ಸುದರ್ಶನ ಉರಾಳರಿಗೆ ಯಕ್ಷಜಂಗಮ ಪ್ರಶಸ್ತಿ 


Team Udayavani, Aug 24, 2018, 6:12 PM IST

10.jpg

ಕೋಟದ ಸುದರ್ಶನ ಉರಾಳರು ಎಲೆಕ್ಟ್ರಿಕಲ್‌ ಡಿಪ್ಲೊಮ ಪದವೀಧರ. ಯಕ್ಷಗಾನ ಅವರ ಹವ್ಯಾಸ. ಮನೆಯ ಸುತ್ತಮುತ್ತ ಸದಾ ನಡೆಯುತ್ತಿದ್ದ ಯಕ್ಷಗಾನ ಬಯಲಾಟಗಳಿಂದ ಪ್ರಭಾವಿತರಾದ ಉರಾಳರು ಮೊದಲು ಗೆಜ್ಜೆಕಟ್ಟಿದ್ದು ಶಾಂಭವಿ ಗಿಳಿಯಾರು ಶಾಲೆಯ ಯಕ್ಷ ವೇದಿಕೆಯಲ್ಲಿ. 1979ರಲ್ಲಿ ಗುರು ಎಂ.ಎನ್‌. ಮಧ್ಯಸ್ಥರಿಂದ ತರಬೇತಿ ಪಡೆದು ಯಕ್ಷತರಂಗ ಬಾಲಕರ ಯಕ್ಷಗಾನ ಮೇಳದಲ್ಲಿ ಒಡ್ಡೋಲಗ ಕೊಟ್ಟವರು. ಮುಂದೆ ನಾಲ್ಕು ವರ್ಷಗಳ ಕಾಲ ಅದೇ ಮೇಳದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಾ ರಾಜ್ಯಾದ್ಯಂತ ಯಕ್ಷಪ್ರದರ್ಶನ ನೀಡಿದ ಹೆಗ್ಗಳಿಕೆ ಇವರದು. 

 ಶಿವರಾಮ ಕಾರಂತರು, ಮದ್ದಲೆ ಮಹಾಬಲ ಕಾರಂತರು, ನೀಲಾವರ ಲಕ್ಷ್ಮೀನಾರಾಯಣ ರಾವ್‌, ಹೆರೆಂಜಾಲು ವೆಂಕಟರಮಣ ಗಾಣಿಗ, ಪೇತ್ರಿ ಮಂಜುನಾಥ ಪ್ರಭು, ಬನ್ನಂಜೆ ಸಂಜೀವ ಸುವರ್ಣರು ಹೀಗೆ ಅನೇಕ ಗುರು ಪರಂಪರೆಯಡಿಯಲ್ಲಿ ಉರಾಳರು ಬೆಳೆದು ಬಂದವರು. ಯಕ್ಷ ನಾಟ್ಯದ ಜೊತೆಗೆ ಮದ್ದಲೆ ವಾದನ, ಯಕ್ಷಪ್ರಸಾಧನ ಕಲೆಗಳನ್ನು ಮೈಗೂಡಿಸಿಕೊಂಡರು. ಸ್ತ್ರೀ ವೇಷಕ್ಕೆ ಒಪ್ಪುವ ಆಳಂಗ, ಶಾರೀರದಿಂದಾಗಿ ಸುಗಭೆì, ಕಮಲಗಂಧಿನಿ, ಆಸ್ತಿ, ಸುಭದ್ರೆ ಮೊದಲಾದ ಪಾತ್ರಗಳಲ್ಲಿ ಮಿಂಚಿದರು. 

 ಹತ್ತು ಹಲವು ಸಂಘ ಸಂಸ್ಥೆಗಳು , ಶಾಲಾ ಕಾಲೇಜುಗಳಲ್ಲಿ ನೂರಾರು ಹವ್ಯಾಸಿ ಕಲಾವಿದರಿಗೆ ಗೆಜ್ಜೆ ಕಟ್ಟಿಸಿದವರು. ತಾವೇ ಪ್ರಸಂಗವನ್ನು ನಿರ್ದೇಶಿಸಿ, ಚೌಕಿಯಲ್ಲಿ ಪಾತ್ರಧಾರಿಗಳಿಗೆ ವೇಷಕಟ್ಟಿ, ವೇದಿಕೆಯಲ್ಲಿ ಮದ್ದಲೆ ಹಿಡಿದು ರಂಗಕಟ್ಟಿದವರು ಉರಾಳರು. 

ಯಕ್ಷದರ್ಶನ ಹಂದಟ್ಟು ಕೋಟ ಎಂಬುದು ಉರಾಳರ ಕನಸಿನ ಕೂಸು. ಸಮಾನ ಮನಸ್ಕರಾದ ಹವ್ಯಾಸಿ ಯಕ್ಷಗಾನ ಕಲಾವಿದರನ್ನು ಕೂಡಿಕೊಂಡು ಕಟ್ಟಿದ ಸಂಸ್ಥೆ ನಾಡಿನಾದ್ಯಂತ ದಿಗ್ವಿಜಯವನ್ನು ಸಾಧಿಸಿದೆ. ರಂಗಾಯಣದಲ್ಲಿ ಬಿ. ವಿ. ಕಾರಂತರ ನಿರ್ದೇಶನದ ಪುಣ್ಯಕೋಟಿ, ಬೊಮ್ಮನಹಳ್ಳಿ ಕಿಂದರಿಜೋಗಿ, ರಾಗರಸ ನಾಟಕಗಳಲ್ಲಿ ನೃತ್ಯ ಸಂಯೋಜನೆ ಮತ್ತು ಚಂಡೆವಾದನದ ಮೂಲಕ ಗುರುತಿಸಿಕೊಂಡವರು.ಪುಣೆ ಫಿಲ್ಮ್ ಅಕಾಡೆಮಿಯ ಪರಿಭ್ರಮಣ ಎಂಬ ಹಿಂದಿ ಚಲನಚಿತ್ರದಲ್ಲಿ ನಟನೆ, ಕನ್ನಡದ ರಂಗ ಎಸ್‌ಎಸ್‌ಎಲ್‌ಸಿ, ಯಶವಂತ್‌ ಚಲನಚಿತ್ರಗಳಲ್ಲಿ ನಟಿಸಿರುವುದು ಉರಾಳರ ಹೆಮ್ಮೆಯ ಗರಿಗಳಲ್ಲಿ ಒಂದು. 

ಮೂರು ದಶಕಗಳಿಂದ ಕೆ.ಮೋಹನ್‌ ನೇತೃತ್ವದ ಬೆಂಗಳೂರಿನ ಯಕ್ಷದೇಗುಲ ಯಕ್ಷಗಾನ ತಂಡದಲ್ಲಿ ಮದ್ದಲೆ ವಾದಕರಾಗಿ, ನೃತ್ಯ ನಿರ್ದೇಶಕರಾಗಿ, ಪ್ರಸಾಧನ ಕಲಾವಿದರಾಗಿ, ಮೈಕ್‌ಲೈಟ್‌ ಟೆಕ್ನೀಷಿಯನ್‌ ಆಗಿ, ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಾ ದೇಶದ ಉದ್ದಗಲಕ್ಕೂ ಯಕ್ಷ ಪ್ರದರ್ಶನ ನೀಡುವಲ್ಲಿ ದುಡಿಯುತ್ತಿದ್ದಾರೆ. ಹವ್ಯಾಸಿ ಬರಹಗಾರರಾಗಿರುವ ಉರಾಳರು ನಾಡಿನ ಅನೇಕ ಪತ್ರಿಕೆಗಳಿಗೆ ರಂಗ ವಿಮರ್ಶೆಗಳನ್ನು ಬರೆದಿದ್ದಾರೆ. 
 ಸದಾ ರಂಗಾಸಕ್ತಿಯಲ್ಲಿ ತೊಡಗಿಸಿಕೊಂಡಿರುವ ಉರಾಳರನ್ನು ಆಗಸ್ಟ್‌ 26ರಂದು ತೆಕ್ಕಟ್ಟೆ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಯಕ್ಷಗಾನ ಕಾರ್ಯಕ್ರಮದಲ್ಲಿ ಯಕ್ಷ‌ಜಂಗಮ ಪ್ರಶಸ್ತಿನ್ನಿತ್ತು ಗೌರವಿಸಲಾಗುವುದು. 

ಸುಜಯೀಂದ್ರ ಹಂದೆ ಎಚ್‌.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.