ಜಾತಿ ವ್ಯವಸ್ಥೆಗೆ ಸವಾಲೊಡ್ಡಿದ “ಕುಲಂ’ 


Team Udayavani, Aug 17, 2018, 6:00 AM IST

c-14.jpg

ಕೌರವರು -ಪಾಂಡವರ ನಡುವೆ ನಡೆಯುವ ಮಹಾಭಾರತ ಯುದ್ಧಕ್ಕಾಗಿ ಜಾತಿ ಸಮಸ್ಯೆಯನ್ನೇ ಚರ್ಚೆಗೆ ಒಳಪಡಿಸುವುದು ಈ ನಾಟಕದ ವಿಶೇಷ. ಜಾತಿ ವ್ಯವಸ್ಥೆಯನ್ನು ಪೋಷಿಸುವ ಹುನ್ನಾರಗಳ ಹಿಂದೆ ಅಧಿಕಾರ ಎನ್ನುವ ದುರಾಸೆಯಿರುತ್ತದೆ.ಸಂಪತ್ತಿನ ಹಪಾಹಪಿಯಿರುತ್ತದೆ ಎನ್ನುವುದನ್ನು ಕುಲಂ ನಾಟಕ ತಿಳಿಸಿಕೊಡುತ್ತದೆ.

ಉನ್ನತ ಕುಲದಲ್ಲಿ ಜನಿಸಿದರೂ, ತನ್ನದಲ್ಲದ ತಪ್ಪಿಗಾಗಿ, ಕುಲದ ಕಾರಣದಿಂದ ಅವಮಾನಕ್ಕೊಳಗಾಗುವ, ವಾಸ್ತವದಲ್ಲಿ ಯಾರದೋ ಅಧಿಕಾರದ ಲಾಭಕ್ಕಾಗಿ ಬಲಿಯಾಗುವ ಮಹಾಭಾರತದ ದುರಂತ ನಾಯಕ ಕರ್ಣ. ಬಯಕೆಯನ್ನು ಬಸಿರು ಮಾಡಿಕೊಂಡು, ಜಗಕ್ಕೆ ಅಂಜಿ ಆ ಬಸಿರನ್ನು ಗಂಗೆಯಲ್ಲಿ ತೇಲಿ ಬಿಟ್ಟ ಕುಂತಿಯಿಂದ ಆರಂಭವಾಗಿ ಕುಲವನ್ನು ನೋಡದೇ ತನ್ನ ರಾಜ್ಯದ ಅಂಗಾಧಿಪತಿಯನ್ನಾಗಿಸಿದ ದುರ್ಯೋಧನನವರೆಗೆ ಎಲ್ಲರೂ ಕರ್ಣನ ಹೀನ ಕುಲದ ಲಾಭ ಪಡೆದವರೇ.

ಇದೇ ಕರ್ಣನ ಕುರಿತಾಗಿ ಪಂಪ ಭಾರತದಲ್ಲಿ ಜಾತಿಯನ್ನು ಉಲ್ಲಂಘಿಸುವ, ಜಾತಿಯನ್ನು ಪ್ರಶ್ನಿಸುವ ಕತೆಯೊಂದನ್ನು “ಕುಲಂ’ ಎನ್ನುವ ನಾಟಕದ ಮೂಲಕ ಪ್ರಸ್ತುತ ಪಡಿಸಿದ್ದಾರೆ ನೀರಿನಲ್ಲಿ ತೇಲಿಬಂದ ಕರ್ಣನಿಗೆ ಬದುಕು ಕಲ್ಪಿಸಿಕೊಟ್ಟ ಬೆಸ್ತ ಸಮಾಜದ ಮೊಗವೀರರು. ವಾಸುದೇವ ಗಂಗೇರ ನಿರ್ದೇಶನ ಹಾಗೂ ವಿನ್ಯಾಸದಲ್ಲಿ “ಕುಲಂ’ ನಾಟಕವು ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆಯ ಆಶ್ರಯದಲ್ಲಿ ಆ. 5 ರಂದು ಇಲ್ಲಿನ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಪ್ರದರ್ಶನಗೊಂಡಿತು. 

ರಾಜಪ್ಪ ದಳವಾಯಿ ಅವರು ರಚಿಸಿದ ಈ ನಾಟಕದಲ್ಲಿ ವೃತ್ತಿಪರ ಕಲಾವಿದರಲ್ಲದಿದ್ದರೂ, ರಂಗಭೂಮಿಯ ಕಲಾವಿದರಿಗೇನೂ ಕಡಿಮೆಯಿಲ್ಲದ್ದಂತೆ ನಟಿಸುವ ಮೂಲಕ ಸೈ ಎನಿಸಿಕೊಂಡ ಕೋಟೇಶ್ವರ ಮೊಗವೀರ ಸಂಘಟನೆಯ ಸದಸ್ಯರು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 
ಆಧುನಿಕ ಕಾಲದಲ್ಲಿಯೂ ಪ್ರಸ್ತುತವಾಗಿರುವ ಜಾತಿ ಪದ್ಧತಿ, ಕುಲದ ಪ್ರಶ್ನೆ ಪ್ರಾರಂಭವಾಗಿರುವುದು ಮಹಾಭಾರತ ಕಾಲದಲ್ಲಿ. ಕೌರವರು ಮತ್ತು ಪಾಂಡವರ ನಡುವೆ ನಡೆಯುವ ಮಹಾಭಾರತ ಯುದ್ಧಕ್ಕಾಗಿ ಜಾತಿ ಸಮಸ್ಯೆಯನ್ನೇ ಚರ್ಚೆಗೆ ಒಳಪಡಿಸುವುದು ಈ ನಾಟಕದ ವಿಶೇಷ. ಜಾತಿ ವ್ಯವಸ್ಥೆಯನ್ನು ಪೋಷಿಸುವ ಹುನ್ನಾರಗಳ ಹಿಂದೆ ಅಧಿಕಾರ ಎನ್ನುವ ದುರಾಸೆಯಿರುತ್ತದೆ. ಸಂಪತ್ತಿನ ಹಪಾಹಪಿಯಿರುತ್ತದೆ ಎನ್ನುವುದನ್ನು ಕುಲಂ ನಾಟಕ ತಿಳಿಸಿಕೊಡುತ್ತದೆ. ಮನುಷ್ಯರನ್ನು ಜಾತಿ- ಜಾತಿಗಳಲ್ಲಿ ಬಂಧಿಸಿ, ಮಾನವತೆಯ ವಿಶಾಲ ಜಗತ್ತಿನಿಂದ ಪ್ರತ್ಯೇಕಿಸುವ ಸ್ವಾರ್ಥ ಇಲ್ಲಿ ಅಭಿವ್ಯಕ್ತಗೊಂಡಿದೆ. 

ಪಂಪನು ಕರ್ಣನ ಮೂಲಕ ಪ್ರಶ್ನಿಸುವ ಕುಲ ಕುಲ ಅಂತೀರಲ್ಲ… ಯಾವುದಯ್ನಾ ಕುಲ ? ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಆದರೆ ಅವನ ಜಾತಿ ಯಾವುದು ಎನ್ನುವ ಪ್ರಶ್ನೆ ಮಾತ್ರ ಇಂದಿಗೂ ಜೀವಂತವಾಗಿರುವುದು ಮಾತ್ರ ದುರಂತ. ಸಹ ನಿರ್ದೇಶಕರಾಗಿ ವಿಕ್ರಮ್‌, ವಿಶೇಷ ಬೆಳಕಿನ ವ್ಯವಸ್ಥೆಯಲ್ಲಿ ಸದಾನಂದ ಬೈಂದೂರು, ವಸ್ತ್ರ ವಿನ್ಯಾಸ ಚಿನ್ನ ಗಂಗೇರ, ಸಂಗೀತದಲ್ಲಿ ಭರತ್‌ ಚಂದನ್‌, ರಾಜು ಬೀಜಾಡಿ, ನವೀನ, ಸಂದೇಶ ವಡೇರಹೋಬಳಿ, ಬಾಲಕೃಷ್ಣ ಕೆ.ಎಂ. ಸಹಕರಿಸುವ ಮೂಲಕ ನಾಟಕಕ್ಕೆ ಮತಷ್ಟು ಮೆರುಗು ತಂದಿತ್ತರು. 

ಮೊಗವೀರ ಯುವ ಸಂಘಟನೆಯ ಸತೀಶ್‌ ಎಂ. ನಾಯ್ಕ, ಸದಾನಂದ ಬಳ್ಕೂರು, ಸುಧಾಕರ ಕಾಂಚನ್‌, ಅಶೋಕ ತೆಕ್ಕಟ್ಟೆ, ಪಾಂಡುರಂಗ ಬೈಂದೂರು, ಹೇಮಾ ತೆಕ್ಕಟ್ಟೆ, ಐಶ್ವರ್ಯ ಪುತ್ರನ್‌, ಸಚಿನ್‌ ಹಳೆ ಅಳಿವೆ, ಶ್ರಾವ್ಯ ಪುತ್ರನ್‌, ರಾಜೀವ ಸೌರಭ, ಪ್ರಶಾಂತ ತೆಕ್ಕಟ್ಟೆ, ದಿವ್ಯಾಲಕ್ಷ್ಮೀ ಕೋಟೇಶ್ವರ, ಸಿಂಚನ, ಪ್ರಾರ್ಥನಾ, ಶ್ರೀಧರ ಬಿ.ಎನ್‌. ದಿಯಾ, ರಿಯಾ ಅವರ ನಟನೆಯು ಮನರಂಜಿಸಿತು. 

ಪ್ರಶಾಂತ್‌ ಪಾದೆ 

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.