ಜಾಗೃತಿ ಮೂಡಿಸಿದ ಅನ್ನದಾತ ವಿಮೋಚನೆ


Team Udayavani, Aug 24, 2018, 6:08 PM IST

8.jpg

ರಾಜ್ಯ ಸರಕಾರ, ದ.ಕ. ಜಿ.ಪಂ., ಕೃಷಿ ಇಲಾಖೆ ಬಂಟ್ವಾಳ ವತಿಯಿಂದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ-ಸಮಗ್ರ ಕೃಷಿ ಅಭಿಯಾನ ಪ್ರಯುಕ್ತ ತಾಲೂಕಿನ ವಿವಿಧೆಡೆ ಪ್ರದರ್ಶಿಸಲಾದ “ಅನ್ನದಾತ ವಿಮೋಚನೆ’ ಎಂಬ ಕಿರು ನಾಟಕ ಸಾರ್ವಜನಿಕರ ಮೆಚ್ಚುಗೆ ಗಳಿಸಿದೆ.  ರೈತರೇ ದೇಶದ ಬೆನ್ನೆಲುಬು. ಆದರೆ ಅವರೇ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇದರಿಂದ ರೈತರನ್ನು ಮುಕ್ತಿಗೊಳಿಸುವುದು ಹೇಗೆ ಎನ್ನುವ ಸಂದೇಶ ಸಾರುವ ಈ ಕಿರು ನಾಟಕ ರೈತರಿಗೆ ಮಾಹಿತಿಯೊಂದಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶ ಹೊಂದಿ ಯಶಸ್ವಿಯಾಯಿತು. 

ಕಿರು ನಾಟಕದ ವಿಶೇಷತೆಯೆಂದರೆ ಇದರಲ್ಲಿ ಅಭಿನಯಿಸಿದವರು ಹವ್ಯಾಸಿ ಅಥವಾ ವೃತ್ತಿಪರ ನಾಟಕ ಕಲಾವಿದರಲ್ಲ. ಬದಲಾಗಿ ಯಕ್ಷಗಾನ ಕಲಾವಿದರು. ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಸರಪಾಡಿ ಅಶೋಕ ಶೆಟ್ಟಿ ಅವರ ನೇತೃತ್ವದಲ್ಲಿ ಅಭಿನಯಿಸಿ ಜನಮೆಚ್ಚುಗೆ ಗಳಿಸಿದರು. ಕೃಷಿ ಕ್ಷೇತ್ರದಲ್ಲಿ ಪ್ರಸ್ತುತ ರೈತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮನೋಜ್ಞವಾಗಿ ತಿಳಿಯಪಡಿಸಿ ಅದನ್ನು ಬಗೆಹರಿಸುವ ಜತೆಗೆ ಪರಿಸರ ಮಾರಕ ಮತ್ತು ಮಣ್ಣಿನ ಸತ್ವ ಹೀರುವ ರಾಸಾಯನಿಕ ಗೊಬ್ಬರಗಳನ್ನು ವಿರೋಧಿಸಿ ಪರಿಸರ ಮತ್ತು ಮಣ್ಣಿನ ಸತ್ವ ಸಂರಕ್ಷಣೆಯೊಂದಿಗೆ ಕೃಷಿ ನಡೆಸಿದರೆ ಅನ್ನದಾತನ ಸಮಸ್ಯೆಗಳಿಗೆ ವಿಮೋಚನೆ ಎಂಬ ಸಂದೇಶವನ್ನು ನಾಟಕ ಸಾರಿದೆ. 

ರೈತನೊಬ್ಬ ಕೃಷಿಯಲ್ಲಿ ಸೋತು ಸಾಲಗಳಿಂದ ಕಂಗೆಟ್ಟು, ಪತ್ನಿಯಿಂದ ದೂಷಣೆಗೊಳಪಟ್ಟು ಆತ್ಮಹತ್ಯೆಗೆ ಮುಂದಾಗುವ ಮೊದಲು ಜನಪ್ರತಿನಿಧಿಯಲ್ಲಿ ತನ್ನ ಪರಿಸ್ಥಿತಿಯನ್ನು ವಿವರಿಸಿದಾಗ ಸಾಮಾಜಿಕ, ಪರಿಸರ ಹೋರಾಟಗಾರನ ಸಲಹೆಯಂತೆ ಪರಿಸರ ಮಾರಕ ರಾಸಾಯನಿಕ ಗೊಬ್ಬರ ಬಳಸದೆ ಕೃಷಿ ಕಾರ್ಯ ನಡೆಸುವುದು. ಪ್ರಾಕೃತಿಕ ಅಸಮತೋಲನವಾಗದಂತೆ ಅರಣ್ಯ ಸಂರಕ್ಷಣೆ ಮೊದಲಾದ ಧ್ಯೇಯಗಳ ಪ್ರತಿಜ್ಞೆ ನಡೆಸುವುದರೊಂದಿಗೆ ಕೃಷಿ ವಲಯದಲ್ಲಿ ರೈತರು ಅನುಸರಿಸಬೇಕಾದ ಮಾರ್ಗ, ಸಾವಯವ ಕೃಷಿ ಪದ್ಧತಿ, ಪರಿಸರ ಮಾಹಿತಿಯೊಂದಿಗೆ ಕೃಷಿಯಿಂದ ತನ್ನ ಹಾಗೂ ದೇಶದ ಅಭಿವೃದ್ಧಿ ಎಂಬ ಸಂದೇಶ ಕಿರು ನಾಟಕದಲ್ಲಿ ಮೂಡಿ ಬಂತು. ದೇಶ ಕಾಯುವ ಯೋಧ ಮತ್ತು ನಮಗಾಗಿ ಅನ್ನ ನೀಡುವ ರೈತ ಭಾರತಾಂಬೆಯ ಕಣ್ಣುಗಳಿದ್ದಂತೆ ಅವರನ್ನು ಗೌರವಿಸಬೇಕಾದುದು ಎಲ್ಲರ ಕರ್ತವ್ಯ ಎಂದು ಈ ಕಿರು ನಾಟಕದ ಮೂಲಕ ಹೇಳಲಾಯಿತು.

ಜನಪ್ರತಿನಿಧಿಯಾಗಿ ಕಡಬ ದಿನೇಶ್‌ ರೈ, ರೈತನಾಗಿ ಕೋಡಪದವು ದಿನೇಶ, ಮಡದಿಯಾಗಿ ಸುಂದರ ಬಂಗಾಡಿ, ಬ್ಯಾಂಕ್‌ ಮ್ಯಾನೇಜರ್‌ ಆಗಿ ಶಶಿಧರ ಬಾಚಕೆರೆ, ಪರಿಸರ, ಕೃಷಿಪರ ಹೋರಾಟಗಾರನಾಗಿ ಸರಪಾಡಿ ಅಶೋಕ ಶೆಟ್ಟಿ ಪಾತ್ರ ವಹಿಸಿದ್ದರು. ಸುಧಾಕರ ಮೂಡಬಿದಿರೆ ಸಂಗೀತ ನೀಡಿದ್ದರು.

ರತ್ನದೇವ್‌ ಪುಂಜಾಲಕಟ್ಟೆ 

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.