ಮುಂಬಯಿಯಲ್ಲಿ ಮಿಂಚಿದ ಧೀಶಕ್ತಿ ಯಕ್ಷ ಬಳಗದ ವನಿತೆಯರು


Team Udayavani, Aug 31, 2018, 6:00 AM IST

vanitheyaru.jpg

ಮುಂಬಯಿಯ ಕಲಾ ಪ್ರಕಾಶ ಪ್ರತಿಷ್ಠಾನ ಏರ್ಪಡಿಸಿದ ನಾಲ್ಕು ದಿನಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದಲ್ಲಿ ಪದ್ಮಾ ಕೆ. ಆರ್‌. ಆಚಾರ್ಯ ಸಾರಥ್ಯದ ಪುತ್ತೂರಿನ ಧೀಶಕ್ತಿ ಮಹಿಳಾ ಯಕ್ಷಬಳಗದ ಕಲಾವಿದೆಯರು ತಮ್ಮ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿ ವಾಕ್ಚಾತುರ್ಯದ ಮೂಲಕ ಮುಂಬಯಿ ಪ್ರೇಕ್ಷಕರ ಮನಸೂರೆಗೊಂಡಿದ್ದಾರೆ. 

 ಭಾಗವತರಾಗಿ ಕು| ಅಮೃತಾ ಅಡಿಗ, ಚೆಂಡೆಯಲ್ಲಿ ಕು| ಅಪೂರ್ವಾ ಸುರತ್ಕಲ್, ಮದ್ದಳೆಯಲ್ಲಿ, ಸತ್ಯನಾರಾಯಣ ಅಡಿಗ ಹಿಮ್ಮೇಳಕ್ಕೆ ಧ್ವನಿಯಾದರು. ಪ್ರತಿದಿನವೂ ಕಿಕ್ಕಿರಿದ ಪ್ರೇಕ್ಷಕರಿಂದ ತುಂಬಿದ ಸಭಾಗೃಹ ಕಲಾವಿದೆಯರಿಗೆ ಸ್ಫೂರ್ತಿದಾಯಕವಾಗಿತ್ತು.

ಮೊದಲನೆಯ ದಿನ ಸಾಂತಾಕ್ರೂಸ್‌ ಪೂರ್ವದಲ್ಲಿರುವ ಪೇಜಾವರ ಮಠದಲ್ಲಿ ಶ್ರೀಕೃಷ್ಣ ರಾಯಭಾರ ಕಥಾಭಾಗದ ತಾಳಮದ್ದಳೆಯನ್ನು ನಡೆಸಿಕೊಟ್ಟರು. ಶ್ರೀಕೃಷ್ಣನಾಗಿ, ಪದ್ಮಾ ಆಚಾರ್ಯ, ವಿದುರನಾಗಿ ವೀಣಾ ತಂತ್ರಿ, ಕೌರವನಾಗಿ ಸುಮಂಗಲಾ ರತ್ನಾಕರ್‌, ದ್ರೌಪದಿಯಾಗಿ ಆಶಾಲತಾ ಕಲ್ಲೂ ರಾಯ ಕುಂತಿಯಾಗಿ ಅಶ್ವಿ‌ನಿ ನಿಡ್ವಣ್ಣಾಯ ಮಿಂಚಿದರು.

ಎರಡನೆಯ ದಿನ ಅಸಲ್ಫಾದ ಗೀತಾಂಬಿಕಾ ದೇವಾಲಯದಲ್ಲಿ ಕರ್ಣ ಪರ್ವ ನಡೆಯಿತು. ಕರ್ಣನಾಗಿ ಪದ್ಮಾ ಆಚಾರ್ಯ, ಅರ್ಜುನನಾಗಿ, ವೀಣಾ ತಂತ್ರಿ, ಶಲ್ಯನಾಗಿ ಸುಮಂಗಲಾ ರತ್ನಾಕರ್‌, ಶ್ರೀಕೃಷ್ಣ ನಾಗಿ ಅಶ್ವಿ‌ನಿ ನಿಡ್ವಣ್ಣಾಯ, ಸರ್ಪಾಸ್ತ್ರ ಮತ್ತು ವೃದ್ಧ ವಿಪ್ರನಾಗಿ ಆಶಾಲತಾ ಕಲ್ಲೂರಾಯ ಮೆಚ್ಚುಗೆ ಪಡೆದರು.

ಮೂರನೇ ದಿನ ಮೀರಾ- ಡಹಾಣು ಬಂಟ್ಸ್‌ ಭಾಯಂದರ್‌ ವಲಯ ಮೀರಾ ರೋಡಿನ ಪಲಿಮಾರು ಮಠದಲ್ಲಿ ಸಮರ ಸೌಗಂಧಿಕಾ ತಾಳಮದ್ದಳೆ ಆಯೋಜಿಸಿತು. ಭೀಮಸೇನನಾಗಿ ಪದ್ಮಾ ಆಚಾರ್ಯ, ದ್ರೌಪದಿಯಾಗಿ ಸುಮಂಗಲಾ ರತ್ನಾಕರ್‌, ಹನುಮಂತನಾಗಿ ವೀಣಾ ತಂತ್ರಿ, ಕುಬೇರನಾಗಿ ಆಶಾಲತಾ ಕಲ್ಲೂರಾಯ, ವನಪಾಲಕನಾಗಿ ಅಶ್ವಿ‌ನಿ ನಿಡ್ವಣ್ಣಾಯ ಮನಸೂರೆಗೊಂಡರು. 

ಕೊನೆಯ ದಿನ, ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮತ್ತು ಐಕಳ ವಿಶ್ವನಾಥ ಶೆಟ್ಟಿ ಸಹಯೋಗದಲ್ಲಿ ಸಯನ್‌ನ ನಿತ್ಯಾನಂದ ಹಾಲ್‌ನಲ್ಲಿ ವೀರಮಣಿ ಕಾಳಗ ತಾಳಮದ್ದಳೆ ನಡೆಯಿತು. ಹನುಮಂತನಾಗಿ ಪದ್ಮಾ ಆಚಾರ್ಯ, ವೀರಮಣಿಯಾಗಿ ಸುಮಂಗಲಾ ರತ್ನಾಕರ್‌, ಶತ್ರುಘ್ನ ನಾಗಿ ವೀಣಾ ತಂತ್ರಿ, ಈಶ್ವರನಾಗಿ ಆಶಾಲತಾ ಕಲ್ಲೂರಾಯ, ಶ್ರೀರಾಮನಾಗಿ, ಅಶ್ವಿ‌ನಿ ನಿಡ್ವಣ್ಣಾಯ ನಿರರ್ಗಳ ಮಾತುಗಾರಿಕೆ ಮೂಲಕ ಮನಗೆದ್ದರು.

 ಕಲಾಪ್ರೇಮಿ
 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.