ಹೆಣ್ಣಿನ ಅಂತರಂಗಕ್ಕೆ ಹಿಡಿದ ಕೈಗನ್ನಡಿ ನನ್ನೊಳಗಿನ ಅವಳು 


Team Udayavani, Aug 24, 2018, 5:58 PM IST

6.jpg

ಕುಟುಂಬ ಫೋಟೊದೊಳಗಿನ ಒಬ್ಬೊಬ್ಬರನ್ನೇ ಸ್ವಾರಸ್ಯಕರವಾಗಿ ಪರಿಚಯಿಸುತ್ತಾ ಗಮನ ಸೆಳೆಯುತ್ತಾರೆ. ಇಲ್ಲಿ ಇವಳೇ, ಅಮ್ಮ, ಅಜ್ಜಿ, ಅತ್ತೆ ಎಂದು ಮುಂತಾಗಿ ಕರೆಯಲ್ಪಟ್ಟು ತನ್ನ ನಿಜ ಹೆಸರನ್ನೇ ಮರೆತ ಮನೋಜ್ಞ ಅಭಿನಯ ಮಾರ್ಮಿಕವಾಗಿತ್ತು. 

ಹೆಣ್ಣು ಒಂದು ಅದ್ಭುತ ಸೃಷ್ಟಿ . ಅವಳು ತನ್ನ ಹತ್ತು ಹಲವು ಭಾವನೆಗಳನ್ನು ಎಲ್ಲರೊಂದಿಗೆ ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ. ಈ ಕಾರಣಕ್ಕಾಗಿ ತನ್ನ ಭಾವನೆಗಳ ಮೂರ್ತರೂಪದಂತೆ ಕಾಣಿಸುವ ಕಿರುತೆರೆ ಧಾರಾವಾಹಿಗಳಂಥ ಪ್ರದರ್ಶನಗಳನ್ನು ಅವಳು ಇಷ್ಟಪಡುತ್ತಾಳೆ. ಹೆಣ್ಣನ್ನು ಕೇಂದ್ರಬಿಂದುವಾಗಿಟ್ಟುಕೊಂಡು ಹಲವಾರು ಪೂರ್ಣ ಪ್ರಮಾಣದ ಸಿನಿಮಾ, ನಾಟಕಗಳು ಪ್ರದರ್ಶನ ಕಂಡು ಯಶಸ್ವಿಯಾಗಿದೆ. ಸ್ತ್ರೀ ಶಕ್ತಿಯಾಗಿ, ಶೋಷಿತ ಮಹಿಳೆಯಾಗಿ, ನಿಸ್ವಾರ್ಥ ಅಮ್ಮನಾಗಿ, ಸಾಧಕಿಯಾಗಿ ಬಿಂಬಿಸುವ ಪ್ರಯತ್ನಗಳು ನಡೆದಿವೆ. ಆದರೆ ಮುಕ್ಕಾಲು ತಾಸು ಅವಧಿಯಲ್ಲಿ ಒಬ್ಬರೇ ರಂಗ ಭೂಮಿ ಮೇಲೆ ನಟಿಸಿ ದಿನನಿತ್ಯ ಬದುಕಿನ ಬವಣೆಗಳನ್ನು ವಿಶಿಷ್ಟವಾಗಿ ತೆರೆದಿಟ್ಟ ಪ್ರದರ್ಶನ ಅಪರೂಪ ಎನ್ನಬಹುದು. ಇಂಥ ಒಂದು ಪ್ರಯತ್ನ ಇತ್ತೀಚೆಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ “ನನ್ನೊಳಗಿನ ಅವಳು’ ಎಂಬ ಏಕವ್ಯಕ್ತಿ ನಾಟಕದಲ್ಲಿ ಮೂಡಿ ಬಂತು. ಶಿಲ್ಪಾ ಜೋಷಿ ಅವರು ಮೂರು ವಿಭಿನ್ನ ಪಾತ್ರಗಳನ್ನು ಲೀಲಾಜಾಲವಾಗಿ ಪ್ರಸ್ತುತ ಪಡಿಸಿದರು. 

ನಾಟಕದಲ್ಲಿ ಬೇರೆ ಬೇರೆ ಪಾತ್ರಗಳು ಇದ್ದರೂ ಕಾಣದಂತೆ ಅವರ ಮಾತುಗಳನ್ನು ಊಹಿಸುವಂತೆ, ಫೋನ್‌ ಮೂಲಕ ಹಾಗೂ ಹಿನ್ನೆಲೆ ಸಂಗೀತ ಮೂಲಕ ಪ್ರೇಕ್ಷಕರಿಗೆ ಬಿಟ್ಟದ್ದು ನಿರೂಪಣೆಯ ಚಾಣಾಕ್ಷತನ ತೋರಿಸಿತು. ಧ್ವನಿಯ ಏರಿಳಿತಗಳಿಂದಲೇ ಮತ್ತೂಂದು ಕಡೆಯ ಮಾತುಗಳನ್ನು ಊಹಿಸಬಹುದಿತ್ತು. ಸ್ವಗತ ಪರಿಣಾಮಕಾರಿಯಾಗಿತ್ತು. ಹೆಚ್ಚಿನ ಭಾಗದಲ್ಲಿ ದಿನಚರಿ ಕಥೆ ಹೇಳುವಂತೆ ಕಂಡು ಬಂದರೂ ನಾಟಕೀಯ ಸ್ಪರ್ಶ ಪ್ರೇಕ್ಷಕನಿಗೆ ಹಿಡಿಸುತ್ತದೆ. ಅದರಲ್ಲೂ ಹೆಂಗಳೆಯರಿಗೆ ಖಂಡಿತ ಥೀಮ್‌ ಇಷ್ಟ ಆಗಬಹುದು. 

ಏಕೆಂದರೆ ಮೂರು ವಿವಿಧ ವ್ಯಕ್ತಿತ್ವಗಳ ಹೆಣ್ಣಿನ ಪರಿಚಯ ಸಾಂಸಾರಿಕ ಜಂಜಾಟದ ನಡುವೆ ಇರುತ್ತದೆ. ಮೊದಲನೆಯವಳ ನಿರುದ್ಯೋಗಿ ಗಂಡ ದೂರದಲ್ಲಿದ್ದು ತಾನೇ ಮನೆ ಜವಾಬ್ದಾರಿಯನ್ನು ಹೊತ್ತು ನಡೆಸುವ ಏಕಾಂಗಿ ಜೀವನ. ಎರಡನೆಯವಳು ವಿಚ್ಛೇದಿತೆ. ಡೈವೊರ್ಸಿ ಎಂಬ ಹಣೆ ಪಟ್ಟಿ ಕಟ್ಟಿಕೊಂಡವಳೆಂಬ ನೋವಿನೊಂದಿಗೆ ಸಾಗಿಸುವ ಒಂಟಿ ಬದುಕಿನ ಸುತ್ತ ಹೆಣೆದ ಕಥೆಯವಳು. ಕೊನೆಯದಾಗಿ ಬರುವ ಮೂರನೆಯವಳು ಎಲ್ಲರಿಗೂ ಹತ್ತಿರವಾಗುವ ಒಂದು ಕುಟುಂಬದ ಹಿರಿಯವಳು. ಈ ಪಾತ್ರದಲ್ಲಿ ಶಿಲ್ಪಾ ಅವರು ಹಲವಾರು ಉಲ್ಲೇಖನೀಯ ಅಂಶಗಳನ್ನು ವೇದಿಕೆ ಮೇಲೆ ತಂದಿದ್ದಾರೆ. ಒಂದು ರೀತಿಯ ಪರಕಾಯ ಪ್ರವೇಶ ಮಾಡಿದ್ದಾರೆ ಎಂದರೂ ತಪ್ಪಾಗಲಾರದು. ಇಲ್ಲಿ ಅವರು ತಮ್ಮ ರಂಗಭೂಮಿಯ ಅನುಭವವನ್ನೆಲ್ಲಾ ಧಾರೆಯೆರೆದಿದ್ದಾರೆ. ಕುಟುಂಬ ಫೋಟೊದೊಳಗಿನ ಒಬ್ಬೊಬ್ಬರನ್ನೇ ಸ್ವಾರಸ್ಯಕರವಾಗಿ ಪರಿಚಯಿಸುತ್ತಾ ಗಮನ ಸೆಳೆಯುತ್ತಾರೆ. ಇಲ್ಲಿ ಇವಳೇ, ಅಮ್ಮ, ಅಜ್ಜಿ, ಅತ್ತೆ ಎಂದು ಮುಂತಾಗಿ ಕರೆಯಲ್ಪಟ್ಟು ತನ್ನ ನಿಜ ಹೆಸರನ್ನೇ ಮರೆತ ಮನೋಜ್ಞ ಅಭಿನಯ ಮಾರ್ಮಿಕವಾಗಿತ್ತು. 

ಮೂರು ಪಾತ್ರಗಳಿಗೆ ತಕ್ಕಂತೆ ಸಣ್ಣ ಹಾಡುಗಳ ಮಧ್ಯೆ ಲಗುಬಗನೆ ಮಾರ್ಪಾಡುಗೊಳ್ಳುವ ವೇದಿಕೆ ಮತ್ತು ಶಿಲ್ಪಾ ಅವರ ಪೂರ್ವತಯಾರಿ ತಂಡದ ಸಹಕಾರದೊಂದಿಗೆ ಎದ್ದು ಕಾಣುತ್ತದೆ. ಇದರ ಸಾಹಿತ್ಯ ರಚನೆ ಖುದ್ದು ಅವರದ್ದೇ. ಅನುಭವಿ ರಂಗಕರ್ಮಿ ರವಿರಾಜ್‌ ಹೆಚ್‌.ಪಿ. ಅವರ ನಿರ್ದೇಶನ ಮತ್ತು ಗೀತಂ ಗಿರೀಶ್‌ ಅವರ ಸಂಗೀತ ನಾಟಕದ ಯಶಸ್ಸಿಗೆ ಪೂರಕವಾಗಿತ್ತು. 

ಜೀವನ್‌ ಶೆಟ್ಟಿ 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.