ನಕಲಿ ಪತ್ರಕರ್ತರ ವಿರುದ್ಧ ಶೀಘ್ರ ಕ್ರಮ


Team Udayavani, Jun 21, 2021, 8:54 PM IST

21-5

ಹರಿಹರ: ಜಿಲ್ಲೆಯಲ್ಲಿ ನೋಂದಣಿ ಇಲ್ಲದ ಪತ್ರಕರ್ತರ ಮಾಹಿತಿ ಕಲೆ ಹಾಕುತ್ತಿದ್ದು, ಶೀಘ್ರದಲ್ಲಿ ನಕಲಿ ಮಾಧ್ಯಮವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಸಿ.ಬಿ. ರಿಷ್ಯಂತ್‌ ಹೇಳಿದರು.

ನಗರದ ತರಳಬಾಳು ಶಾಲೆ ಅವರಣದಲ್ಲಿ ತರಳಬಾಳು ಸೇವಾ ಸಮಿತಿಯವರು ಕಳೆದ 35 ದಿನಗಳಿಂದ ಕೋವಿಡ್‌ ಸೋಂಕಿತರ ಪರಿಚಾರಕರಿಗಾಗಿ ಊಟ ತಯಾರಿಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರ್ತಾ ಇಲಾಖೆಯೊಂದಿಗೆ ನೋಂದಣಿ ಇಲ್ಲದಿದ್ದರೂ ಪತ್ರಕರ್ತರ ಸೋಗಿನಲ್ಲಿ ಅಧಿ ಕಾರಿಗಳಿಗೆ ಹಾಗೂ ಜನಪ್ರತಿನಿಧಿ ಗಳಿಗೆ ಮಾನಸಿಕ ನೆಮ್ಮದಿ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಯುಟ್ಯೂಬ್‌ ಚಾನಲ್‌ ಹೆಸರು ಹೇಳಿಕೊಂಡು ಜನರ ಶೋಷಣೆ ಮಾಡುವುದನ್ನು ಸಹಿಸಲಾಗದು ಎಂದರು.

ಈಗಾಗಲೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಇಂಥವರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸ್ಥಳೀಯ ಅಧಿ ಕಾರಿಗಳು ಹಾಗೂ ಪತ್ರಕರ್ತ ಸಂಘದ ಪದಾ ಧಿಕಾರಿಗಳೊಂದಿಗೆ ಸಭೆ ನಡೆಸಿ ನಕಲಿ ಪತ್ರಕರ್ತರು, ಪೀತ ಪತ್ರಿಕೋದ್ಯಮಿಗಳನ್ನು ಮಟ್ಟ ಹಾಕಲಾಗುವುದು ಎಂದರು.

ಹಲವು ಬಾರಿ ಕೋರಿದ್ದರೂ ನಗರಕ್ಕೆ ಸಂಚಾರಿ ಪೊಲೀಸ್‌ ಠಾಣೆ ಮಂಜೂರು ಮಾಡದ ಕುರಿತ ಪ್ರಶ್ನೆಗೆ ನಗರದಲ್ಲಿ ಸಂಚಾರಿ ದಟ್ಟಣೆ ಗಮನಿಸಿ ಅವಶ್ಯವಿದ್ದಲ್ಲಿ ಮತ್ತೂಮ್ಮೆ ದಾಖಲಾತಿಗಳನ್ನು ಪರಿಶೀಲಿಸಿ ಗೃಹ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ನಗರ ಬೆಳೆದಂತೆಲ್ಲ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ತಕ್ಕಂತೆ ಹೊರ ಪೊಲೀಸ್‌ ಠಾಣೆ ತೆರೆಯುವ ಬಗ್ಗೆ ಕೇಳಿದಾಗ ನಗರದಲ್ಲಿ ನಡೆಯುವ ಅಪರಾಧ ಪ್ರಕರಣಗಳು ಹಾಗೂ ಜನಸಂಖ್ಯೆ ಮಾಹಿತಿ ಆಧಾರದ ಮೇಲೆ ಪರಿಶೀಲನೆ ಮಾಡಿ ಅಗತ್ಯವಿದ್ದಲ್ಲಿ ಸರಕಾರದ ಗಮನಕ್ಕೆ ತಂದು ಹೊರಠಾಣೆಯ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನಂತರ ದಾಸೋಹಕ್ಕೆ ಸ್ವಾಮೀಜಿಯವರೊಂದಿಗೆ ಚಾಲನೆ ನೀಡಿದರು. ನಗರದ ರಾಮಕೃಷ್ಣಾಶ್ರಮದ ಅಧ್ಯಕ್ಷ ಶಾರದೇಶಾನಂದ ಸ್ವಾಮೀಜಿ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌.ಎಂ.ವೀರೇಶ್‌ ಹನಗವಾಡಿ, ನಗರಸಭಾ ಸದಸ್ಯೆ ಅಶ್ವಿ‌ನಿ ಕೃಷ್ಣ, ಸೇವಾ ಸಮಿತಿಯ ವೀರೇಶ್‌ ಕೊಂಡಜ್ಜಿ, ಭೂಮಿ ಬ್ಯಾಂಕ್‌ ಮಾಜಿ ರಾಜ್ಯ ಉಪಾಧ್ಯಕ್ಷ ಬೆಳ್ಳೂಡಿ ರಾಮಚಂದ್ರಪ್ಪ, ಕಿರಣ್‌ ಮೂಲಿಮನಿ, ಬೆಳ್ಳೂಡಿ ಗೀತಕ್ಕ, ಕೊಂಡಜ್ಜಿ ಶಿವಕುಮಾರ್‌, ಉಮೇಶ್‌ ಹುಲ್ಮನಿ, ಹನಗವಾಡಿ ಬಿ.ಮಂಜಣ್ಣ, ಕೆ.ಜಿ. ಕೃಷ್ಣ, ಎನ್‌.ಇ. ಸುರೇಶ್‌ ಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.