ಜಿಲ್ಲೆಯಾದ್ಯಂತ ಬೆಳಕಿನ ಹಬ್ಬದ ಸಂಭ್ರಮ
diwali special
Team Udayavani, Nov 7, 2021, 2:45 PM IST
ಚಿತ್ರದುರ್ಗ: ಜಿಲ್ಲೆಯಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಶ್ರದ್ಧಾ ಭಕ್ತಿ ಹಾಗೂಸಂಭ್ರಮದಿಂದ ಆಚರಿಸಲಾಯಿತು. ಕತ್ತಲಾಗುವುದನ್ನೇ ಕಾಯುತ್ತಿದ್ದ ಪುಟಾಣಿಗಳು ಪಟಾಕಿ ಹಚ್ಚಿ ಸಂಭ್ರಮಿಸಿದರೆ, ಮಹಿಳೆಯರು ಮನೆಯಅಂಗಳದಲ್ಲಿ ಹಣತೆ ಹಚ್ಚಿ ಸಂಭ್ರಮಿಸುತ್ತಿದ್ದರು.
ನಗರದ ಮುಖ್ಯ ರಸ್ತೆಯಲ್ಲಿರುವ ಬಹುತೇಕ ಕಟ್ಟಡಗಳು ವಿದ್ಯುತ್ದೀಪಾಲಂಕಾರದಿಂದ ಕಂಗೊಳಿಸಿದವು. ಆಕಾಶ ಬುಟ್ಟಿಗಳು ಮನೆಯಮುಂಭಾಗದಲ್ಲಿ ರಾರಾಜಿಸುತ್ತಿದ್ದವು. ಬಣ್ಣಬಣ್ಣದ ದೀಪದ ಸರಮಾಲೆಗಳುಕಣ್ಣಿಗೆ ಹಬ್ಬ ತಂದಿದ್ದವು. ಬಲಿಪಾಡ್ಯಮಿ ದಿನ ಮನೆಯ ಎದುರುಹೆಂಗಳೆಯರು ರಂಗೋಲಿ ಬಿಡಿಸಿದ್ದರು.
ಪೂಜೆಗೆ ಮಂಟಪ ನಿರ್ಮಿಸಿ ಕಳಸಸ್ಥಾಪಿಸಿದರು. ದ್ವಾರ ಹಾಗೂ ದೇವರ ಬಾಗಿಲುಗಳಿಗೆ ಬಾಳೆಕಂದು, ಮಾವಿನತೋರಣ ಕಟ್ಟಿ, ಪುಷ್ಪಾಲಂಕಾರ ಮಾಡಿದರು.ಲಕ್ಷ್ಮೀ, ಹಿರಿಯರ ಪೂಜೆ ವಿಶೇಷ: ಲಕ್ಷ್ಮೀ ದೇವಿ ಪೂಜೆ, ಕುಲದೇವತೆ ಪೂಜೆ,ಹಿರಿಯರ ಪೂಜೆಗಾಗಿ ನೈವೇದ್ಯ ಸಮರ್ಪಿಸಲು ಮನೆಗಳಲ್ಲಿ ತರಹೇವಾರಿಖಾದ್ಯಗಳನ್ನು ತಯಾರಿಸಲು ಮಧ್ಯಾಹ್ನದಿಂದಲೇ ಮಹಿಳೆಯರು ಮುಂದಾದರು.
ಇನ್ನೂ ಹಿರಿಯರು, ಯುವಕರು ಸಗಣಿಯಲ್ಲಿ ಗಣಪತಿ,ಗೊಲ್ಲಮ್ಮ ದೇವಿಯನ್ನು ನಿರ್ಮಿಸಿ, ಕಾಚಿಕಡ್ಡಿ, ಬ್ರಹ್ಮದಂಡೆ ಗಿಡ, ತಂಗಟೆಹೂಗಳೊಂದಿಗೆ ಮನೆಯಲ್ಲಿರುವ ಬಾಗಿಲುಗಳ ಎರಡೂ ಬದಿಗಳಲ್ಲಿಟ್ಟುಪೂಜೆಗೆ ಸಿದ್ಧತೆ ಮಾಡಿಕೊಂಡರು. ಸಂಜೆಯಾಗುತ್ತಿದ್ದಂತೆ ಹೂ, ಹಣ್ಣುಸಮರ್ಪಣೆಯೊಂದಿಗೆ ಅನೇಕರ ಮನೆಗಳಲ್ಲಿ ಪೂಜೆಗಳು ನೆರವೇರಿದವು.
ಗ್ರಾಮೀಣ ಪ್ರದೇಶದಲ್ಲಿ ಗೋಪೂಜೆ: ಭಕ್ತಿ, ಭಾವದಿಂದ ಸಮ್ಮಿಳಿತಗೊಂಡಿದ್ದಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಗ್ರಾಮೀಣ ಪ್ರದೇಶದಲ್ಲಿಗೋವುಗಳಿಗೆ ಸ್ನಾನ ಮಾಡಿಸಿ ವಿಶೇಷ ಅಲಂಕಾರ ಮಾಡಲಾಯಿತು.ಗೋಪೂಜೆ ನೆರವೇರಿಸಿ ಹಬ್ಬ ಆಚರಿಸಲಾಯಿತು. ಅಲ್ಲದೆ, ಕೊಟ್ಟಿಗೆಯಿಂದಮನೆಗೆ ಕರೆತಂದು ಪೂಜೆ ಸಲ್ಲಿಸಲಾಯಿತು. ದೀಪಾವಳಿ ಅಂಗವಾಗಿ ಜಿಲ್ಲೆಯಹಲವು ದೇಗುಲಗಳಲ್ಲೂ ವಿಶೇಷ ಪೂಜೆ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಂದಾಣಿಕೆ ರಾಜಕಾರಣದ ಬಗ್ಗೆ ಮಾತನಾಡಲಾರೆ: ನಾರಾಯಣ ಸ್ವಾಮಿ
“ಕಾಂಗ್ರೆಸ್ನಿಂದ ರೈತಪರ ಯೋಜನೆ ರದ್ದು’:ಎ.ಎಸ್. ಪಾಟೀಲ್ ನಡಹಳ್ಳಿ
Tragic: ಚಾಕೋಲೇಟ್ ಎಂದು ಭಾವಿಸಿ ಮಾತ್ರೆ ತಿಂದಿದ್ದ 4 ವರ್ಷದ ಮಗು ಸಾವು
Bharamasagara; ಕಾತ್ರಾಳು ಕೆರೆಗೆ 300 ಕ್ಕೂ ಹೆಚ್ಚು ಸತ್ತ ಕೋಳಿಗಳು : ಜನಾಕ್ರೋಶ
Pre Wedding Shoot: ವೈದ್ಯನನ್ನು ಅಮಾನತುಗೊಳಿಸಿದ ಜಿಲ್ಲಾಧಿಕಾರಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್