Karnataka Rajyotsava;ಕುಂದಾನಗರಿಯಲ್ಲಿ ಕನ್ನಡ ಜಾತ್ರೆಯ ವೈಭವ ಸಂಭ್ರಮ

ಹುಚ್ಚೆದ್ದು ಕುಣಿದು ಕುಪ್ಪಳಿಸುತ್ತಿರುವ ಕನ್ನಡಿಗರು

Team Udayavani, Nov 1, 2023, 5:12 PM IST

Karnataka Rajyotsava;ಕುಂದಾನಗರಿಯಲ್ಲಿ ಕನ್ನಡ ಜಾತ್ರೆಯ ವೈಭವ ಸಂಭ್ರಮ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕಣ್ಣು ಹಾಯಿಸಿದಲ್ಲೆಲ್ಲ ಕನ್ನಡ ಮನಸ್ಸುಗಳ ಸಂಭ್ರಮ ಮನೆ ಮಾಡಿದೆ. ಬುಧವಾರ ಕರ್ನಾಟಕ ರಾಜ್ಯೋತ್ಸವದಂದು ಕನ್ನಡಿಗರ ಸಂಭ್ರಮಕ್ಕೆ ಪಾರವೇ ಇಲ್ಲ. ಇಡೀ ಬೆಳಗಾವಿ ಕನ್ನಡದ ಜಾತ್ರೆಯಾಗಿ ಮಾರ್ಪಟ್ಟಿದ್ದು, ತಾಯಿ ಭುವನೇಶ್ವರಿಯ ಕನ್ನಡದ ತೇರು ಎಳೆದ ಕನ್ನಡಿಗರು ಸಂಭ್ರಮದಲ್ಲಿ ತೇಲಾಡಿದರು.

ಬುಧವಾರ ಬೆಳಗ್ಗೆಯಿಂದಲೇ ನಗರದೆಲ್ಲೆಡೆ ಕನ್ನಡ ಹಬ್ಬದ ಸಹಸ್ರಾರು ಸಂಖ್ಯೆಯಲ್ಲಿ ಕನ್ನಡಿಗರು ಸಾಕ್ಷಿಯಾಗಿದ್ದಾರೆ. ನಗರದ ಕೇಂದ್ರ ಬಿಂದು ರಾಣಿ ಚನ್ನಮ್ಮ ವೃತ್ತದಲ್ಲಿ ಕನ್ನಡಿಗರ ಉತ್ಸಾಹ ಮೇರೆ ಮೀರಿದೆ. ಕೈಯಲ್ಲಿ ಹಳದಿ ಕೆಂಪು ಧ್ವಜ ಹಿಡಿದುಕೊಂಡು ಕುಣಿಯುತ್ತಿರುವ ಯುವಪಡೆಯ ಉತ್ಸಾಹ ಸಂಭ್ರಮ ಮುಗಿಲು ಮುಟ್ಟಿದೆ. ಕಣ್ಣು ಹಾಯಿಸಿದಷ್ಟೂ ಕಿಕ್ಕಿರಿದು ಸೇರಿದ ಕನ್ನಡಿಗರು, ನಾಡು ನುಡಿಯ ವೈಭವ ಪಸರಿಸಿಕೊಂಡಿತ್ತು.

ಹಳದಿ ಕೆಂಪು ದ್ವಜಗಳ ಹಾರಾಟ, ಕನ್ನಡ ಚಿತ್ರಗೀತೆಗಳಿಗೆ ಕನ್ನಡಿಗರು ಕುಣಿದು ಕುಪ್ಪಳಿಸುವ ಮೂಲಕ ರಾಜ್ಯೋತ್ಸವದ ವೈಭವದ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು, ಯುವಕರು, ಯುವತಿಯರು, ಮಹಿಳೆಯರು, ಹಿರಿಯರು ವೈಭವದ ಮೆರವಣಿಗೆಯಲ್ಲಿ ಭಾಗಿಯಾದರು. ಯುವಜನರಂತೂ ಎದೆ ನಡುಗಿಸುವಂಥ ಡಿ.ಜೆ, ಡಾಲ್ಬಿ ಹಾಡಿಗೆ ಕುಣಿದು ಕುಪ್ಪಳಿಸಿದರು.

ನಗರದ ಮೂಲೆಮೂಲೆಯಿಂದ, ಹಳ್ಳಿ ಪಟ್ಟಣಗಳಿಂದ ಅಪಾರ ಸಂಖ್ಯೆಯ ಕನ್ನಡಾಭಿಮಾನಿಗಳು ಜಮಾಯಿಸಿದ್ದರು. ನಗರದ ವಿವಿಧ ಬಡಾವಣೆ, ಓಣಿಗಳು, ತಾಲೂಕಿನ ಹಳ್ಳಿ ಹಳ್ಳಿಯಿಂದ ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಗಮನಸೆಳೆಯುತ್ತಿವೆ.

ಕರ್ನಾಟಕದ ಗತವೈಭವ ಸಾರುವ ಸ್ತಬ್ಧಚಿತ್ರಗಳು ಆಕರ್ಷಣೀಯವಾಗಿದ್ದವು. ವಿವಿಧ ದೇಸಿ ವಾದ್ಯ ಮೇಳಗಳಿಗೆ ಯುವಕರು ಹೆಜ್ಜೆ ಹಾಕಿದರು.

ವಿವಿಧ ಕನ್ನಡ ಸಂಘಟನೆಗಳು ಸ್ತಬ್ಧಚಿತ್ರಗಳೊಂದಿಗೆ
ಡಿಜೆ ಡಾಲ್ಬಿಗಳ ನಾದಕ್ಕೆ ಯುವಕರು ಹುಚ್ಚೆದ್ದು ಕುಣಿದು ಕುಪ್ಪಳಿಸಿದರು. ಹಳದಿ ಕೆಂಪು ಧ್ವಜ ಹಿಡಿದುಕೊಂಡು ಕುಣಿಯುತ್ತಿರುವ ಕನ್ನಡಿಗರ ಸಂಭ್ರಮ ಮೇರೆ ಮೀರಿದೆ. ಕನ್ನಡ ಶಲ್ಯಾ ಹಾರಿಸಿ, ಧ್ವಜಗಳನ್ನು ತಿರುಗಿಸುತ್ತಿರುವ ಮೈನವಿರೇಳಿಸುವಂತಿತ್ತು. ರಾಜ್ಯದಲ್ಲಿಯೇ ಅದ್ಭುತವಾಗಿ ನಡೆಯುವ ಬೆಳಗಾವಿಯ ಮೆರವಣಿಗೆಯ ವೈಭವ ನೋಡುವುದೇ ಸೊಗಸು. ಕನ್ನಡದ ಮೇಲಿರುವ ಬೆಳಗಾವಿಗರ ಈ ಸಂಭ್ರಮ ಕಣ್ತುಂಬಿಕೊಳ್ಳಲು ಪಕ್ಕದ ಜಿಲ್ಲೆಯಿಂದ ಜನ ಬಂದಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.