ಚಿಣ್ಣರ ಪ್ರತಿಭೆ ಅನಾವರಣಗೊಳಿಸಿದ ಸಜೀಪದ ಷಣ್ಮುಖೆ 


Team Udayavani, Nov 23, 2018, 6:00 AM IST

5.jpg

ಮಕ್ಕಳಲ್ಲಿ ಎಷ್ಟೋ ಪ್ರತಿಭೆಗಳು ಅಡಗಿರುತ್ತವೆ. ಅಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡಿದಾಗ ಆ ಮಕ್ಕಳು ಸಮಾಜಕ್ಕೆ ಮಾದರಿಯಗುತ್ತಾರೆ ಎಂಬುದಕ್ಕೆ ಸಜೀಪದ ಷಣ್ಮುಖ ಕಲಾ ತರಗತಿಯ ಪುಟಾಣಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಜೀಪದ ಷಣ್ಮುಖೆ ಎಂಬ ಐತಿಹಾಸಿಕ ನಾಟಕವೇ ಸಾಕ್ಷಿ. 

ಸುಮಾರು ಒಂದೂವರೆ ವರ್ಷದಿಂದೀಚೆಗೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರದೊಂದಿಗೆ ಆರಂಭಗೊಂಡ ಶ್ರೀ ಷಣ್ಮುಖ ಕಲಾ ತರಗತಿಯಲ್ಲಿ ಸುಮಾರು 40 ವಿದ್ಯಾರ್ಥಿಗಳು ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದಾರೆ. ಕೊಣಾಜೆ ಸಪ್ತಸ್ವರ ಕಲಾಕೇಂದ್ರದ ಗುರುಗಳಾದ ವಾಸುದೇವ ಕೊಣಾಜೆ ಇವರು ಈ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸುಗಮ ಸಂಗೀತ, ಹಾರ್ಮೋನಿಯಂ, ತಬಲ, ಡೋಲಕ್‌, ಕೀಬೋರ್ಡ್‌ ಮಾತ್ರವಲ್ಲದೆ ನಾಟಕ ಅಭಿನಯ, ಹಾಸ್ಯ ಕಾರ್ಯಕ್ರಮ ನಿರೂಪಣೆ ಹಾಗೂ ಸಂಸ್ಕೃತಿಯನ್ನು ಬೆಳೆಸಲು ಸಂಸ್ಕಾರ ಭಾರತಿಯನ್ನು ಕಲಿಸುತ್ತಿದ್ದಾರೆ. 

ಸುಮಾರು ಒಂದೂವರೆ ವರ್ಷದಿಂದ ಪ್ರತಿ ಆದಿತ್ಯವಾರದಂದು ಸಂಗೀತವನ್ನು ಅಭ್ಯಸಿಸುತ್ತ ಬಂದಿರುವ ಪುಟಾಣಿಗಳು ಹಲವಾರು ಕಡೆಗಳಲ್ಲಿ ಭಕ್ತಿ ರಸಮಂಜರಿ ನೃತ್ಯ ಹಾಗೂ ನಾಟಕ ಪ್ರದರ್ಶನಗಳನ್ನು ನೀಡಿದ್ದು, ದಸರಾ ಸಂದರ್ಭದಲ್ಲಿ ಸುಭಾಷ್‌ನಗರದ ಸುಭಾಸ್‌ ಯುವಕ ಮಂಡಲ ಹಾಗೂ ಶಾರದೋತ್ಸವ ಸಮಿತಿ ಇವರ ಸಹಕಾರದಿಂದ ಸುಭಾಷ್‌ ನಗರದಲ್ಲಿ ನಡೆದ ವಾಸುದೇವ ಕೋಣಾಜೆ ಇವರು ರಚಿಸಿ ನಿರ್ದೇಶನ ನೀಡಿರುವ ಸಜೀಪದ ಷಣ್ಮುಖೆ ಎಂಬ ಐತಿಹಾಸಿಕ ನಾಟಕವನ್ನು ಪ್ರದರ್ಶಿಸಿದರು. 

ನಾಟಕದ ಮೊದಲ ದೃಶ್ಯದಲ್ಲಿ ಮದುವೆಯ ವರ್ಷಾಚರಣೆಯ ಸಂಭ್ರಮದಲ್ಲಿರುವ ನಂದಾವರದ ಅರಸರು ಹಾಗೂ ಅವರ ಧರ್ಮಪತ್ನಿ, ಅರಮನೆಯಲ್ಲಿ ಗಡಿಬಿಡಿಯಲ್ಲಿ ಏಳುತ್ತ ಬೀಳುತ್ತ ಕೆಲಸ ಮಾಡುತ್ತ ನಾಟಕದ ಕಡೆಯವರೆಗೂ ಪ್ರೇಕ್ಷಕರ ಗಮನ ಸೆಳೆಯುವ ಕೆಲಸದ ಆಳು ಬೋಜಣ್ಣನೊಂದಿಗೆ ತಾನು ಮಾಡಿದ ಅಡುಗೆಯನ್ನು ಹೊಗಳುತ್ತಿರುವ ಹಾಸ್ಯ ಪ್ರವೃತ್ತಿಯ ಸುಬ್ರಾಯ ಭಟ್‌ ಮೂರನೇ ದೃಶ್ಯದಲ್ಲಿ ನಂದಾವರ ರಾಜಕುಮಾರನಿಗೆ ಗುಣವಾಗದ ಕಾಯಿಲೆ ಬರುವುದು. ಯಾವುದೇ ಔಷಧ ಮಾಡಿದಾಗಲೂ ಕಾಯಿಲೆ ಗುಣವಾಗದಿದ್ದಾಗ ರಾಜಕುಮಾರನ ಕಾಯಿಲೆಗೆ ಸೂಕ್ತ ಔಷಧ ನೀಡುವವರಿದ್ದರೆ ಬರುವಂತೆ ಅರಸರ ಅಪ್ಪಣೆಯಾಗುತ್ತದೆ. ನಾನಾ ಭಾಷೆಗಳಲ್ಲಿ ಡಂಗೂರ ಸಾರುವ ಡಂಗೂರ ಸಿಂಗ, ಡಂಗೂರದ ಶಬ್ದ ಕೇಳಿ ಔಷಧೋಪಚಾರ ಮಾಡಲು ಮುಂದೆ ಬರುವ ಬಡ ಬ್ರಾಹ್ಮಣ, ಕಾಯಿಲೆಯಿಂದ ನರಳುತ್ತಿರುವ ರಾಜಕುಮಾರನಿಗೆ ಕನಸಿನಲ್ಲಿ ಸರ್ಪವೊಂದು ಕಚ್ಚಿ ನಂಜು ಹೀರಿದಾಗ ರಾಜಕುಮಾರ ಕಾಯಿಲೆಯಿಂದ ಮುಕ್ತನಾಗುವುದು. ನಂಜನ್ನು ಹೀರಿದ ಸರ್ಪ ಸಾವನ್ನಪ್ಪಿದ ಸ್ಥಳದಲ್ಲಿ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ನಿರ್ಮಾಣವಾಗುವಂತಹ ಸಜೀಪ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಐತಿಹಾಸಿಕ ಕಥೆಯನ್ನು ಶ್ರೀ ಷಣ್ಮುಖ ಕಲಾ ತರಗತಿಯ ವಿದ್ಯಾರ್ಥಿಗಳು ಪ್ರಬುದ್ಧವಾಗಿ ಅಭಿನಯಿಸಿದರು. 

 ಜಗದೀಶ ಮಿತ್ತೋಟ 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.