ತಲ್ಲೂರು ಶಿವರಾಮ ಶೆಟ್ಟಿ  ಅವರಿಗೆ ಯಕ್ಷಚೇತನ ಪ್ರಶಸ್ತಿ


Team Udayavani, Nov 10, 2017, 11:07 AM IST

10-16.jpg

ಉದ್ಯಮ ಮತ್ತು ಸಂಸ್ಕೃತಿ- ಈ ಎರಡೂ ಕ್ಷೇತ್ರಗಳಲ್ಲಿ ಸಮನ್ವಯ ದೃಷ್ಟಿಯನ್ನು ಹೊಂದಿ ವಿಶಿಷ್ಟ ಸಾಧನೆಯನ್ನು ಮೆರೆದವರು ತಲ್ಲೂರು ಶಿವರಾಮ ಶೆಟ್ಟರು. ಉಡುಪಿಯ ಯಕ್ಷಗಾನ ಕಲಾರಂಗವು ಸಂಸ್ಥೆಯ ಅಭ್ಯುದಯಕ್ಕಾಗಿ ಸಮರ್ಪಣಭಾವದಿಂದ ಶ್ರಮಿಸಿದ ಹಿರಿಯ ಕಲಾವಿದರಿಗೆ ನೀಡುವ “ಯಕ್ಷ ಚೇತನ’ ಪ್ರಶಸ್ತಿಯನ್ನು ಈ ವರ್ಷ ತಲ್ಲೂರು ಶಿವರಾಮ ಶೆಟ್ಟರಿಗೆ ನೀಡುತ್ತಿರುವುದು ಯುಕ್ತವೇ ಆಗಿದೆ.

ತಲ್ಲೂರು ಶಿವರಾಮ ಶೆಟ್ಟರು ಮೂಲತಃ ಯಶಸ್ವಿ ಹೊಟೇಲ್‌ ಉದ್ಯಮಿಗಳು. ತಲ್ಲೂರು ಗ್ರೂಪ್‌ ಆಫ್ ಹೊಟೇಲ್ಸ್‌ನ ಚಯರ್‌ಮ್ಯಾನ್‌ ಮತ್ತು ಮೆನೇಜಿಂಗ್‌ ಡೈರೆಕ್ಟರ್‌ ಆಗಿದ್ದಾರೆ. ಉದ್ಯಮದ ಸಾಧನೆಗೆ ಸಂಬಂಧಿಸಿ “ಉದ್ಯಮ ರತ್ನ’ದಂಥ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಉದ್ಯಮಶೀಲರಾಗಿ ಒಂದಿಷ್ಟು ಹೊತ್ತು ಕಚೇರಿಯಲ್ಲಿ ತೊಡಗಿಸಿಕೊಳ್ಳುವ ಇವರ ಬಹು ಸಮಯ ಸಮಾಜಸೇವೆಯಲ್ಲಿಯೇ ಕಳೆದುಹೋಗುತ್ತದೆ. ಇವರು ನೇತೃತ್ವ ವಹಿಸಿರುವ ಸಂಸ್ಥೆಗಳು ಹಲವಾರು. ಲಯನ್ಸ್‌ ಕ್ಲಬ್‌ನಲ್ಲಿ ಸಕ್ರಿಯರಾಗಿರುವ ಇವರು ಉನ್ನತ ಹುದ್ದೆಯನ್ನು ಅಲಂಕರಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ದೇಶ-ವಿದೇಶಗಳಿಗೆ ಪ್ರವಾಸ ತೆರಳಿ ಅನುಭವ ಕೋಶವನ್ನು ಹಿಗ್ಗಿಸಿಕೊಂಡಿದ್ದಾರೆ. ಕೇವಲ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅವರ ಸೇವೆಯನ್ನು ಸ್ಮರಿಸಿದರೆ ಶಿಕ್ಷಣ ಕ್ಷೇತ್ರಕ್ಕೆ ಅವರು ಕೊಟ್ಟ ಸಮಗ್ರ ಕೊಡುಗೆಯನ್ನು ಪರಿಗಣಿಸಿದಂತಾಗುವುದಿಲ್ಲ. ಅವರಿಂದ ವಿದ್ಯಾರ್ಥಿ ವೇತನವನ್ನು ಪಡೆದು ಕಲಿತು ಸಾಧನೆ ಗೈದ ವಿದ್ಯಾರ್ಥಿಗಳೆಷ್ಟು, ಇವರ ಕೊಡುಗೆಯಿಂದ ಅಭ್ಯುದಯ ಹೊಂದಿದ ಶಾಲೆಗಳೆಷ್ಟು ಎಂಬುದನ್ನೂ ಗಮನಿಸಬೇಕಾಗಿದೆ.

“ದಾರಿದೀಪ’, “ಹೊಂಬೆಳಕು’, “ಬಾಳಬೆಳಕು’, “ಮುಂಬೆಳಕು’, “ಪಾಥೇಯ’, “ಹೊಂಗಿರಣ’, “ಪಥದೀಪಿಕಾ’ ದಂಥ ಹಲವು ಕೃತಿಗಳನ್ನು ಪ್ರಕಟಿಸಿರುವ ಶಿವರಾಮ ಶೆಟ್ಟರು ಇವುಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದ್ದಾರೆ. ಪ್ರತಿಯೊಂದು ಕೃತಿಯ ಕುರಿತು ಹಲವಾರು ಶಾಲೆಗಳಲ್ಲಿ ವಿಚಾರಸಂಕಿರಣ ಏರ್ಪಡಿಸಿದ್ದು ಇನ್ನೊಂದು ವಿಶೇಷ. ಪತ್ರಿಕೆಗಳಲ್ಲಿ ಅಂಕಣವನ್ನೂ ಬರೆಯುತ್ತಿದ್ದಾರೆ. ಬರವಣಿಗೆ ಮತ್ತು ಉಪನ್ಯಾಸದಲ್ಲಿ ನಿರಂತರ ತೊಡಗಿಸಿಕೊಂಡಿದ್ದಾರೆ.

ಉಡುಪಿಯ “ರಂಗಭೂಮಿ’ಯ ಅಧ್ಯಕ್ಷರಾಗಿ ಸಂಸ್ಥೆಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ್ದಲ್ಲದೆ, ಸಂಸ್ಥೆ ನಿರಂತರ ಚಟುವಟಿಕೆಗಳನ್ನು ನಡೆಸುವಲ್ಲಿ ಕಾರಣಕರ್ತರಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗುವ ಬಡರೋಗಿಗಳಿಗೆ ಸಹಾಯಧನ ನೀಡುತ್ತ, ಧಾರ್ಮಿಕ ಸಂಸ್ಥೆಗಳ ಚಟುವಟಿಕೆಗಳಿಗೆ ಆರ್ಥಿಕವಾಗಿ ನೆರವಾಗುತ್ತ ಇವರು ಸಕ್ರಿಯರಾಗಿರುವ ಸಂಸ್ಥೆಗಳ ಪಟ್ಟಿ ಸಾಕಷ್ಟು ದೀರ್ಘ‌ವಿದೆ. ಹಲವು ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಉನ್ನತ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ಹಿರಿಮೆ ಅವರದು.

ಯಕ್ಷಗಾನ ಕಲಾರಂಗದಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ತಲ್ಲೂರು ಶಿವರಾಮ ಶೆಟ್ಟರು ಏಳು ವರ್ಷಗಳ ಕಾಲ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಇವರ ಅಧ್ಯಕ್ಷೀಯ ಅವಧಿಯಲ್ಲಿ ಯಕ್ಷನಿಧಿ, ವಿದ್ಯಾಪೋಷಕ್‌, ಯಕ್ಷಶಿಕ್ಷಣದಂಥ ವ್ಯವಸ್ಥೆಗಳು ವಿಸ್ತರಣೆಗೊಂಡವು. ಚಿಟ್ಟಾಣಿ ರಾಮಚಂದ್ರ ಹೆಗಡೆ, ಕೆ. ಗೋವಿಂದ ಭಟ್ಟ, ಸುಬ್ರಹ್ಮಣ್ಯ ಧಾರೇಶ್ವರ ಮುಂತಾದ ಹಿರಿಯ ಕಲಾವಿದರ ಸಪ್ತಾಹ ಕಾರ್ಯಕ್ರಮಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಉಡುಪಿಯ ತುಳುಕೂಟದ ಮೂಲಕ ರಾಮದಾಸ ಸಾಮಗ ಪ್ರಶಸ್ತಿ ಪ್ರದಾನ ಸಮಾರಂಭ, ತುಳು ಯಕ್ಷಗಾನ ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ. ಉಡುಪಿ ಇಂದ್ರಾಳಿಯ ಯಕ್ಷಗಾನ ಕೇಂದ್ರದ ಪೋಷಕರಲ್ಲಿ ಶಿವರಾಮ ಶೆಟ್ಟರೂ ಒಬ್ಬರು.

“ಯಕ್ಷಗಾನ ಕಲಾರಂಗದ ಅಧ್ಯಕ್ಷ ರಾದರೂ ಯಕ್ಷಗಾನ ಗೊತ್ತಿಲ್ಲ’ ಎಂಬ ಮಾತು ಕೇಳಿ 60ರ ಹರೆಯದಲ್ಲಿ ಯಕ್ಷಗಾನದ ನಾಟ್ಯಾಭಿನಯ ಕಲಿಯಲು ಮುಂದಾದರು. ಇಂದ್ರಾಳಿ ಯಕ್ಷಗಾನ ಕೇಂದ್ರದಲ್ಲಿ ಗುರು ಬನ್ನಂಜೆ ಸಂಜೀವ ಸುವರ್ಣರ ಶಿಷ್ಯರಾದರು. ಶ್ರೀಕೃಷ್ಣ, ಹನುಮಂತ, ಪರಶುರಾಮ, ಮಯೂರಧ್ವಜ, ಲಂಕಿಣಿ ಮುಂತಾದ ಪಾತ್ರಗಳನ್ನು ನಿರ್ವಹಿಸಿ ಜನಮನ ಗೆದ್ದರು. ಸುಮಾರು ನೂರರಷ್ಟು ಪ್ರದರ್ಶನಗಳನ್ನು ನೀಡಿದ ಹೆಗ್ಗಳಿಕೆ ಅವರದು.

ಯಕ್ಷಗಾನ ಕಲಾವಿದರಿಗೆ, ಪ್ರದರ್ಶನಗಳಿಗೆ ಸದಾ ಆಸರೆ ನೀಡುವ ತಲ್ಲೂರು ಶಿವರಾಮ ಶೆಟ್ಟರು ತಮ್ಮ ಮಾತಾಪಿತರ ಹೆಸರಿನಲ್ಲಿ ಸ್ಥಾಪಿಸಿರುವ “ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ’ಯನ್ನು ಪ್ರತಿವರ್ಷ ಯಕ್ಷಗಾನ ವಿದ್ವಾಂಸರಿಗೆ ನೀಡಿ ತಮ್ಮ “ವಿದ್ವಜ್ಜನ ವಿಧೇಯ ಗುಣ’ವನ್ನು ಮೆರೆಯುತ್ತಿದ್ದಾರೆ. “ತಲ್ಲೂರು ಫ್ಯಾಮಿಲಿ ಟ್ರಸ್ಟ್‌’ನ ಮೂಲಕ ಇವರು ನಡೆಸಿರುವ ಸಾಮಾಜಿಕ ಚಟುವಟಿಕೆಗಳು ಅಸಂಖ್ಯ. 

ಆರ್ಥಿಕವಾಗಿ ಸಬಲರಾಗಿರುವ ಅನೇಕ ಮಂದಿ ಸಮಾಜದಲ್ಲಿ ಇದ್ದಾರೆ. ಆದರೆ, ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ “ಸಂಸ್ಕಾರ’ ಅವರಲ್ಲಿರುವುದಿಲ್ಲ. ಪರಿಶ್ರಮ, ಕೌಶಲ ಮತ್ತು ಔದಾರ್ಯಗಳೆಂಬ ಮೂರು ಗುಣಗಳಿಂದಾಗಿ ತಲ್ಲೂರು ಶಿವರಾಮ ಶೆಟ್ಟರ ಹೆಸರು ನಾಡಿನ ಪ್ರಸಿದ್ಧರ ಸಾಲಿನಲ್ಲಿ ಸೇರಿದೆ. ಮುಖ್ಯವಾಗಿ ಇಷ್ಟು ಎತ್ತರಕ್ಕೆ ಏರಲು ಯಕ್ಷಗಾನ ಕಲೆ, ಯಕ್ಷಗಾನ ಕಲಾರಂಗದ ಒಡನಾಟ ಕಾರಣ ಎಂದು ಹೇಳುವುದು ಶಿವರಾಮ ಶೆಟ್ಟರ ವಿನಮ್ರವಾದ ಗುಣವಾಗಿದೆ. ಶಿವರಾಮ ಶೆಟ್ಟರು ಈಗ ಪ್ರಶಸ್ತಿ ಭಾಜನರಾಗಿರುವುದು ಅವರ ಸಾಧನೆಯಿಂದಾಗಿ ಮತ್ತು ಸಾಧಕನಿಗಿರುವ ಸಹಜ ವಿನಯಶೀಲತೆಯಿಂದಾಗಿ.

ವೈ. ಕಲಾ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.