ತುಳು ಸಂಸ್ಕೃತಿ ಸೊಬಗಿಗೆ ಕನ್ನಡಿ ಹಿಡಿದ ಮಕ್ಕಳು 


Team Udayavani, Jul 6, 2018, 6:00 AM IST

u-2.jpg

ತುಳುನಾಡಿನಲ್ಲಿ ಹಿಂದಿನ ಮಕ್ಕಳು  ವಿವಿಧ ಆಟಗಳ ಮೂಲಕ  ಖುಷಿ ಪಡುತ್ತಿದ್ದರು. ಹಳ್ಳಿ ಪ್ರದೇಶಗಳಿಗೆ  ಸೀಮಿತವಾಗಿರುವ ಇವು ಸಭಾಂಗಣದಲ್ಲಿ ಕಂಡು ಬಂದವು.

ಈಗಿನ ಮಕ್ಕಳು ತುಳು ಸಂಸ್ಕೃತಿಯಿಂದ ದೂರ ಸರಿಯುತ್ತಿದ್ದಾರೆ ಎಂಬ ಆರೋಪ ಸಾಮಾನ್ಯವಾದುದು ಮತ್ತು ಸಾರ್ವತ್ರಿಕವಾದುದು. ಆದರೆ ಅದು ಪೂರ್ತಿ ಸತ್ಯವಲ್ಲ ಎಂದು ತೋರಿಸಿಕೊಟ್ಟವರು ಜೂ. 30ರಂದು ಉಡುಪಿಯ  ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ  ಜರಗಿದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ಮಕ್ಕಳು. ತುಳುನಾಡಿನಲ್ಲಿ ಹಿಂದಿನ ಮಕ್ಕಳು  ಬೇರೆ ಬೇರೆ ಆಟಗಳ ಮೂಲಕ  ಖುಷಿ ಪಡುತ್ತಿದ್ದರು. ಆದರೆ ಈಗ ಅವುಗಳನ್ನು ಕಾಣುವುದು ತುಂಬಾ ಕಷ್ಟ. ಹಳ್ಳಿ ಪ್ರದೇಶಗಳಿಗೆ  ಸೀಮಿತವಾಗಿರುವ ಇವು ಈ ಸಭಾಂಗಣದಲ್ಲಿ ಕಂಡು ಬಂದವು ಮತ್ತು ನೆರೆದಿದ್ದವರ ಮೆಚ್ಚುಗೆಗೆ ಪಾತ್ರವಾಯಿತು. ತುಳುಕೂಟ ಉಡುಪಿ ನೇತೃತ್ವದಲ್ಲಿ ಜರಗಿದ್ದ ಮದಿ ರೆಂಗಿದ ರಂಗ್‌ ಎಂಬ ತುಳು ಸಂಸ್ಕೃತಿ ಸಂಬಂಧಿ ಸಿದ ಕಾರ್ಯ ಕ್ರ ಮ ದಲ್ಲಿ ವಿವಿಧ ವಿಶಿಷ್ಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅವುಗಳಲ್ಲಿ ಮಕ್ಕಳಿಗೆಂದೇ ಕೆಲವು  ಸ್ಪರ್ಧೆಗಳು  ಮೀಸಲಾಗಿದ್ದರೆ, ಮತ್ತೆ ಕೆಲವು  ಸ್ಪರ್ಧೆಗಳು ಮಹಿಳೆಯರಿಗೆ ಮತ್ತು  ಪುರುಷರಿಗಾಗಿ ನಡೆದವು. 

ಇಲ್ಲಿ ಪ್ರಮುಖವಾಗಿ ಗಮನ ಸೆಳೆದದ್ದು ಮಕ್ಕಳ ಭಾಗವಹಿಸುವಿಕೆಯ ಉತ್ಸಾಹ. ಮಕ್ಕಳಿಗಾಗಿ ಮೆಹಂದಿ, ಕೇಶಾಲಂಕಾರ, ಹಲಸಿನ ಬೀಜದ ಸಿಪ್ಪೆ ಸುಲಿಯುವುದು, ಎಲೆಯಲ್ಲಿ ವಿಷಲ್‌ ಊದುವುದು, ಕಾಗದದಲ್ಲಿ ವಿವಿಧ ಆಟಿಕೆ ತಯಾರಿಸುವುದು, ಹೂಗುಚ್ಛ ತಯಾರಿಸುವುದು (ಹೂ ಜೋಡಣೆ) ಇತ್ಯಾದಿಗಳು. 

ಪುರುಷರಿಗಾಗಿ ಮೆಹಂದಿ ಮತ್ತು ಮುಂಡಾಸು ಕಟ್ಟುವುದು ಮಹಿಳೆಯರಿಗಾಗಿ ಮೆಹಂದಿ, ದೀಪದ ಬತ್ತಿ ತಯಾರಿಸುವುದು , ಹೂ ಕಟ್ಟುವುದು, ರಂಗೋಲಿ ಮುಂತಾದವುಗಳು ಜರಗಿದ್ದು, ಪ್ರತಿಯೊಂದು ಸ್ಪರ್ಧೆಗಳಿಗೂ  ಸ್ಪರ್ಧಾಳುಗಳ ಸಂಖ್ಯೆ ಮತ್ತು ಪ್ರತಿಕ್ರಿಯೆ ಗಮನಾರ್ಹವಾಗಿತ್ತು. 

ಮಕ್ಕಳಿಗಾಗಿ ನಡೆದಿದ್ದ ಹಲಸಿನ ಬೀಜದ ಸಿಪ್ಪೆ ಸುಲಿಯುವುದು, ವಿಷಲ್‌ ಊದುವುದು ಹೆಚ್ಚು ಗಮನ ಸೆಳೆಯಿತು. ನಮ್ಮ  ಮಕ್ಕಳಲ್ಲಿ ಈಗಲೂ ತುಳು ಸಂಸ್ಕೃತಿಯ ಬೇರು ಆಳವಾಗಿ ಊರಿದೆ ಎಂಬುದು ಇದರಿಂದ ಸಾಬೀತಾಯಿತು. ಪೇಟೆಗೆ ಬಂದ ಕೂಡಲೇ  ಅವರು ಎಲ್ಲವನ್ನೂ ಮರೆಯುವವರಲ್ಲ  ಎಂಬುದಕ್ಕೆ ಮಕ್ಕಳು ತೋರಿಸಿದ ಚುರುಕುತನ ಸಾಕ್ಷಿಯಾಯಿತು. 

ಇಲ್ಲಿನ ಸ್ಪರ್ಧೆಗಳೆಲ್ಲವೂ ಸಾಂಪ್ರದಾಯಿಕ ರೀತಿಯಲ್ಲಿಯೇ  ನಡೆದಿತ್ತು. ಮೆಹಂದಿ ಸ್ಪರ್ಧೆಯಲ್ಲಿ ಅದು ಹೆಚ್ಚು ಗಮನ ಸೆಳೆಯಿತು. ಇದರಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಕೋನ್‌  ಬಳಕೆಗೆ ಅವಕಾಶ ಇರಲಿಲ್ಲ. ಮಕ್ಕಳು ಚಕಚಕನೆ ಹಲಸಿನ ಬೀಜದ ಸಿಪ್ಪೆ ಸುಲಿದದ್ದು ತುಂಬಾ ಖುಷಿಯಾಯಿತು. ಇದೆಲ್ಲ ಹಿಂದಿನ ಮಕ್ಕಳು ಮಳೆಗಾಲದಲ್ಲಿ ಮಾಡುವಂಥದ್ದೇ ಆಗಿತ್ತು. ಎಲೆಯಲ್ಲಿ ವಿಷಲ್‌ ಊದುವುದು ಹಿಂದೆಲ್ಲ ಬಾಲ್ಯದಲ್ಲಿ ಸಾಮಾನ್ಯವಾಗಿತ್ತು. ಈಗಿನ ಮಕ್ಕಳಿಗೆ ಅದರ ಬಗ್ಗೆ ಮಾಹಿತಿ ಕಡಿಮೆ. ಆದರೆ ಈ ಕಾರ್ಯಕ್ರಮ ನೋಡಿದ ಬಳಿಕ ಎಷ್ಟೋ ಮಕ್ಕಳು ಮನೆ ಸಮೀಪದಲ್ಲಿ ಸಿಗುವ ಎಲೆಯಲ್ಲಿ ಇಂಥ ಪ್ರಯೋಗ ಮಾಡುವುದು ಖಚಿತ. 

ಮಕ್ಕಳಲ್ಲಿರುವ ಕೌಶಲಕ್ಕೆ ಸಾಕ್ಷಿಯಾದುದು ಕೇಶಾಲಂಕಾರ ಮತ್ತು ಕಾಗದಗಳಲ್ಲಿ ಆಟಿಕೆ ತಯಾರಿಸುವುದು. ಅವರವರ ಕಲ್ಪನೆಗೆ ತಕ್ಕಂತೆ ಇಲ್ಲಿ ಕೇಶಾಲಂಕಾರ ಮತ್ತು ಆಟಿಕೆಗಳು ಮೂಡಿ ಬಂದವು. ಇಲ್ಲಿ ಬಹುಮಾನ ಪಡೆದವು ಕೆಲವಾದರೂ, ಅಲ್ಲಿ ಕಂಡು ಬಂದ ಪ್ರತಿಯೊಂದೂ ಹೊಸತನದಿಂದ ಕೂಡಿದ್ದವು ಎಂಬುದು ವಿಶೇಷ.

ಮಹಿಳೆಯರು ಮತ್ತು ಪುರುಷರು ಕೂಡ ತಮಗಿದ್ದ ಸ್ಪರ್ಧೆಗಳಲ್ಲಿ  ಉತ್ಸಾಹದಿಂದ ಭಾಗವಹಿಸಿ ತುಳು ಸಂಸ್ಕೃತಿಯ ಶ್ರೀಮಂತಿಕೆಯನ್ನು ತೋರಿಸಿದರು.  ಜತೆಗೆ ಇಲ್ಲಿ ಮುಖ್ಯವಾಗಿ ಗಮನಿಸಬೇಕಾದ ಮತ್ತೂಂದು ಅಂಶವೆಂದರೆ ಸಾವಯವ ತರಕಾರಿ ಮಾರಾಟ ಮಾಡುವ ಮೂವರು ಮಹಿಳೆಯರಿಗೆ ಸಂದಿರುವ ಸಮ್ಮಾನ. ಹಿಂದೆಲ್ಲ ಹಳ್ಳಿ ಭಾಗದಲ್ಲಿ ಸಾವಯವ ತರಕಾರಿಯೇ ಸಿಗುತ್ತಿತ್ತು. ಈಗ ಅದು ಅಪರೂಪವಾದರೂ, ತಾವೇ ಬೆಳೆಸಿದ ತರಕಾರಿ ಮಾರುತ್ತಾ ಜೀವನ ಸಾಗಿಸುವ ಮೂವರಿಗೆ ಸ್ಪರ್ಧೆ ಬಳಿಕ  ಜರಗಿದ ಸಭಾ ಕಾರ್ಯಕ್ರಮದಲ್ಲಿ ಸಮ್ಮಾನ ಸಂದಿರುವುದು ಶ್ಲಾಘನೀಯ. 

ತುಳು ಸಂಸ್ಕೃತಿ ಮತ್ತು  ಭಾಷೆಗಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ  ಉಡುಪಿಯ ತುಳು ಕೂಟದ ಈ ಕಾರ್ಯಕ್ರಮ ಶ್ಲಾಘನೀಯ. ಇಂಥದ್ದೊಂದು ಕಾರ್ಯಕ್ರಮ ಆಯೋಜಿಸಿದ ಸಂಘಟನೆಯ ಪ್ರಮುಖರಾದ  ಗೌರವಾಧ್ಯಕ್ಷ ಡಾ| ಭಾಸ್ಕರಾನಂದ ಕುಮಾರ್‌, ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಮತ್ತು ಕಾರ್ಯದರ್ಶಿ ಗಂಗಾಧರ ಕಿದಿಯೂರು ಅವರಿಗೆ ಮೆಚ್ಚುಗೆ ಅಗತ್ಯ. 

 ಪುತ್ತಿಗೆ ಪದ್ಮನಾಭ ರೈ 

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.