ಜಾಗೃತಿ ಮೂಡಿಸಿದ ಅನ್ನದಾತ ವಿಮೋಚನೆ


Team Udayavani, Aug 24, 2018, 6:08 PM IST

8.jpg

ರಾಜ್ಯ ಸರಕಾರ, ದ.ಕ. ಜಿ.ಪಂ., ಕೃಷಿ ಇಲಾಖೆ ಬಂಟ್ವಾಳ ವತಿಯಿಂದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ-ಸಮಗ್ರ ಕೃಷಿ ಅಭಿಯಾನ ಪ್ರಯುಕ್ತ ತಾಲೂಕಿನ ವಿವಿಧೆಡೆ ಪ್ರದರ್ಶಿಸಲಾದ “ಅನ್ನದಾತ ವಿಮೋಚನೆ’ ಎಂಬ ಕಿರು ನಾಟಕ ಸಾರ್ವಜನಿಕರ ಮೆಚ್ಚುಗೆ ಗಳಿಸಿದೆ.  ರೈತರೇ ದೇಶದ ಬೆನ್ನೆಲುಬು. ಆದರೆ ಅವರೇ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇದರಿಂದ ರೈತರನ್ನು ಮುಕ್ತಿಗೊಳಿಸುವುದು ಹೇಗೆ ಎನ್ನುವ ಸಂದೇಶ ಸಾರುವ ಈ ಕಿರು ನಾಟಕ ರೈತರಿಗೆ ಮಾಹಿತಿಯೊಂದಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶ ಹೊಂದಿ ಯಶಸ್ವಿಯಾಯಿತು. 

ಕಿರು ನಾಟಕದ ವಿಶೇಷತೆಯೆಂದರೆ ಇದರಲ್ಲಿ ಅಭಿನಯಿಸಿದವರು ಹವ್ಯಾಸಿ ಅಥವಾ ವೃತ್ತಿಪರ ನಾಟಕ ಕಲಾವಿದರಲ್ಲ. ಬದಲಾಗಿ ಯಕ್ಷಗಾನ ಕಲಾವಿದರು. ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಸರಪಾಡಿ ಅಶೋಕ ಶೆಟ್ಟಿ ಅವರ ನೇತೃತ್ವದಲ್ಲಿ ಅಭಿನಯಿಸಿ ಜನಮೆಚ್ಚುಗೆ ಗಳಿಸಿದರು. ಕೃಷಿ ಕ್ಷೇತ್ರದಲ್ಲಿ ಪ್ರಸ್ತುತ ರೈತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮನೋಜ್ಞವಾಗಿ ತಿಳಿಯಪಡಿಸಿ ಅದನ್ನು ಬಗೆಹರಿಸುವ ಜತೆಗೆ ಪರಿಸರ ಮಾರಕ ಮತ್ತು ಮಣ್ಣಿನ ಸತ್ವ ಹೀರುವ ರಾಸಾಯನಿಕ ಗೊಬ್ಬರಗಳನ್ನು ವಿರೋಧಿಸಿ ಪರಿಸರ ಮತ್ತು ಮಣ್ಣಿನ ಸತ್ವ ಸಂರಕ್ಷಣೆಯೊಂದಿಗೆ ಕೃಷಿ ನಡೆಸಿದರೆ ಅನ್ನದಾತನ ಸಮಸ್ಯೆಗಳಿಗೆ ವಿಮೋಚನೆ ಎಂಬ ಸಂದೇಶವನ್ನು ನಾಟಕ ಸಾರಿದೆ. 

ರೈತನೊಬ್ಬ ಕೃಷಿಯಲ್ಲಿ ಸೋತು ಸಾಲಗಳಿಂದ ಕಂಗೆಟ್ಟು, ಪತ್ನಿಯಿಂದ ದೂಷಣೆಗೊಳಪಟ್ಟು ಆತ್ಮಹತ್ಯೆಗೆ ಮುಂದಾಗುವ ಮೊದಲು ಜನಪ್ರತಿನಿಧಿಯಲ್ಲಿ ತನ್ನ ಪರಿಸ್ಥಿತಿಯನ್ನು ವಿವರಿಸಿದಾಗ ಸಾಮಾಜಿಕ, ಪರಿಸರ ಹೋರಾಟಗಾರನ ಸಲಹೆಯಂತೆ ಪರಿಸರ ಮಾರಕ ರಾಸಾಯನಿಕ ಗೊಬ್ಬರ ಬಳಸದೆ ಕೃಷಿ ಕಾರ್ಯ ನಡೆಸುವುದು. ಪ್ರಾಕೃತಿಕ ಅಸಮತೋಲನವಾಗದಂತೆ ಅರಣ್ಯ ಸಂರಕ್ಷಣೆ ಮೊದಲಾದ ಧ್ಯೇಯಗಳ ಪ್ರತಿಜ್ಞೆ ನಡೆಸುವುದರೊಂದಿಗೆ ಕೃಷಿ ವಲಯದಲ್ಲಿ ರೈತರು ಅನುಸರಿಸಬೇಕಾದ ಮಾರ್ಗ, ಸಾವಯವ ಕೃಷಿ ಪದ್ಧತಿ, ಪರಿಸರ ಮಾಹಿತಿಯೊಂದಿಗೆ ಕೃಷಿಯಿಂದ ತನ್ನ ಹಾಗೂ ದೇಶದ ಅಭಿವೃದ್ಧಿ ಎಂಬ ಸಂದೇಶ ಕಿರು ನಾಟಕದಲ್ಲಿ ಮೂಡಿ ಬಂತು. ದೇಶ ಕಾಯುವ ಯೋಧ ಮತ್ತು ನಮಗಾಗಿ ಅನ್ನ ನೀಡುವ ರೈತ ಭಾರತಾಂಬೆಯ ಕಣ್ಣುಗಳಿದ್ದಂತೆ ಅವರನ್ನು ಗೌರವಿಸಬೇಕಾದುದು ಎಲ್ಲರ ಕರ್ತವ್ಯ ಎಂದು ಈ ಕಿರು ನಾಟಕದ ಮೂಲಕ ಹೇಳಲಾಯಿತು.

ಜನಪ್ರತಿನಿಧಿಯಾಗಿ ಕಡಬ ದಿನೇಶ್‌ ರೈ, ರೈತನಾಗಿ ಕೋಡಪದವು ದಿನೇಶ, ಮಡದಿಯಾಗಿ ಸುಂದರ ಬಂಗಾಡಿ, ಬ್ಯಾಂಕ್‌ ಮ್ಯಾನೇಜರ್‌ ಆಗಿ ಶಶಿಧರ ಬಾಚಕೆರೆ, ಪರಿಸರ, ಕೃಷಿಪರ ಹೋರಾಟಗಾರನಾಗಿ ಸರಪಾಡಿ ಅಶೋಕ ಶೆಟ್ಟಿ ಪಾತ್ರ ವಹಿಸಿದ್ದರು. ಸುಧಾಕರ ಮೂಡಬಿದಿರೆ ಸಂಗೀತ ನೀಡಿದ್ದರು.

ರತ್ನದೇವ್‌ ಪುಂಜಾಲಕಟ್ಟೆ 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.