ಚಿಣ್ಣರ ಪ್ರತಿಭೆ ಅನಾವರಣಗೊಳಿಸಿದ ಸಜೀಪದ ಷಣ್ಮುಖೆ 


Team Udayavani, Nov 23, 2018, 6:00 AM IST

5.jpg

ಮಕ್ಕಳಲ್ಲಿ ಎಷ್ಟೋ ಪ್ರತಿಭೆಗಳು ಅಡಗಿರುತ್ತವೆ. ಅಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡಿದಾಗ ಆ ಮಕ್ಕಳು ಸಮಾಜಕ್ಕೆ ಮಾದರಿಯಗುತ್ತಾರೆ ಎಂಬುದಕ್ಕೆ ಸಜೀಪದ ಷಣ್ಮುಖ ಕಲಾ ತರಗತಿಯ ಪುಟಾಣಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಜೀಪದ ಷಣ್ಮುಖೆ ಎಂಬ ಐತಿಹಾಸಿಕ ನಾಟಕವೇ ಸಾಕ್ಷಿ. 

ಸುಮಾರು ಒಂದೂವರೆ ವರ್ಷದಿಂದೀಚೆಗೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರದೊಂದಿಗೆ ಆರಂಭಗೊಂಡ ಶ್ರೀ ಷಣ್ಮುಖ ಕಲಾ ತರಗತಿಯಲ್ಲಿ ಸುಮಾರು 40 ವಿದ್ಯಾರ್ಥಿಗಳು ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದಾರೆ. ಕೊಣಾಜೆ ಸಪ್ತಸ್ವರ ಕಲಾಕೇಂದ್ರದ ಗುರುಗಳಾದ ವಾಸುದೇವ ಕೊಣಾಜೆ ಇವರು ಈ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸುಗಮ ಸಂಗೀತ, ಹಾರ್ಮೋನಿಯಂ, ತಬಲ, ಡೋಲಕ್‌, ಕೀಬೋರ್ಡ್‌ ಮಾತ್ರವಲ್ಲದೆ ನಾಟಕ ಅಭಿನಯ, ಹಾಸ್ಯ ಕಾರ್ಯಕ್ರಮ ನಿರೂಪಣೆ ಹಾಗೂ ಸಂಸ್ಕೃತಿಯನ್ನು ಬೆಳೆಸಲು ಸಂಸ್ಕಾರ ಭಾರತಿಯನ್ನು ಕಲಿಸುತ್ತಿದ್ದಾರೆ. 

ಸುಮಾರು ಒಂದೂವರೆ ವರ್ಷದಿಂದ ಪ್ರತಿ ಆದಿತ್ಯವಾರದಂದು ಸಂಗೀತವನ್ನು ಅಭ್ಯಸಿಸುತ್ತ ಬಂದಿರುವ ಪುಟಾಣಿಗಳು ಹಲವಾರು ಕಡೆಗಳಲ್ಲಿ ಭಕ್ತಿ ರಸಮಂಜರಿ ನೃತ್ಯ ಹಾಗೂ ನಾಟಕ ಪ್ರದರ್ಶನಗಳನ್ನು ನೀಡಿದ್ದು, ದಸರಾ ಸಂದರ್ಭದಲ್ಲಿ ಸುಭಾಷ್‌ನಗರದ ಸುಭಾಸ್‌ ಯುವಕ ಮಂಡಲ ಹಾಗೂ ಶಾರದೋತ್ಸವ ಸಮಿತಿ ಇವರ ಸಹಕಾರದಿಂದ ಸುಭಾಷ್‌ ನಗರದಲ್ಲಿ ನಡೆದ ವಾಸುದೇವ ಕೋಣಾಜೆ ಇವರು ರಚಿಸಿ ನಿರ್ದೇಶನ ನೀಡಿರುವ ಸಜೀಪದ ಷಣ್ಮುಖೆ ಎಂಬ ಐತಿಹಾಸಿಕ ನಾಟಕವನ್ನು ಪ್ರದರ್ಶಿಸಿದರು. 

ನಾಟಕದ ಮೊದಲ ದೃಶ್ಯದಲ್ಲಿ ಮದುವೆಯ ವರ್ಷಾಚರಣೆಯ ಸಂಭ್ರಮದಲ್ಲಿರುವ ನಂದಾವರದ ಅರಸರು ಹಾಗೂ ಅವರ ಧರ್ಮಪತ್ನಿ, ಅರಮನೆಯಲ್ಲಿ ಗಡಿಬಿಡಿಯಲ್ಲಿ ಏಳುತ್ತ ಬೀಳುತ್ತ ಕೆಲಸ ಮಾಡುತ್ತ ನಾಟಕದ ಕಡೆಯವರೆಗೂ ಪ್ರೇಕ್ಷಕರ ಗಮನ ಸೆಳೆಯುವ ಕೆಲಸದ ಆಳು ಬೋಜಣ್ಣನೊಂದಿಗೆ ತಾನು ಮಾಡಿದ ಅಡುಗೆಯನ್ನು ಹೊಗಳುತ್ತಿರುವ ಹಾಸ್ಯ ಪ್ರವೃತ್ತಿಯ ಸುಬ್ರಾಯ ಭಟ್‌ ಮೂರನೇ ದೃಶ್ಯದಲ್ಲಿ ನಂದಾವರ ರಾಜಕುಮಾರನಿಗೆ ಗುಣವಾಗದ ಕಾಯಿಲೆ ಬರುವುದು. ಯಾವುದೇ ಔಷಧ ಮಾಡಿದಾಗಲೂ ಕಾಯಿಲೆ ಗುಣವಾಗದಿದ್ದಾಗ ರಾಜಕುಮಾರನ ಕಾಯಿಲೆಗೆ ಸೂಕ್ತ ಔಷಧ ನೀಡುವವರಿದ್ದರೆ ಬರುವಂತೆ ಅರಸರ ಅಪ್ಪಣೆಯಾಗುತ್ತದೆ. ನಾನಾ ಭಾಷೆಗಳಲ್ಲಿ ಡಂಗೂರ ಸಾರುವ ಡಂಗೂರ ಸಿಂಗ, ಡಂಗೂರದ ಶಬ್ದ ಕೇಳಿ ಔಷಧೋಪಚಾರ ಮಾಡಲು ಮುಂದೆ ಬರುವ ಬಡ ಬ್ರಾಹ್ಮಣ, ಕಾಯಿಲೆಯಿಂದ ನರಳುತ್ತಿರುವ ರಾಜಕುಮಾರನಿಗೆ ಕನಸಿನಲ್ಲಿ ಸರ್ಪವೊಂದು ಕಚ್ಚಿ ನಂಜು ಹೀರಿದಾಗ ರಾಜಕುಮಾರ ಕಾಯಿಲೆಯಿಂದ ಮುಕ್ತನಾಗುವುದು. ನಂಜನ್ನು ಹೀರಿದ ಸರ್ಪ ಸಾವನ್ನಪ್ಪಿದ ಸ್ಥಳದಲ್ಲಿ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ನಿರ್ಮಾಣವಾಗುವಂತಹ ಸಜೀಪ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಐತಿಹಾಸಿಕ ಕಥೆಯನ್ನು ಶ್ರೀ ಷಣ್ಮುಖ ಕಲಾ ತರಗತಿಯ ವಿದ್ಯಾರ್ಥಿಗಳು ಪ್ರಬುದ್ಧವಾಗಿ ಅಭಿನಯಿಸಿದರು. 

 ಜಗದೀಶ ಮಿತ್ತೋಟ 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.