ಮಿಜಾರು ಮೋಹನ ಶೆಟ್ಟಿಗಾರರಿಗೆ ಬ್ರಾಮರೀ ಯಕ್ಷಮಣಿ ಪ್ರಶಸ್ತಿ 


Team Udayavani, Aug 31, 2018, 6:00 AM IST

7.jpg

ಬ್ರಾಮರೀ ಯಕ್ಷಮಿತ್ರರು(ರಿ.) ಮಂಗಳೂರು ವಾಟ್ಸಪ್‌ ಬಳಗ ಪ್ರತೀವರ್ಷ ವಾರ್ಷಿಕೋತ್ಸವ ಸಂದರ್ಭದಲ್ಲಿ ಯಕ್ಷಗಾನದ ಹಿರಿಯ ಸಾಧಕರೊಬ್ಬರಿಗೆ ಬ್ರಾಮರಿ ಯಕ್ಷಮಣಿ ಪ್ರಶಸ್ತಿ ಹಾಗೂ ಗೌರವ ಸಂಮಾನ ನೀಡುವ ಮೂಲಕ ಯಕ್ಷಗಾನ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದೆ . ತೃತೀಯ ವಾರ್ಷಿಕೋತ್ಸವ ಸೆ.1ರಂದು ಜರಗಲಿದ್ದು, ಮದ್ದಲೆ – ಚೆಂಡೆ ವಾದಕರಾದ ಮಿಜಾರು ಮೋಹನ ಶೆಟ್ಟಿಗಾರ್‌ ಇವರಿಗೆ ಬ್ರಾಮರೀ ಯಕ್ಷಮಣಿ ಪ್ರಶಸ್ತಿ ಪ್ರದಾನಿಸಲಾಗುವುದು ಹಾಗೂ ನೇಪಥ್ಯ ಕಲಾವಿದರಾದ ಬಿ. ಐತಪ್ಪ ಟೈಲರ್‌ ಮತ್ತು ರಘು ಶೆಟ್ಟಿ ನಾಳ ಅವರನ್ನು ಸಮ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಪ್ರತಿಷ್ಠಾನದ ಅಧ್ಯಕ್ಷ,ಭಾಗವತ ಪಟ್ಲ ಸತೀಶ ಶೆಟ್ಟಿಯವರಿಗೆ ಗೌರವ ಸಮ್ಮಾನ ನೀಡಲಾಗುವುದು.

ಮಿಜಾರು ಮೋಹನ ಶೆಟ್ಟಿಗಾರ 
ಶೆಟ್ಟಿಗಾರರು ತೆಂಕುತಿಟ್ಟಿನ ಪ್ರಸಿದ್ಧ ಮದ್ದಲೆ ಚೆಂಡೆ ವಾದಕರು. 15ನೇ ಪ್ರಾಯದಲ್ಲೇ ಗುರುಪುರ ಅಣ್ಣಿಭಟ್‌ ರವರಲ್ಲಿ ಚೆಂಡೆ – ಮದ್ದಲೆ ವಾದನ ಕಲಿತುಕೊಂಡು ಪರಿಣತರಾದರು.1982ರಲ್ಲಿ ಕಟೀಲು ಮೇಳದ ಯಜಮಾನರಾದ ಕಲ್ಲಾಡಿ ವಿಠಲ ಶೆಟ್ಟರಿಂದ ಆಹ್ವಾನ ಬಂದಾಗ ಅದರಲ್ಲಿ ಸೇರಿದರು . ಆಗ ಭಾಗವತರಾಗಿದ್ದವರು ಕುರಿಯ ಗಣಪತಿ ಶಾಸ್ತ್ರಿ ಹಾಗೂ ಮುಖ್ಯ ಮದ್ದಲೆಗಾರರಾಗಿದ್ದವರು ನೆಡ್ಲೆ ನರಸಿಂಹ ಭಟ್ಟರು . ಇವರಿಬ್ಬರ ಸಾಂಗತ್ಯದಲ್ಲಿ ಶೆಟ್ಟಿಗಾರರಿಗೆ ಅಪೂರ್ವವಾದ ಅನುಭವ ದೊರಕಿತು . ಮೇಳದಲ್ಲಿದ್ದ ಕಲಾವಿದರೂ ದಿಗ್ಗಜರೇ ಆಗಿದ್ದ ಕಾರಣ ಶೆಟ್ಟಿಗಾರು ಹಿಮ್ಮೇಳ ವಾದನದಲ್ಲಿ ನೈಪುಣ್ಯತೆ ಗಳಿಸಿದರು. ಚೌಕಿಪೂಜೆಗೆ ಮದ್ದಲೆ ಹಿಡಿದರೆ , ಮುಂಜಾವು ಮಂಗಲಕ್ಕೇ ಮದ್ದಲೆ ಕೆಳಗಿಡುವುದು . ಅನಂತರ ಕರ್ಣಾಟಕ ಮೇಳಕ್ಕೆ ಹೋಗಿ ದಾಮೋದರ ಮಂಡೆಚ್ಚ, ಕಾಂಚನ ನಾರಾಯಣ ಭಟ್ಟ , ದಿನೇಶ ಅಮ್ಮಣ್ಣಾಯ , ಬೊಟ್ಟಿಕೆರೆ ಪುರುಷೋತ್ತಮ ಪೂಂಜರಂಥ ಭಾಗವತ ದಿಗ್ಗಜರಿಗೆ ಸಾಥಿಯಾಗಿ ಮೆರೆದರು. ಈಗ ಕಟೀಲು ಮೂರನೇ ಮೇಳದಲ್ಲಿ ವೃತ್ತಿ ನಿರತರಾಗಿರುವ ಮೋಹನ ಶೆಟ್ಟಿಗಾರರು 35 ವರ್ಷಗಳ ತಿರುಗಾಟದ ಅನುಭವ ಹೊಂದಿದ್ದಾರೆ. ರಾಕ್ಷಸ ಪಾತ್ರಗಳ ತೆರೆಪೊರಪ್ಪಾಟು , ಹನುಮಂತನ ಪ್ರವೇಶ , ಕಿರಾತನ ಪ್ರವೇಶ , ಶ್ರೀರಾಮನ ಒಡ್ಡೋಲಗ, ಶ್ರೀಕೃಷ್ಣನ ಒಡ್ಡೋಲಗ ಮುಂತಾದ ಅಪೂರ್ವ ಸನ್ನಿವೇಶಗಳ ಹಿಮ್ಮೇಳ ವಾದನ ಅರಿತವರಲ್ಲಿ ಶೆಟ್ಟಿಗಾರರೂ ಓರ್ವರು. 

ಐತಪ್ಪ ಟೈಲರ್‌ 
ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಬೇತದವರಾದ ಐತಪ್ಪ ಟೈಲರ್‌ ಎರಡನೇ ತರಗತಿ ಮುಗಿಸಿ ಕುರಿಯ ವಿಠಲ ಶಾಸ್ತ್ರಿಗಳ ಪ್ರೇರಣೆಯಿಂದ ಧರ್ಮಸ್ಥಳ ಮೇಳದಲ್ಲಿ ನಿತ್ಯವೇಷಕ್ಕೆ ಸೇರಿದರು.10 ವರ್ಷಗಳ ಕಾಲ ತಿರುಗಾಟ ನಡೆಸಿ ಮೇಳ ಬಿಟ್ಟ ಬಳಿಕ ಒಲಿದದ್ದು ಟೈಲರ್‌ ಕೆಲಸ . ಯಕ್ಷಗಾನದ ಎಲ್ಲಾ ಪಾತ್ರಗಳ ಅನುಭವ ಹಾಗೂ ಮಾಹಿತಿಯಿರುವ ಕಾರಣ ಯಕ್ಷಗಾನದ ವೇಷಭೂಷಣಗಳ ತಯಾರಿಯಲ್ಲಿ ತೊಡಗಿಸಿಕೊಂಡ‌ರು.ತೆಂಕು – ಬಡಗು ಎರಡೂ ತಿಟ್ಟುಗಳ ಪೌರಾಣಿಕ, ಐತಿಹಾಸಿಕ, ಸಾಂಪ್ರದಾಯಿಕ ಹಾಗೂ ನಾಟಕೀಯ ವೇಷಭೂಷಣಗಳ ತಯಾರಿಯಲ್ಲಿ ವಿಶೇಷ ಪರಿಣತಿ ಹೊಂದಿರುವ ಅನುಭವಿಗಳು.

 ರಘು ಶೆಟ್ಟಿ ನಾಳ 
ನಲವತ್ತು ವರ್ಷಗಳಿಂದ ಕಟೀಲು ಮೇಳದಲ್ಲಿ ನೇಪಥ್ಯ ಕಲಾವಿದರಾಗಿದ್ದಾರೆ ನಾಳ ರಘು ಶೆಟ್ಟಿ. ಚೌಕಿಯಲ್ಲಿ ರಂಗ ಸಹಾಯಕರಾಗಿ ಕಲಾವಿದರ ಪಾತ್ರ ಪೋಷಣೆಗೆ ಸಹಕಾರಿಯಾಗುವ ಕೆಲಸಗಳನ್ನು ಮಾಡುವ ಹಿರಿಯ ವ್ಯಕ್ತಿ . ಎಲ್ಲಾ ವೇಷಗಳು ಸಿದ್ಧವಾಗಬೇಕಾದರೆ ಹಿನ್ನೆಲೆಯಲ್ಲಿ ರಘುರವರ ಸಹಾಯ ಅಗತ್ಯ . ಚುರುಕಿನಿಂದ ಚೌಕಿಯಲ್ಲಿ ಓಡಾಡುವ ರಘುಶೆಟ್ಟರೆಂದರೆ , ಕಲಾವಿದರಿಗೂ ಪ್ರೀತಿ , ಅಭಿಮಾನ. ಎಲ್ಲಾ ಪ್ರಸಂಗಗಳ ರಂಗ ಮಾಹಿತಿ ಹೊಂದಿರುವ ರಘುರವರು ಪ್ರಸಂಗದ ಓಟಕ್ಕೆ ಬೇಕಾಗುವ ಪರಿಕರಗಳ , ಪಾತ್ರಗಳ ವೇಷಭೂಷಣ , ಮಣಿ ಆಭರಣಗಳ , ಆಯುಧಗಳ ಖಚಿತವಾದ ಜ್ಞಾನ ಹೊಂದಿದ್ದು ಅದನ್ನು ಮೊದಲೇ ಸಿದ್ಧಪಡಿಸುವಲ್ಲಿ ನಿಷ್ಣಾತರು. 
 
 ಎಂ.ಶಾಂತರಾಮ ಕುಡ್ವ 

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.