಾಕಲು ಪ್ರಯತ್ನಿಸುವುದರಲ್ಲಿ ತಪ್ಪೇನಿಲ್ಲ. ಹುಟ್ಟುವಾಗ ಯಾರು ಶಕ್ತರಲ್ಲ. ಬೆಳೆದಂತೆ ಮನಸ್ಸು ಗಟ್ಟಿಯಾಗುತ್ತದೆ. ಯುದ್ದದಲ್ಲಿ ಶಸ್ತ್ರ ತ್ಯಾಗ ಮಾಡಿದರೆ ಹೇಗೆ ಹೇಡಿಗಳಾಗುತ್ತಾರೆಯೋ ಹಾಗೆಯೇ ಜೀವನದಲ್ಲಿ ಉತ್ಸಾಹ ಕಳೆದುಕೊಂಡು ಆತ್ಮಹತ್ಯೆಯ ಹಾದಿ ತುಳಿದರೆ ಅದಕ್ಕಿಂತ ಮಹಾಪರಾಧ ಬೇರೊಂದಿಲ್ಲ. ಜೀವನ ವೆಂಬುದು ಸುಂದರ ಬೆಸುಗೆ. ಅದನ್ನು ಸ್ವೀಕಾರ ಮಾಡುವುದೇ ಉಲ್ಲಾಸ. ಮನಸ್ಸನ್ನು ಗಟ್ಟಿಮಾಡಿ ಬದುಕಬೇಕು. ಆಗ ಒಳ್ಳೆಯದಾಗುತ್ತದೆ. ಜೀವನ ಎಂದ ಮೇಲೆ ಅದಕ್ಕೊಂದು ಗುರಿ ಇರಬೇಕು. ಆ ಗುರಿಯನ್ನು ಸಾಧಿಸಲು ಪ್ರಯತ್ನ, ಪರಿಶ್ರಮಪಡಬೇಕಾದುದು ನಮ್ಮ ಕರ್ತವ್ಯ. ನಿರಂತರ ಪರಿಶ್ರಮ ನಮ್ಮನ್ನು ಗುರಿಯೆಡೆಗೆ ತಲುಪಿಸುತ್ತದೆ. ಆಗ ನಮ್ಮ ಜೀವನ ಸಾರ್ಥಕಗೊಳ್ಳುತ್ತದೆ.

– ಕೆ.ಪಿ.ಎ. ರಹೀಮ್‌, ಮಂಗಳೂರು

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನೊಳಗಿನ “ನಾನು’ ಹೋದರೆ ಹೋದೇನು

ನನ್ನೊಳಗಿನ “ನಾನು’ ಹೋದರೆ ಹೋದೇನು

achivement

ಗೆಲುವಿನ ದಾರಿ ದೂರ… ಪ್ರಯತ್ನ ನಿರಂತರವಾಗಿರಲಿ

ಆತ್ಮತೃಪ್ತಿ, ಹೃದಯ ಶ್ರೀಮಂತಿಕೆಯೇ ಶ್ರೇಷ್ಠ

ಆತ್ಮತೃಪ್ತಿ, ಹೃದಯ ಶ್ರೀಮಂತಿಕೆಯೇ ಶ್ರೇಷ್ಠ

ನಾವೆಲ್ಲರೂ ಸ್ನೇಹಜೀವಿಗಳಾಗೋಣ

ನಾವೆಲ್ಲರೂ ಸ್ನೇಹಜೀವಿಗಳಾಗೋಣ

ಮಾರ್ಗ ಸುಗಮವಾದರೆ ಗುರಿ ಸಾಧನೆ ಸುಲಭ

ಮಾರ್ಗ ಸುಗಮವಾದರೆ ಗುರಿ ಸಾಧನೆ ಸುಲಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.