ಜಾಗತಿಕ ಬಂಟ ಪ್ರತಿಷ್ಠಾನ ಪ್ರಶಸ್ತಿಗೆ ವಂಡ್ಸೆ ನಾಗಯ್ಯ ಶೆಟ್ಟಿ


Team Udayavani, Aug 24, 2018, 5:36 PM IST

3.jpg

ಜೀವನದ ಒಂಭತ್ತು ದಶಕಗಳನ್ನು ಕಂಡ ಹಾಸ್ಯಗಾರ ನಾಗಯ್ಯ ಶೆಟ್ಟರು ಇನ್ನೇನು ಮರೆತೇ ಹೋದರು ಎಂಬಾಗ ಜಾಗತಿಕ ಬಂಟ ಪ್ರತಿಷ್ಠಾನದ ಪ್ರಶಸ್ತಿ ಅವರನ್ನು ಅರಸಿ ಬಂದಿದೆ. 

ದರ್ಲಿಯಣಿ ನಾಗಯ್ಯ ಶೆಟ್ಟರು ಜನಿಸಿದ್ದು ಸಪ್ಟೆಂಬರ್‌ 15,1930ರಂದು ಕುಂದಾಪುರ ತಾಲ್ಲೂಕಿನ ವಂಡ್ಸೆಯಲ್ಲಿ; ವಂಡ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿಗೆ ಓದು ನಿಲ್ಲಿಸಿ ಯಕ್ಷಗಾನದತ್ತ ಆಕರ್ಷಿತರಾಗಿ ಪ್ರಥಮವಾಗಿ ಸೇರಿದ್ದು ಮಾರಣಕಟ್ಟೆ ಮೇಳವನ್ನು. ಯಕ್ಷಗಾನದ ಹೆಜ್ಜೆಗಾರಿಕೆೆ ಮತ್ತು ತಾಳಗಳನ್ನು ಸ್ವಂತ ಪರಿಶ್ರಮದಿಂದ ಕಲಿತ ಅವರು ವೀರಭದ್ರ ನಾಯಕರನ್ನು ಗುರು ಎಂದು ಸ್ವೀಕರಿಸಿ ನೃತ್ಯ ಹಾಗೂ ಮಾತುಗಾರಿಕೆಯಲ್ಲಿ ಪರಿಣತಿ ಸಾಧಿಸಿದರು. ಕಟ್ಟುವೇಷಗಳನ್ನು ಹಾಸ್ಯ ಪಾತ್ರಗಳಂತೆ ಶ್ರದ್ಧೆಯಿಂದ ಮಾಡಿ ಯಕ್ಷಗಾನದ ವಿವಿಧ ಭೂಮಿಕೆಗಳನ್ನು ನಿರ್ವಹಿಸಿ ಪ್ರಸಿದ್ಧರಾಗಿ ಬಡಗು ತಿಟ್ಟಿನ ಪ್ರಾತಿನಿಧಿಕ ಹಾಸ್ಯಗಾರರೆನಿಸಿದರು.

ಮಾರಣಕಟ್ಟೆ ಮೇಳವೊಂದರಲ್ಲೇ 35 ವರ್ಷಗಳ ಸುದೀರ್ಘ‌ ಸೇವೆ ಸಲ್ಲಿಸಿರುವ ನಾಗಯ್ಯ ಶೆಟ್ಟರು ವಿಶಿಷ್ಟ ಶೈಲಿಯ ಹಾಸ್ಯದಿಂದ ಜನಪ್ರಿಯರಾದರು. ಕಮಲಶಿಲೆ, ಸೌಕೂರು, ಅಮೃತೇಶ್ವರಿ, ಮಂದರ್ತಿ, ಪೆರ್ಡೂರು, ಕೊಡವೂರು ಹಾಗೂ ಹೆಗ್ಗೊàಡು ಮೇಳಗಳಲ್ಲೂ ಸೇವೆ ಸಲ್ಲಿಸಿರುವ ಶೆಟ್ಟರಿಗೆ 41 ವರ್ಷಗಳ ತಿರುಗಾಟದ ಅನುಭವವಿದೆ. ಕುಶಲವದ “ವಾಲ್ಮೀಕಿ’ ನಳ ದಮಯಂತಿಯ “ಬಾಹುಕ’ ಶೂರ್ಪನಖಾ ವಿವಾಹದ “ವಿದ್ಯುಜ್ಜಿಹ್ವ’, ವಿರಾಟಪರ್ವದ “ಚಿಕ್ಕ’, ಶ್ರೀಕೃಷ್ಣ ಗಾರುಡಿಯ “ಗಾರುಡಿ’ ಇತ್ಯಾದಿ ಪಾತ್ರಗಳಲ್ಲಿ ಅಪಾರ ಜನಮನ್ನಣೆ ಗಳಿಸಿದ ಅವರಿಗೆ “ಹಾಸ್ಯಗಾರ ನಾಗಯ್ಯ ಶೆಟ್ಟಿ’ ಎಂದೇ ಹೆಸರಾಯಿತು. 

ಕೊಕ್ಕ‌ರ್ಣೆ ನರಸಿಂಹ ನಾಯ್ಕ, ಹಾರಾಡಿ ರಾಮ ಗಾಣಿಗ, ಕುಷ್ಟ ಗಾಣಿಗ, ನಾರಾಯಣ ಗಾಣಿಗ, ಮಜ್ಜಿಗೆಬೈಲು ಚಂದಯ್ಯ ಶೆಟ್ಟಿ, ಬಣ್ಣದ ಸಂಜೀವ ನಾಯ್ಕ, ಹಾಸ್ಯಗಾರ ಮಂಜುನಾಥ ಪರಾಡಿ ಮೊದಲಾದ ಬಡಗುತಿಟ್ಟಿನ ಪ್ರಸಿದ್ಧ ಕಲಾವಿದರೊಂದಿಗೆ ರಂಗಸ್ಥಳ ಹಂಚಿಕೊಂಡಿರುವುದು ಅವರ ಹಿರಿಮೆ. ಗುರು ವೀರಭದ್ರ ನಾಯಕರೊಂದಿಗೆ “ಚಿತ್ರಗುಪ್ತ’, ಶಿರಿಯಾರ ಮಂಜುನಾಥ ನಾಯ್ಕ ಮತ್ತು ವಂಡಾರು ಬಸವ ನಾಯರಿ ಜೊತೆ ಅವರು ಮಾಡುತ್ತಿದ್ದ “ಬಾಹುಕ’ಪಾತ್ರ  ಜನಪ್ರಿಯ. 

ಇದೀಗ ಜಾಗತಿಕ ಬಂಟ ಪ್ರತಿಷ್ಠಾನ ಟ್ರಸ್ಟ್‌ ಡಾ. ಡಿ.ಕೆ ಚೌಟ ದತ್ತಿನಿಧಿಯಿಂದ ಹಿರಿಯ ಯಕ್ಷಗಾನ ಕಲಾವಿದರಿಗೆನೀಡುವ ಪ್ರಶಸ್ತಿಗೆ 2018-19ರ ಸಾಲಿನಲ್ಲಿ ವಂಡ್ಸೆ ನಾಗಯ್ಯ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಆಗಸ್ಟ್‌ 26ರಂದುಮಂಗಳೂರಿನಲ್ಲಿ ಜರಗುವ ಪ್ರತಿಷ್ಠಾನದ ಮಹಾಸಭೆಯಲ್ಲಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸುವರು.

ಭಾಸ್ಕರ ರೈ ಕುಕ್ಕವಳ್ಳಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.