ಮಜ್ಜಿಗೆಬೈಲು ಆನಂದ ಶೆಟ್ಟಿಯವರಿಗೆ ಸೀತಾನದಿ ಪ್ರಶಸ್ತಿ 


Team Udayavani, Oct 5, 2018, 6:00 AM IST

s-3.jpg

ಪ್ರಸಂಗಕರ್ತ, ತಾಳಮದ್ದಳೆ ಅರ್ಥದಾರಿ ಅಭಿನವ ಪಾರ್ಥಿಸುಬ್ಬ ಬಿರುದಾಂಕಿತ ಸೀತಾನದಿ ಗಣಪಯ್ಯ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ ಈ ಬಾರಿ ಬಡಗುತಿಟ್ಟಿನ ಸಂಪ್ರದಾಯದ ಕಲಾವಿದ ಮಜ್ಜಿಗೆಬೈಲು ಆನಂದ ಶೆಟ್ಟರಿಗೆ ನೀಡಲಾಗುತ್ತಿದೆ.ಸೀತಾನದಿಯವರ 31ನೇ ಸಂಸ್ಮರಣಾ ಸಮಾರಂಭ ಅಕ್ಟೋಬರ್‌ 7ರಂದು ತೆಕ್ಕಟ್ಟೆಯ ಹಯಗ್ರೀವ ಮಂಟಪದಲ್ಲಿ ಯಶಸ್ವಿ ಕಲಾವೃಂದ ತೆಕ್ಕಟ್ಟೆ ಇವರ ಆಶ್ರಯದಲ್ಲಿ ನೆರವೇರಲಿದೆ. 

 ಆನಂದ ಶೆಟ್ಟರು ಪಾರಂಪರಿಕ ವರ್ಚಸ್ಸಿನ ಪ್ರಾತಿನಿಧಿಕರಾಗಿ ಗುರುತಿಸಿಕೊಂಡವರು.ಸುಮಾರು 72 ವರ್ಷದ ಈ ಹಿರಿಯ ಕಲಾವಿದರು ನಡುಬಡಗಿನ ವೇಷವೈವಿಧ್ಯದಲ್ಲಿ ತನ್ನದೇ ಛಾಪು ಮೂಡಿಸಿ ಸಮಕಾಲಿನ ರಂಗಭೂಮಿಗೆ ಒಗ್ಗಿಕೊಳ್ಳದೆ ಸನಾತನ ಕಲಾಸಾರವನ್ನೇ ಗಂಭೀರವಾಗಿ ಹೀರಿಕೊಂಡ ಶಿಷ್ಟ ಕಲಾವಿದರು.ಡೇರೆ ಮೇಳಗಳ ಹೊಸ ಪ್ರಸಂಗಗಳು ಯಕ್ಷಗಾನಕ್ಕೆ ಲಗ್ಗೆ ಇಟ್ಟಾಗಲೂ ತನ್ನತನದೊಂದಿಗೆ ರಾಜಿ ಮಾಡಿಕೊಳ್ಳದೆ ಮುಂದುವರಿದವರು.ಗತ್ತು ಗಾಂಭೀರ್ಯದ ನಡೆ ಪ್ರೌಢ‌ ಸಾಹಿತ್ಯ ಯಕ್ಷಗಾನೀಯ ಸೊಗಡು ಮೈವೆತ್ತ ಅವರ ವೇಷಗಳಲ್ಲಿ ನಡುತಿಟ್ಟಿನ ಎರಡು ಶೈಲಿಗಳನ್ನು ಗುರುತಿಸಬಹುದಾಗಿದೆ.ಕರ್ಣ, ಜಾಂಬವ, ಭೀಷ್ಮ, ವಿಭೀಷಣ ಮುಂತಾದ ಎರಡನೇ ವೇಷಗಳಲ್ಲಿ ಹಾರಾಡಿ ಶೈಲಿಯ ಛಾಪು , ಸುಧನ್ವ, ಅರ್ಜುನ, ತಾಮ್ರಧ್ವಜ,ಪುಷ್ಕಳ, ದೇವವ್ರತ ಮುಂತಾದ ಪುರುಷ ವೇಷಗಳಲ್ಲಿ ಮಟಪಾಡಿ ಶೈಲಿಯ ಕಿರುಹೆಜ್ಜೆಯನ್ನು ಗುರುತಿಸಬಹುದಾಗಿದೆ.ಬಹುಕಾಲ ಮೊಳಹಳ್ಳಿ ಹೆರಿಯ ನಾಯ್ಕರೊಂದಿಗಿನ ಅವರ ಪುರುಷವೇಷ ಮಂದಾರ್ತಿ ಮೇಳದ ರಂಗಸ್ಥಳವನ್ನು ತುಂಬಿಸಿತ್ತು.

ಐದನೇ ತರಗತಿ ವಿದ್ಯಾಭ್ಯಾಸ ಪಡೆದ ಇವರಿಗೆ ತಂದೆಯೇ ಯಕ್ಷಗಾನದ ಗುರು.ಆ ಕಾಲದಲ್ಲಿ ತಂದೆಗೆ ಹೆಸರುತಂದ ಬಂಡಿಭೀಮ, ಸುಂದರ ರಾವಣ, ವಲಲ ಮುಂತಾದ ಪಾತ್ರಗಳು ಇವರನ್ನು ಯಕ್ಷಗಾನದತ್ತ ಸೆಳೆಯಿತು.ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಗೆಜ್ಜೆ ಕಟ್ಟಿದ ಇವರು ತಂದೆಯೊಂದಿಗೆ ಆಗಿನ ಕೊಡವೂರು ಮೇಳಕ್ಕೆ ಸೇರಿದರು.ಬಳಿಕ ಪೆರ್ಡೂರು ಗೋಳಿಗರಡಿ, ಅಮೃತೇಶ್ವರಿ,ಸಾಲಿಗ್ರಾಮ, ಮಾರಣಕಟ್ಟೆ ಮೇಳ ಸೇರಿ ಬಳಿಕ ದೀರ್ಘ‌ಕಾಲ ಹೆಗ್ಗುಂಜೆ ಭೋಜರಾಜ ಹೆಗ್ಡೆಯವರ ಮಂದಾರ್ತಿ ಮೇಳದಲ್ಲಿ ಸೇವೆ ಸಲ್ಲಿಸಿದ್ದರು.ಜಾನುವಾರುಕಟ್ಟೆ ಭಾಗವತರು,ಮರಿಯಪ್ಪಾಚಾರ್‌,ಉಡುಪಿ, ಬಸವಕೋಡಿ ಶಂಕರ ಗಾಣಿಗ,ಮೊಳಹಳ್ಳಿ ಹೆರಿಯ, ಹೆರಂಜಾಲು ಸುಬ್ಬಣ್ಣ , ಮತ್ಯಾಡಿ ನರಸಿಂಹ ಶೆಟ್ಟಿಯವರ ಒಡನಾಟದ ಮಂದಾರ್ತಿ ಮೇಳದ ತಿರುಗಾಟ ಶೆಟ್ಟರ ಯಕ್ಷಗಾನ ಬದುಕಿನ ಸುವರ್ಣಯುಗ.ಪೆರ್ಡೂರು ಮೇಳದಲ್ಲಿ ನಗರ ಜಗನ್ನಾಥ ಶೆಟ್ಟಿ ಮತ್ತು ಐರೋಡಿ ಗೋವಿಂದಪ್ಪನವರೊಂದಿಗಿನ ಪೌರಾಣಿಕ ಪ್ರಸಂಗದ ಇವರ ವೇಷಗಳು ಜನಮನ್ನಣೆ ಪಡೆದಿದ್ದವು.ಬಯಲಾಟದ ಜೋಡಾಟದಲ್ಲಿ ಮಂಡಿ ಹಾಕುವುದರಲ್ಲಿ ಇವರನ್ನು ಸೋಲಿಸುವವರೇ ವಿರಳವಾಗಿತ್ತು.ಸುಮಾರು 50 ವರ್ಷ ಬಡಗುತಿಟ್ಟಿನ ರಂಗಸ್ಥಳವನ್ನು ಶ್ರೀಮಂತಗೊಳಿಸಿದ ಶೆಟ್ಟರು ಅರ್ಜುನ, ಪುಷ್ಕಳ, ಸುಧನ್ವ ಮುಂತಾದ ಪುರುಷವೇಷಗಳಿಗೆ ಜೀವತುಂಬಿ ತಿರುಗಾಟದ ಕೊನೆಯಲ್ಲಿ ಹಲವು ವರ್ಷ ಮಂದಾರ್ತಿ ಮೇಳದಲ್ಲಿ ಎರಡನೇ ವೇಷದಾರಿಯಾಗಿ ಬಡ್ತಿ ಹೊಂದಿ ಕರ್ಣ, ಜಾಂಬವ, ಮಾರ್ತಾಂಡತೇಜ ಮುಂತಾದ ಪ್ರಧಾನ ವೇಷಗಳಿಗೆ ನ್ಯಾಯ ಒದಗಿಸಿದ ಶೆಟ್ಟರು ಸದ್ಯ ಅನಾರೋಗ್ಯದಿಂದ ನಿವೃತ್ತಿ ಹೊಂದಿದ್ದಾರೆ.ಹಾರಾಡಿ ರಾಮ ಗಾಣಿಗ ಪ್ರಶಸ್ತಿ, ಉಡುಪಿ ಯಕ್ಷಗಾನ ಕಲಾರಂಗ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಸನ್ಮಾನಗಳು ಗಳು ಸಂದಿವೆ. 

 ಪ್ರೊ| ಎಸ್‌.ವಿ.ಉದಯ ಕುಮಾರ ಶೆಟ್ಟಿ 

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.